Headlines

ರೈಲಿಗೆ ಸಿಲುಕಿ 30ಕ್ಕೂ ಹೆಚ್ಚು ಕುರಿಗಳು ಸಾವು :

ಭದ್ರಾವತಿ ನಗರದ ಅಪ್ಪಾಜಿ ಗೌಡ ಪೆಟ್ರೋಲ್ ಪಂಪ್ ಹಿಂಭಾಗದಲ್ಲಿರುವ ರೈಲ್ವೆ ಹಳಿಯಲ್ಲಿ 30 ಕ್ಕೂ ಹೆಚ್ಚು ಕುರಿಗಳ ಮಾರಣ ಹೋಮ ನಡೆದಿದೆ. ರೈಲಿಗೆ ಸಿಲುಕಿ ಕುರಿಗಳು ಸಾವನ್ನಪ್ಪಿವೆ. ತಾಳಗುಪ್ಪ ಮೈಸೂರು ರೈಲು ಬರುವ ವೇಳೆ ಹಳಿ ದಾಟುವಾಗ ಕುರಿಗಳ ಮೇಲೆ ರೈಲು ಹರಿದಿದೆ. 30ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲಿಯೇ ಸತ್ತಿದ್ದು, ಕೆಲ ಕುರಿಗಳು ಜೀವನ್ಮರಣಗಳ ನಡುವೆ ಬಿದ್ದು ಒದ್ದಾಡುತ್ತಿದ್ದವು. ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಎಕ್ಸಪ್ರೆಸ್ ರೈಲಿಗೆ ಕುರಿಗಳು ಸಿಲುಕಿವೆ.ಹಾವೇರಿ ಸವಣೂರಿನ ವ್ಯಕ್ತಿಯೋರ್ವರಿಗೆ ಈ ಕುರಿಗಳು  ಸೇರಿದ್ದು ಎನ್ನಲಾಗಿದೆ.

Read More

ಮಾದಕ ವಸ್ತುಗಳ ನಿಗ್ರಹದ ಬಗ್ಗೆ ಗೃಹಸಚಿವರಿಂದ ಸಭೆ :

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾದಕ ವಸ್ತುಗಳ ನಿಗ್ರಹದ ಬಗ್ಗೆ ಸಭೆ ನಡೆಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.ಮಾದಕ ವಸ್ತುಗಳ ಮಾಫಿಯಾ ವಿರುದ್ಧ ಕಾರ್ಯಕ್ರಮ ಯೋಜನೆ ರೂಪಿಸುವುದು, ಬಗರ್ ಹುಕುಂ ಜಾಗದಲ್ಲಿ ಗಾಂಜಾ ಬೆಳೆಸುವುದನ್ನ ನಿಯಂತ್ರಿಸುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮಾದಕ ವಸ್ತುಗಳ ದಾಳಿ ವಿಚಾರವನ್ನ‌ ಪೊಲೀಸ್ ಇಲಾಖೆಯಿಂದಲೇ ಲೀಕ್ ಆಗುವುದರಿಂದ  ಮಾದಕ ವಸ್ತು ಮಾರುವವನು ಎಚ್ಚರಗೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಭೆಯಲ್ಲಿ ಕೇಳಿಬಂದಿತು. ಈ ಬಗ್ಗೆ ಪ್ರತಿಕ್ರಿಯಿಸಿದ…

Read More

ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ಸಮೀಪದ ಮುಡುಬ ಬಳಿ ಸ್ವಿಫ್ಟ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತರೀಕೆರೆ ನಿವಾಸಿ ವಕೀಲರಾದ ಸಂಪತ್ ಕುಮಾರ್ (50) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಡುಬಾ ಹತ್ತಿರದ ತಿರುವಿನಲ್ಲಿ ಅತೀ ವೇಗದಿಂದ ಚಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಜ಼ೈರ್ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ತೋಟಕ್ಕೆ ಹಾರಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಟ್ಟಿದ್ದಾರೆ. ಸಂಪತ್ ಕುಮಾರ್ ರವರ ಮಗನಿಗೆ ಪಡುಬಿದ್ರೆ ಸಮೀಪದ ಆಳ್ವಾಸ್ ಕಾಲೇಜಿನಲ್ಲಿ ದಾಖಲಾತಿ ಮಾಡಿಸಿ ಹಿಂದಿರುಗುತ್ತಿರುವಾಗ ಈ ಘಟನೆ…

Read More

ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಪಟ್ಟಣದಲ್ಲಿ ಈ ಬಾರಿ ಅನೇಕ ವಿದ್ಯಾರ್ಥಿಗಳು ಸಾಧನೆ ಮಾಡಿ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಆಡಳಿತವು ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್ ನಲ್ಲಿ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ವಿದ್ಯಾರ್ಥಿಗಳಿಗೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರರವರ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮ ದಲ್ಲಿ ಸುಮಾರು 60 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಒಂದು ಲಕ್ಷ ಐವತ್ತಾರು…

Read More

ಮಾಸ್ತಿಕಟ್ಟೆ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ :

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಯಡೂರು ಗ್ರಾಮದ ಮೇಕೇರಿಯಲ್ಲಿ ಈಚರ್ ಲಾರಿಯೊಂದು ಕೆಎಸ್ಆರ್ ಟಿಸಿ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮತ್ತು ಹಲವು ಕಾಲೇಜ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈಚರ್  ಲಾರಿಯು ಕುಂದಾಪುರದಿಂದ ಶಿವಮೊಗ್ಗಕ್ಕೆ ಇಟ್ಟಿಗೆಯನ್ನು ತುಂಬಿಸಿಕೊಂಡು ಹೋಗುತ್ತಿತ್ತು.ಕೆ ಎಸ್ ಆರ್ ಟಿ ಸಿ ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತಿತ್ತು.ಈ ಸಂಧರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಅಪಘಾತದಿಂದ…

Read More

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : 20 ಕ್ಕೂ ಹೆಚ್ಚು ಜನರಿಗೆ ಗಾಯ

ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿ ಘಟನೆ ಸಂಭವಿಸಿದೆ.  KSRTC ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು. ತೋಟದಕೆರೆ ಬಳಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. KSRTC BUS ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ….

Read More

ಮದ್ಯಪಾನ ಮಾಡಬೇಡಿ ಎಂಬ ಪತ್ನಿಯ ಬುದ್ಧಿಮಾತಿಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

ವಿಪರೀತ ಕುಡಿತದ ದಾಸನಾಗಿದ್ದ ಪತಿಗೆ ಪತ್ನಿ ಬುದ್ದಿ ಮಾತು ಹೇಳಿದ್ದಾಳೆ. ಇದನ್ನೆ ಮನಸ್ಸಿಗೆ ಹಚ್ಚಿಕೊಂಡ ಪತಿರಾಯ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾಗರ ತಾಲೂಕಿನ ಅಡೂರು ಗ್ರಾಮದ 40 ವರ್ಷದ ಸುಬ್ರಹ್ಮಣ್ಯನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,ಈ ಸಂಬಂಧ ಮೃತನ ಪತ್ನಿ ಯಶೋಧ ಸಾಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.  ಯಶೋಧ ತನ್ನ ಗಂಡ ಸುಬ್ರಹ್ಮಣ್ಯನಿಗೆ ಕುಡಿಯೋದನ್ನು ಬಿಟ್ಟು ಬಿಡು ಎಂದು ಬುದ್ದಿ ಮಾತು ಹೇಳಿದ್ದಾಳೆ.ಪತ್ನಿ ಬುದ್ದಿ ಮಾತಿಗೆ ಮನನೊಂದ ಸುಬ್ರಹ್ಮಣ್ಯ, ಮನೆಯಲ್ಲಿ ಯಾರು…

Read More

ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ಏನೆಲ್ಲಾ ಇರಲಿದೆ ಗೊತ್ತಾ…??? ಈ ಸುದ್ದಿ ನೋಡಿ

ಸಕ್ರೆಬೈಲು ಆನೆ ಬಿಡಾರದ ತುಂಗಾ ಹಿನ್ನೀರಿನಲ್ಲಿ ಜಂಗಲ್ ರೇಸಾರ್ಟ್ ವತಿಯಿಂದ ಇಂದು ಬೋಟ್ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಸಂಸದ ಬಿ.ವೈ.ರಾಘವೇಂದ್ರ ರವರು ನೂತನ ಬೋಟ್ ಗೆ ಚಾಲನೆ ನೀಡಿದರು. ನಂತರ ಸಂಸದರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಂಗಲ್ ರೇಸಾರ್ಟ್ ನ ನಿರ್ದೆಶಕ ರಾಜೇಶ್ ಕಾಮತ್ ಸೇರಿದಂತೆ ಇತರರು ಬೋಟ್ ನಲ್ಲಿ ವಿಹರಿಸಿದರು. ನಂತರ ಮಾತನಾಡಿದ ಸಂಸದರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಬೋಟಿಂಗ್ ವ್ಯವಸ್ಥೆ ಉಪಯುಕ್ತವಾಗಲಿದೆ ಎಂದರು.  ಸಕ್ರೆಬೈಲು…

Read More

ಬಿದರಹಳ್ಳಿ ಶಾಲೆಗೆ ಜಿಲ್ಲಾ ಮಟ್ಟದ ಸ್ವಚ್ಚತಾ ಶಾಲಾ ಪ್ರಶಸ್ತಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈ ಬಾರಿಯ ಶಿವಮೊಗ್ಗ ಜಿಲ್ಲಾ ಮಟ್ಟದ “ಸ್ವಚ್ಚತಾ ವಿದ್ಯಾಲಯ” ಪ್ರಶಸ್ತಿ ಲಭಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರು ತಮ್ಮ ಕಛೇರಿಯಲ್ಲಿ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೇವೆಂದ್ರಪ್ಪರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂಧರ್ಭದಲ್ಲಿ ಬಿದರಹಳ್ಳಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪದ್ಮರಾಜ್, ಶಾಲೆಯ ಶಿಕ್ಷಕರಾದ ಮಧುಕುಮಾರ್,ದಿನೇಶ್ ರವರು ಉಪಸ್ಥಿತರಿದ್ದರು. ಬಿದರಹಳ್ಳಿ ಶಾಲೆಯ ಹಿನ್ನೋಟ :…

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ NIA

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಮತ್ತೆ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ಎನ್​ಐಎ ತಂಡ ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳನ್ನೊಳಗೊಂಡ ತಂಡ ಇಂದು ಬೆಳಗ್ಗೆ ಐದು ಗಂಟೆಯಿಂದ ತನಿಖೆ ಆರಂಭಿಸಿದ್ದು, ಜಿಲ್ಲೆಯ 18 ಕಡೆಗಳಲ್ಲಿ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಮುಂಜಾನೆಯಿಂದ ನಿರಂತರವಾಗಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ…

Read More