ಸಾಗರ : ಪಾನ್ ಕಾರ್ಡ್ ಅಪ್ಡೇಟ್ ನೆಪದಲ್ಲಿ ವ್ಯಕ್ತಿಯ ಖಾತೆಯಲ್ಲಿದ್ದ 7.25 ಲಕ್ಷ ರೂ ವಂಚನೆ
ಸಾಗರ : ಬ್ಯಾಂಕ್ನಿಂದ ಪಾನ್ ಅಪ್ಡೇಟ್ಗೆ ಬಂದ ವಾಟ್ಸ್ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ. ನಗರದ ಕೆನರಾ ಬ್ಯಾಂಕ್ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್ರ ಮೊಬೈಲ್ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್ಡೇಟ್ ಮಾಡಲು ವಾಟ್ಸ್ಅಪ್ ಸಂದೇಶ…

