ಸಿಗಂದೂರು ಸಮೀಪ ರಸ್ತೆ ಅಪಘಾತ : ಓರ್ವನ ಸ್ಥಿತಿ ಗಂಭೀರ

ಸಿಗಂದೂರು ದೇವಸ್ಥಾನದ ಸಮೀಪದ ಕಳಸವಳ್ಳಿ ಗ್ರಾಮದಲ್ಲಿ ಟೆಂಪೋ ಟ್ರಾವಲರ್ ಗಾಡಿಯ ಚಾಲಕನು ವಾಹನ ಚಲಿಸುತ್ತಿದ್ದಾಗ ಫೀಡ್ಸ್ ಬಂದಿರುವ  ಹಿನ್ನಲೆ ನಿಯಂತ್ರಣ ತಪ್ಪಿ ವಾಹನ ಧರೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 11ಈ ವಾಹನದಲ್ಲಿ 10 ಜನ ಪ್ರಯಾಣಿಕರಿದ್ದರು,ನಾಲ್ವರಿಗೆ ಪೆಟ್ಟಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಗಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥ0ಮ ಚಿಕಿತ್ಸೆ ನೀಡಿ,ಸಾಗರದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೆಂಗಳೂರು ಸಮೀಪದ ಬಿಡದಿ ಮೂಲದ ಯಾತ್ರಾರ್ಥಿಗಳು ಈ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Read More

ಅಕ್ಕನ ಬಾಣಂತನಕ್ಕೆ ಹೋದ ಯುವತಿ ಭಾವನಿಂದ ಗರ್ಭಿಣಿ – ಮದುವೆಗೆ ಒಲ್ಲೆ ಎಂದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ |suicide

 ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 21 ವರ್ಷದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕನ ಬಾಣಂತನಕ್ಕೆ ಹೋಗಿದ್ದ ವೇಳೆ ಅಕ್ಕನ ಗಂಡ ಪುಸಲಾಯಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ.ನಂತರ ಎಲ್ಲಾರಿಗೂ ಗೊತ್ತಾದ ನಂತರ ಉಡಾಫೆ ಮಾತನಾಡಿದ ಕಾರಣ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.           [     ಆರೋಪಿ ಪ್ರಶಾಂತ್  ] ಚೋರಡಿಯ ಮರಾಠೀ ಕ್ಯಾಂಪ್ ನಿವಾಸಿಯಾದ ಯುವತಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.ಅದೇ ಮರಾಠಿ…

Read More

ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..!

ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..! ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ. ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಹೈಕೋರ್ಟ್‌ನ ಏಕ ಸದಸ್ಯ ಪೀಠದ ನ್ಯಾ. ನಾಗಪ್ರಸನ್ನ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಂಹಿತೆ 218ರಡಿ ರಾಜ್ಯಪಾಲರು ನೀಡಿದ್ದ…

Read More

ಪ್ರವೇಶ ಪತ್ರ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ಕಾನೂನು ವಿದ್ಯಾರ್ಥಿಗಳು :

ಶಿವಮೊಗ್ಗ : ಕಾನೂನು ವಿದ್ಯಾರ್ಥಿಗಳು ಇಂದು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾನೂನು ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದರ ಬಗ್ಗೆ ಪ್ರಕರಣ ನ್ಯಾಯಾಲಯದಲ್ಲಿದ್ದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಂದು 20 ವಿದ್ಯಾರ್ಥಿಗಳು ಪರೀಕ್ಷೆ ವಿರೋಧಿಸಿ ಪ್ರತಿಭಟಿಸಿದರು. ಎಟಿಎನ್ ಸಿಸಿ ಕಾಲೇಜಿನ ಕಾನೂನು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪರೀಕ್ಷೆಗೆ ಅವಕಾಶವಿದೆ. ಆದರೆ ಈ ಆನ್ ಲೈನ್ ನ್ನ ವಿಶ್ವವಿದ್ಯಾಲಯ ರದ್ದುಪಡಿಸಿ ಆಫ್ ಲೈನ್ ನಲ್ಲಿ ಮಾತ್ರ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದೆ. ಪಿಯುಸಿ ನಂತರದ ಕಾನೂನು…

Read More

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ತೋಟೋತ್ಪನ್ನ ಬೆಳೆಗಳ ಅಭಿವೃದ್ಧಿ,ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗಣಪತಿ ಹೆಚ್ ಎಸ್ ಮತ್ತು ಉಪಾಧ್ಯಕ್ಷರಾಗಿ ದೇವೇಂದ್ರ ಕೆ ಎನ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಗುರುವಾರ ನಡೆದ ಸಭೆಯಲ್ಲಿ ತೋಟೋತ್ಪನ್ನ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯರೂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಗಣಪತಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಕಲ್ಲೂರು ಗ್ರಾಮದ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More

ಡ್ರಾಪ್ ಕೇಳುವ ನೆಪದಲ್ಲಿ ಸಿನಿಮೀಯ ಶೈಲಿಯ ಬೈಕ್ ಕಳ್ಳತನ :

ಡ್ರಾಪ್ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ವಂಚಿಸಿ ಬೈಕ್ ಕಳ್ಳತನ ಮಾಡಿರುವ ಘಟನೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸಂಭವಿಸಿದೆ. ಬಸ್ ಚಾಲಕ ವೃತ್ತಿ ಮಾಡುವ ರಮೇಶ್ ಸ್ನೇಹಿತನ ಬಜಾಜ್ ಪಲ್ಸರ್ ಬೈಕ್ ಪಡೆದುಕೊಂಡು, ಚೋರಡಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಸುಮಾರು 25 ವರ್ಷದ ಯುವಕನೊಬ್ಬ ಡ್ರಾಪ್ ಕೇಳಿದ್ದಾನೆ. ಅದೇ ಯುವಕ ರಮೇಶ್ ಅವರು ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಕದ್ದು ಪರಾರಿಯಾಗಿದ್ದಾನೆ. ರಮೇಶ್ ಅವರು ಬಸ್ ಚಾಲಕ ವೃತ್ತಿ ಮಾಡುತ್ತಿದ್ದಾರೆ. ತುರ್ತು ಕೆಲಸ ಇದ್ದ ಕಾರಣ ಚೋರಡಿಯಿಂದ ತಮ್ಮ ಸಂಬಂಧಿಯೊಬ್ಬರ…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More

ಹೈಕಮಾಂಡ್ ನಿಂದ ಯಾವುದೇ ಒತ್ತಡ ಇಲ್ಲ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ:ಹಂಗಾಮಿ ಸಿಎಂ ಬಿ ಎಸ್ ವೈ

ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು…

Read More

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಬುಕ್ಕಿವರೆ ಗ್ರಾಮದ ಬಳಿಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬುಕ್ಕಿವರೆ ಸಮೀಪ ತಿರುವಿನಲ್ಲಿ ಶಿವಮೊಗ್ಗ ಮೂಲದ ಕುಟುಂಬದವರು ಪ್ರಯಾಣಿಸುತಿದ್ದ ಕಾರು ಹಾಗೂ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ…

Read More