ಅಕ್ರಮ ಮರಳು ಸಾಗಿಸುತಿದ್ದ ಲಾರಿ ವಶ – ಚಾಲಕ ಹಾಗೂ ಮಾಲೀಕನ ವಿರುದ್ದ ಪ್ರಕರಣ ದಾಖಲು|illegal-sand-mining

ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿಯನ್ನು ವಶಪಡಿಸಿಕೊಂಡು ಚಾಲಕ ಮತ್ತು ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಹೊಸನಗರದ ಮುಡುಬ ಸೇತುವೆಯಿಂದ ಮರಳನ್ನು ಎತ್ತಿ ಕೆಎ-15 -7188 ಕ್ರಮ ಸಂಖ್ಯೆಯ ಟ್ರಿಪ್ಪರ್ ಲಾರಿಯಲ್ಲಿ 80 ಅಡಿ ಮರಳು ತುಂಬಿಸಿಕೊಂಡು ಬರುವಾಗ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಆಚಾರ್ ಸರ್ಕಲ್ ಬಳಿ ದಾರಿಯನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಮರಳು ಸಾಗಾಣಿಕೆಗೆ ಬೇಕಾದ ಪರವಾನಗಿ ಇಲ್ಲದ ಕಾರಣ ಚಾಲಕ…

Read More

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ ನವದೆಹಲಿ, ಡಿ.26 : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ…

Read More

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ…

Read More

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News ತೀರ್ಥಹಳ್ಳಿ : ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತನೋರ್ವ ಮತ್ತಿಗ ವರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅತ್ತಿಗಾರ ಬೈಲು ಗ್ರಾಮದ ಉಮೇಶ್  ( 55 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು.ಕೈಮರ ಸೊಸೈಟಿ ಹಾಗು…

Read More

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More

ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಜೈಲ್ ನಿಂದ ಜಾಮೀನಿನ ಮೇಲೆ ಬಂದು ಮತ್ತೆ ಧಮ್ಕಿ ಹಾಕಿದ ಯುವಕರು :

ಶಿವಮೊಗ್ಗ : ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವಿನ ಸಂಘರ್ಷ ಇನ್ನು ಮುಂದುವರೆಯುವ ರೀತಿ ಕಾಣುತ್ತಿದೆ. ಕಾರಣ ಭಜರಂಗದಳದ ಯುವಕರು ಎಂದು ಹಿಂಬಾಲಿಸಿ ಕೊಲೆಗೆ ಸಂಚು ಮಾಡಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆ ಹೊಂದಿದ್ದ ಮೂವರು ಹುಡುಗರಲ್ಲಿ ಇಬ್ಬರು ಹುಡುಗರು ಮತ್ತೆ ಪುಂಡಾಟಿಕೆ ಮೆರೆದಿದ್ದಾರೆ. ಈ ಪ್ರಕರಣವನ್ನು ನೋಡುತ್ತಿದ್ದರೆ  ಯಾರೋ ಚಿವುಟಿ ಮಜಾ ತೆಗೆದುಕೊಳ್ಳುತ್ತಿದ್ದಾರಾ ಎಂಬ ಅನುಮಾನ ಸಹ ಹುಟ್ಟಲಾರಂಭಿಸಿದೆ. ಹಿಂದೂ ಕಾರ್ಯಕರ್ತ ಎಂದು ನ್ಯೂ ಮಂಡ್ಲಿಯಲ್ಲಿಯಲ್ಲಿ ಸುಮಂತ್ ನನ್ನ ಹುಡುಕಿಕೊಂಡು ಬಂದು ಆತನ ತಮ್ಮ ಭರತನಿಗೆ ಕೊಲೆ…

Read More

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ ರಿಪ್ಪನ್ ಪೇಟೆ : ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು  ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್ ಪೇಟೆಯ ನೂತನ  ಪಿಎಸ್ಐ ರಾಜುರೆಡ್ಡಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಸ್ತೆ…

Read More

ಶಿವಮೊಗ್ಗ : ಹುಣಸಗೋಡು ಸ್ಪೋಟ ಪ್ರಕರಣ ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ:

ಶಿವಮೊಗ್ಗ : ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ ಭೂಕಂಪದ ಅನುಭವವಾಗಿತ್ತು….

Read More
Exit mobile version