Headlines

ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ತೀರ್ಥಹಳ್ಳಿ: ಭಾರತದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಪ್ರಯುಕ್ತ ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ಮಂಗಳವಾರ ರಾಮ ಮಂದಿರದಲ್ಲಿ ರಕ್ತದಾನ  ಕಾರ್ಯಕ್ರಮ ನಡೆಸಿದರು.  ಈ ಶಿಬಿರದಲ್ಲಿ  ಬರೋಬ್ಬರಿ 157 ಯೂನಿಟ್ ರಕ್ತದಾನವಾಗಿದ್ದು 78 ಜನರು  ಮೊದಲ ಬಾರಿ ರಕ್ತದಾನ ಮಾಡಿದ್ದಾರೆ.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ, ಉಪಾಧ್ಯಕ್ಷರಾದ ಗಣೇಶ್ ಬಿಳಕಿ ,ಸುಹಾಸ್ ಶಾಸ್ತ್ರಿ, ರಕ್ಷಿತ್ ಮೇಗರವಳ್ಳಿ, ಕಾರ್ಯದರ್ಶಿಗಳಾದ ಮೇಘರಾಜ್ ಹೊಳಲೂರು,…

Read More

ದಳಪತಿಗಳನ್ನು ಹಾಡಿ ಹೊಗಳಿದ ಸಿ ಎಂ ಇಬ್ರಾಹಿಂ

ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ  ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.‌ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ  ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು. ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ…

Read More

ಭದ್ರಾವತಿ : ಮುಂದಿನ ಜೆಡಿಎಸ್ ಅಭ್ಯರ್ಥಿಯಾಗಿ ಶಾರದ ಅಪ್ಪಾಜಿ ಗೌಡರ ಹೆಸರು ಘೋಷಿಸಿದ ಹೆಚ್.ಡಿ.ಕುಮಾರಸ್ವಾಮಿ

ಭದ್ರಾವತಿ : ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಭದ್ರಾವತಿಯ ಮುಂದಿನವಿಧಾನ ಸಭೆಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅಪ್ಪಾಜಿ ಗೌಡರ ಪತ್ನಿ ಶಾರದ ಅಪ್ಪಾಜಿಗೌಡರನ್ನೇ ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅವರು ಭದ್ರಾವತಿ ತಾಲೂಕು ಗೋಣಿಬೀಡುವಿನಲ್ಲಿರುವ ಅಪ್ಪಾಜಿಗೌಡರ ತೋಟದಲ್ಲಿ ಅವರ ಪುಣ್ಯಸ್ಮರಣೆಯ ದಿನದಂದು ಪ್ರತಿಮೆಯನ್ನ ಅನಾವರಣಗೊಳಿಸಿ ಮಾಧ್ಯಮದವರ ಜೊತೆ ಮಾತನಾಡಿದರು. ಭದ್ರಾವತಿಯ ಅಪ್ಪಾಜಿ ಗೌಡರ ಅಭಿಮಾನಿಗಳು ಯಾರನ್ನು ಅಭ್ಯರ್ಥಿಯನ್ನ…

Read More

ಸಾಗರ : ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾ ಪತ್ತೆ

ಸಾಗರ : ತಾಲ್ಲೂಕ್ಕಿನ ವ್ಯಾಪ್ತಿಯ ಕಬ್ಬನದಕೊಪ್ಪ ಗ್ರಾಮದಲ್ಲಿ ವಾಸದ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಕಬ್ಬನದಕೊಪ್ಪ ಗ್ರಾಮದ ಪುಟ್ಟಪ್ಪ ಇವರಿಗೆ ಸೇರಿದ ವಾಸದ ಮನೆಯ ಮೊದಲನೆ ಕೊಠಡಿಯಲ್ಲಿ ಅಕ್ರಮವಾಗಿ ಸುಮಾರು 330 ಗ್ರಾಂ ಹಸಿ ಗಾಂಜಾವನ್ನು ಪತ್ತೆಹಚ್ಚಿ ಸದರಿ ಕೃತ್ಯವು ಎನ್.ಡಿ .ಪಿ. ಎಸ್ ಕಾಯ್ದೆ 1985 ರ ಕಲಂ 8(ಸಿ) ರೀತ್ಯಾ ಉಲ್ಲಂಘನೆ ಹಾಗೂ ಇದೇ ಕಾಯ್ದೆಯ ಕಲಂ 20(b) 20 (ii) (A),25 ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುವ ಕಾರಣ ಮೊಕದ್ದಮೆಯನ್ನು ದಾಖಲಿಸಲಾಯಿತು. …

Read More

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಸವಾರ ಸಾವು:

ಶಿವಮೊಗ್ಗ: ಹೊಳೆಹೊನ್ನೂರು ಸಮೀಪ ಆಗರದಳ್ಳಿ ಸಿದ್ದರ ಕಾಲೊನಿ ಬಳಿ ನಿನ್ನೆ ಸಂಜೆ ಬೈಕ್ ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದ ಪರಿಣಾಮ ಸವಾರ ಸಾವು ಕಂಡ ಘಟನೆ‌ವರದಿಯಾಗಿದೆ. ಚನ್ನಗಿರಿ ತಾಲೂಕಿನ ಚಿಕ್ಕಗಂಗೂರು ನಿವಾಸಿ ಪ್ರದೀಪ್ (33) ಮೃತ ದುರ್ದೃವಿ. ತನ್ನ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಬಂದು ಖಾಸಗಿ ಆಸ್ಪತ್ರಯಲ್ಲಿ ಚರ್ಮದ ಚಿಕಿತ್ಸೆ ಪಡೆದು ಚನ್ನಗಿರಿಗೆ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿದೆ. ಹಿಂಬಂದಿ ಸವಾರನಿಗೆ ಗಂಭೀರ ಗಾಯಗಾಳಾಗಿದ್ದು, ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್ ಪೇಟೆ : ಕಟ್ಟುಕೋವಿಯಿಂದ ಕಾಲು ಕಳೆದುಕೊಂಡ ಯುವಕನ ಸಂಕಷ್ಟ ಕೇಳುವವರಾರು !!??

ರಿಪ್ಪನ್ ಪೇಟೆ : ತನ್ನದಲ್ಲದ ತಪ್ಪಿಗೆ ಕಾಲನ್ನು ಕಳೆದುಕೊಂಡು ಸಂಕಷ್ಟಕೊಳಗಾಗಿರುವ ಯುವಕನ ಗೋಳು ಕೇಳುವರಿಲ್ಲದೇ ಪರಿತಪಿಸುತ್ತಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯತಿಯ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಡಿಸೆಂಬರ್‌ನಲ್ಲಿ ಬೆನವಳ್ಳಿ ಗ್ರಾಮದ ಪ್ರವೀಣ (26) ಎಂಬ ಯುವಕನಿಗೆ ಖಾಸಗಿ ವ್ಯಕ್ತಿಯೋರ್ವ ಗದ್ದೆಯಲ್ಲಿ ಕಟ್ಟಿದ ಕಟ್ಟುಕೋವಿಯಿಂದ ಸಿಡಿದ ಗುಂಡು ಕಾಲಿಗೆ ತಾಗಿ ಈಗ ಕಾಲು ಕಳೆದುಕೊಂಡು ಸಂಕಷ್ಟಕ್ಕೊಳಗಾಗಿ ಜೀವನ ಪರಿಹಾರಕ್ಕಾಗಿ ಬೇರೆಯವರಲ್ಲಿ ಕೈಚಾಚುವ ಪರಿಸ್ಥಿತಿ ಬಂದೊದಗಿದೆ. ಬಡ ಕುಟುಂಬಕ್ಕೆ ಆಸರೆಯಾಗಿದ್ದ ಗಂಡ ಹಾಗೂ…

Read More

ಕರ್ನಾಟಕ ಅಂಡರ್ 19 ಕ್ರಿಕೆಟ್ ತಂಡಕ್ಕೆ ಶಿವಮೊಗ್ಗದ ಇಬ್ಬರಿಗೆ ಅವಕಾಶ

ಶಿವಮೊಗ್ಗ : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 19 ವರ್ಷದೊಳಗಿನ ರಾಜ್ಯ ತಂಡಕ್ಕೆ ಶಿವಮೊಗ್ಗ ವಲಯದ ಮಿಥೇಶ್ ಕುಮಾರ್ ಹಾಗೂ 19 ವರ್ಷದೊಳಗಿನ ಮಹಿಳಾ ರಾಜ್ಯ ತಂಡಕ್ಕೆ ಶಿವಮೊಗ್ಗದ ನಿರ್ಮಿತ ಸಿ ಜೆ ಅವಕಾಶ ಪಡೆದಿದ್ದಾರೆ ಎಂದು ಕೆಎಸ್​ಸಿಎ ಶಿವಮೊಗ್ಗ ವಲಯದ ಸಂಚಾಲಕರಾದ ಡಿ ಎಸ್ ಅರುಣ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಡಿ ಎಸ್ ಅರುಣ್ ಶಿವಮೊಗ್ಗ ವಲಯಕ್ಕೆ ಇದೊಂದು ಹೆಮ್ಮೆಯ ವಿಷಯ. ಹಲವು ವರ್ಷಗಳಿಂದ ಇದ್ದ ಕೊರಗು ಈ ವರ್ಷ ನೀಗಿದೆ….

Read More

ಶಿವಮೊಗ್ಗ: ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಭೀಮರಥ ಶಾಂತಿ ಮತ್ತು ಮಹಾಯಾಗ

ಶಿವಮೊಗ್ಗ : ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಚಾರ ಮಂಚ್ ಹಾಗೂ ಅರ್ಚಕರ ವೃಂದದಿಂದ ಪ್ರಧಾನಿ ಮೋದಿ ಅವರ 71 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭೀಮರಥ ಶಾಂತಿ ಮತ್ತು ಮಹಾಗಣಪತಿ ಯಾಗ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಭಾಪತಿ ಡಿ.ಹೆಚ್.ಶಂಕರ್ ಮೂರ್ತಿ, ಪ್ರಧಾನಿ ಮೋದಿ ಅವರು ಕೊರೋನ ಲಸಿಕೆ ಹಂಚಿಕೆಯನ್ನ ಗುರಿಯಾಗಿ ಇಟ್ಟುಕೊಂಡು ಮುಂದುವರಿದು ಇಂದು ಯಶಸ್ವಿಯಾಗಿ 80 ಕೋಟಿ ಜನರಿಗೆ ಲಸಿಕೆ ನೀಡಿ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಸೆ. 17 ರ ಅವರ ಹುಟ್ಟುಹಬ್ಬದ…

Read More

ಹಣಗೆರೆಕಟ್ಟೆ : ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರಿಂದಲೇ ವಾಹನ ತಪಾಸಣೆ

ತೀರ್ಥಹಳ್ಳಿ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ…

Read More

ಸಚಿವ ಈಶ್ವರಪ್ಪಗೆ ಬಿಜೆಪಿಯಿಂದ ಮಹತ್ವದ ಜವಾಬ್ದಾರಿ

ಶಿವಮೊಗ್ಗ : ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ವಹಿಸಲಾಗಿದೆ.  ದಾವಣಗೆರೆಯ ತ್ರಿಶೂಲ ಕಲಾ ಭವನದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಅಧ್ಯಕ್ಷತೆಯ ಸಭೆಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಸಚಿವ ಈಶ್ವರಪ್ಪನವರಿಗೆ ನೀಡಿ ಅಭಿನಂದಿಸಲಾಯಿತು.  ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿಯನ್ನು ತಮಗೆ ವಹಿಸಿದ ಪಕ್ಷದ ವರಿಷ್ಠರಿಗೆ ಆಭಾರಿಯಾಗಿರುತ್ತೇನೆ. ಪಕ್ಷ…

Read More