ಮಹಿಳೆಯ ಮಾಂಗಲ್ಯ ಸರ ಅಪಹರಣ

ಮಹಿಳೆಯ ಮಾಂಗಲ್ಯ ಸರ ಅಪಹರಣ ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ…

Read More

ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :

ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso ಅಪ್ರಾಪ್ತೆಯ ಖಾಸಗಿ ಪೋಟೋವನ್ನು ಸ್ಕ್ರೀನ್‌ಶಾಟ್‌ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿದ್ದ ವ್ಯಕ್ತಿಗೆ ಕೋರ್ಟ್‌ ಐದು ವರ್ಷ ಶಿಕ್ಷೆ ನೀಡಿದೆ.  ನ್ಯಾಯಾಧೀಶರಾದ  ಮೋಹನ್ ಜೆ ಎಸ್ ರವರು ದಿನಾಂಕಃ 26-06-2024  ರಂದು ಪ್ರಕರಣದ ಆರೋಪಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 2,50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ, ಶುಶ್ರೂಷಕಿಯರಿಗೆ ವೈದ್ಯರಿಂದ ಮಾನಸಿಕ ಕಿರುಕುಳ : ಗ್ರಾಮ ಪಂಚಾಯಿತಿಗೆ ದೂರು……!!!!!

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ  ಡಾ. ಆಂಜನೇಯರವರು ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶುಶ್ರೂಷಕಿಯರು ಗ್ರಾಮ ಪಂಚಾಯತ್ ನ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ. ಆಸ್ಪತ್ರೆಯ ವೈದ್ಯರು ಹೆಚ್ಚುವರಿ ಕೆಲಸ ನೀಡಿದಾಗ ವಿರೋದ ವ್ಯಕ್ತಪಡಿಸಿದರೆ ಏಕವಚನದಲ್ಲಿ ನಿಂದಿಸುವುದಲ್ಲದೇ ಸಾರ್ವಜನಿಕರ ಸಮ್ಮುಖದಲ್ಲಿ ಅಗೌರವ ಸೂಚಕ ಪದದಲ್ಲಿ ನಿಂದಿಸಿ,ಸಂಬಳ ಹಾಜರಾತಿಗೆ ಸಹಿ ಹಾಕುವುದಿಲ್ಲ ಎಂದು ಬೆದರಿಕೆ ಹಾಕುವ ಮೂಲಕ ಮಾನಸಿಕ ಕಿರುಕುಳ ನೀಡುತಿದ್ದಾರೆ. ಆದ್ದರಿಂದ ಗ್ರಾಮ…

Read More

ಸಾಗರ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|sagara

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ. ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ. ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ. ಅಗ್ನಿಶಾಮಕ…

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್

ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಲ್ಲಿ ಪರಿಚಯವಾಗಿ ನಂತರ ಪ್ರೀತಿಯಾಗಿ ಅಲ್ಲಿಂದ ಮದುವೆಗೆ ಒಪ್ಪದ ಕಾರಣದ ವಿಚಾರವಾಗಿ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಮೂರು ವರ್ಷದ ಹಿಂದೆ  ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಪರಿಚಯವಾಗಿತ್ತು.  ಆ ಪರಿಚಯ  ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಪ್ರೀತಿ ಮನೆಯಲ್ಲಿ ತಿಳಿಯುತ್ತದೆಯೋ ಆಗ…

Read More

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ ಹೊಸನಗರ: ಸತ್ಯ, ಪ್ರಾಮಾಣಿಕತೆ ಹಾಗೂ ಜನಪರ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ತತ್ತ್ವ–ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಬಿಜಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಅಹಿಂಸೆಯೇ ಗಾಂಧೀಜಿಯವರ ಮಹಾಸ್ತ್ರ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಲು ಅಕ್ಟೋಬರ್ 2 ಅನ್ನು ರಾಷ್ಟ್ರದಾದ್ಯಂತ…

Read More

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ ಜನ್ಮದಿನದಂದೇ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಹೌದು ತನ್ನ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಫೈನಲ್ ಇಯರ್ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಹುಟ್ಟುಹಬ್ಬದ ದಿನದಂದೇ ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಚಿದಾನಂದ ಎಂಬ ವಿದ್ಯಾರ್ಥಿ ಇಂದು…

Read More

ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ.  ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು.  ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…

Read More