Headlines

ರಿಪ್ಪನ್ ಪೇಟೆ : ಕಳಪೆ ಚರಂಡಿ ಕಾಮಗಾರಿ,ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬರುವೆ ಶಾಲೆಯ ಮುಂಭಾಗದ ರಸ್ತೆ

ರಿಪ್ಪನ್ ಪೇಟೆ: ಇಲ್ಲಿನ ಚೌಡೇಶ್ವರಿ ಬೀದಿಯ ಬರುವೆ ಶಾಲೆಯ ಮುಂಭಾಗ 2018 ರಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಿರ್ಮಿಸಿದ್ದ ಪ್ರವಾಹ ನಿಯಂತ್ರಣ ಕಾಲುವೆಯ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಿರ್ಮಿಸಿದ್ದ ಅಷ್ಟು ಚರಂಡಿಯು ಕುಸಿದು ಮುಚ್ಚಿ ಹೋಗಿದ್ದು ಈ ರಸ್ತೆಯು ಅಪಾಯಕ್ಕೆ ಆಹ್ವಾನ ಕೊಡುತ್ತಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅನುದಾನದದಡಿ  ಲಕ್ಷಾಂತರ ವೆಚ್ಚದಲ್ಲಿ ಕೈಗೊಂಡ ಪ್ರವಾಹ ನಿಯಂತ್ರಣ ಚರಂಡಿ ನಿರ್ಮಾಣ ಕಾಮಗಾರಿ ಕಳಪೆಯಾಗಿ ಮುಚ್ಚಿ ಹೋಗಿದೆ.ಈ…

Read More

ಪ್ರೀತಿಸಿ ವಂಚನೆ : ಗರ್ಭವತಿಯಾಗಿದ್ದ ಯುವತಿ ಹಾಗೂ ಗರ್ಭದಲ್ಲಿದ್ದ ಏಳು ತಿಂಗಳ ಮಗು ಸಾವು

ಶಿವಮೊಗ್ಗ:ಯುವಕನೊಬ್ಬ ಪ್ರೀತಿಯ ಹೆಸರಲ್ಲಿ ಮೋಸ ಮಾಡಿದ ಕಾರಣ ಮುಗ್ಧ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಬದುಕಿ ಬಾಳಬೇಕಾಗಿದ್ದ ಯುವತಿಯು ಮದುವೆಗೆ ಮೊದಲೇ ಗರ್ಭವತಿಯಾಗಿ ಮಗುವಿನೊಂದಿಗೆ ತಾಯಿಯೂ ಅಸುನೀಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಕುಂಸಿಯ ಅಶ್ವಿನಿಗೆ ಭದ್ರಾವತಿ ಮೂಲದ ಬಸವರಾಜ್ ಎಂಬ ಯುವಕನೊಂದಿಗೆ ಪರಿಚಯವಾಗಿ ಇಬ್ಬರಲ್ಲೂ ಪ್ರೇಮಾಂಕುರವಾಗುತ್ತದೆ.ನಂತರ ಬಸವರಾಜ್ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿದ್ದನು. ಮನೆಯಲ್ಲಿ ತಾನು ಗರ್ಭವತಿ ಎಂದು ಹೇಳಿಕೊಳ್ಳದ ಅಶ್ವಿನಿ ಹೊಟ್ಟೆ ಮುಂದೆ ಬಂದಿರುವುದು ಗ್ಯಾಸ್ಟ್ರಿಕ್ ನಿಂದ ಎಂದು ಸಾಗು ಹಾಕಿದ್ದಳು. ಏಳು…

Read More

ಕ್ಷುಲ್ಲಕ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗ, ಕೋಪದಲ್ಲಿ ಕೋಲಿನಿಂದ  ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ,ಕುಡಿದು ಬರುತ್ತಿದ್ದ ತಂದೆಯನ್ನು ಮಗ ಪ್ರಶ್ನಿಸಿದಾಗ ತಂದೆ ಮತ್ತು ಮಗನ ಮಧ್ಯ ಗಲಾಟೆಯಾಗಿದೆ. ಕೋಪದಲ್ಲಿ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದ ಆರೋಪಿಯ ತಂದೆ ಮೃತಪಟ್ಟಿದ್ದಾರೆ. ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು ಜೊತೆ…

Read More

ರಿಪ್ಪನ್ ಪೇಟೆ : 54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರ

ರಿಪ್ಪನ್ ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿ ರಿಪ್ಪನ್ ಪೇಟೆ ವತಿಯಿಂದ  54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಕೊರೋನಾ ಲಸಿಕಾ ಶಿಬಿರವನ್ನು  ನಡೆಸಲಾಯಿತು. ಇಂದು ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಭಾಭವನದ ಆವರಣ ದಲ್ಲಿ 18 ವರ್ಷ ಮೇಲ್ಪಟ್ಟವರಿಗೆ 250 ಲಸಿಕೆ  ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಶ್ರೀ ಸುರೇಶ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಆರೋಗ್ಯಾಧಿಕಾರಿ ಶ್ರೀ ಅನಿಲ್ ಕುಮಾರ್, ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ…

Read More

ಹೊಸ ಶಿಕ್ಷಣ ನೀತಿಯನ್ನು ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಲಿ : ಕಿಮ್ಮನೆ ರತ್ನಾಕರ್

ಶಿವಮೊಗ್ಗ : ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚಿಸಿ ನಂತರ ಜಾರಿಗೆ ತರಬೇಕೆಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಪ್ರೆಸ್ ಟ್ರಸ್ಟ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಆಗಲಿದೆ ಎಂದರು. ಒಂದು ವರ್ಷ ತಡವಾಗಿಯಾದರೂ ಜಾರಿಗೆ ತಂದರೂ ಪರವಾಗಿಲ್ಲ. ಆದರೆ ಶಿಕ್ಷಣ ನೀತಿಯನ್ನ ಸಾರ್ವಜನಿಕ ಚರ್ಚೆಗೆ ತಂದು ಜಾರಿಗೊಳಿಸಬೇಕೆಂದು…

Read More

ಯಶಸ್ವಿನಿ ಯೋಜನೆಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿಗಳಿಗೆ ರೈತ ಸಂಘದಿಂದ ಮನವಿ:

ಶಿವಮೊಗ್ಗ: ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪರವರು ಇಂದು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಯಿಯವರನ್ನು ‌ಭೇಟಿ ಮಾಡಿ ಗಾಂಧಿ ಕಥನ ಪುಸ್ತಕವನ್ನು ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ರೈತರ ಆಶಾಕಿರಣವಾದ ಯಶಸ್ವಿನಿ ಯೋಜನೆಯಿಂದ ಸಾಕಷ್ಟು ಬಡ ರೈತರಿಗೆ ಅನುಕೂಲವಾಗಿತ್ತು. ಆದ್ದರಿಂದ ಯಶಸ್ವಿನಿ ಯೋಜನೆಯನ್ನು ಮುಂದುವರಿಸವಂತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಭದ್ರಾ ನದಿಯಿಂದ 12.5TMC ತುಂಗಾ ನದಿಯಿಂದ 17.4TMC ನೀರೆತ್ತಿ ಕೊಡಲು DPR ಆಗಿ ಕಾಮಗಾರಿ ಪ್ರಗತಿಯಲ್ಲಿದೆ, ಆದರೆ ಭದ್ರಾ ಅಣೆಕಟ್ಟು…

Read More

ತೀರ್ಥಹಳ್ಳಿ: ನವವಿವಾಹಿತೆಯನ್ನು ಬಲಿ ತೆಗೆದುಕೊಂಡ ನಾಯಿ ಚೈನ್…! ವಾಕಿಂಗ್ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ತೀರ್ಥಹಳ್ಳಿ: ಸಾಕುನಾಯಿಯನ್ನು ಕರೆದುಕೊಂಡು ವಾಯುವಿಹಾರಕ್ಕೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ನವ ವಿವಾಹಿತೆಯೊಬ್ಬಳು ಕೆರೆಗೆ  ಬಿದ್ದು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕು ಕೈಮರದಲ್ಲಿ ನಡೆದಿದೆ. ನಿಶ್ಮಿತಾ(26) ಮೃತ ವಿವಾಹಿತೆ.ತೀರ್ಥಹಳ್ಳಿಯ ಕೈಮರದ ನಾಗಪ್ಪ ಗೌಡ ಅವರ ಪುತ್ರ ಮಂಜುನಾಥ್ ಅವರ ಪತ್ನಿ ನಿಶ್ಮಿತಾ ಮೂಲತಃ ಹೊಸನಗರ ತಾಲೂಕು ಹುಲಿಕಲ್ ಗ್ರಾಮದವರು. ಕಳೆದ 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಶನಿವಾರ ಬೆಳಿಗ್ಗೆ ಸಾಕುನಾಯಿಯನ್ನು ಕರೆದುಕೊಂಡು ವಾಯು ವಿಹಾರಕ್ಕೆ ಹೋಗಿದ್ದಾಳೆ. ಈ ವೇಳೆ ಕರೆದಂಡೆ ಮೇಲೆ ಹೋಗುವಾಗ ನಾಯಿ ಚೈನ್ ಎಳೆದು ಓಡಿದೆ….

Read More

ಶಿವಮೊಗ್ಗ: ಅಕ್ರಮ ಗಾಂಜಾ ಮಾರಾಟ ಜಾಲ ಪತ್ತೆ,ಮೂವರು ಆರೋಪಿಗಳು ವಶಕ್ಕೆ :

ಶಿವಮೊಗ್ಗ: ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಈ ಘಟನೆ ಸಂಭವಿಸಿದೆ.  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಪೊಲೀಸರು  ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ. ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ…

Read More

ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ : ಬಿ ವೈ ರಾಘವೇಂದ್ರ

ಶಿವಮೊಗ್ಗ : ನಗರದ ವಿಮಾನ ನಿಲ್ದಾಣದಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ.  ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಟಕ್ಕೆ ನಿರ್ಧರಿಸಲಾಗಿದೆ ಎಂದರು. ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಮುಂಬೈ ಸೇರಿ ಐದು ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ….

Read More

ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ನಿಧನ :

ಕೋಣಂದೂರು : ಇಲ್ಲಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಕಾರ್ಯನಿಮಿತ್ತ ಕಾರ್ ನಲ್ಲಿ ಶಿವಮೊಗ್ಗಕ್ಕೆ ತೆರಳಿ ವಾಪಾಸ್ ಗರ್ತಿಕೆರೆಯ ನಿವಾಸಕ್ಕೆ ಹಿಂದಿರುಗುವಾಗ ಆಯನೂರ್ ಬಳಿ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಕಾರಿನ ಚಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಅಷ್ಟರಲ್ಲೆ ಅವರ ಪ್ರಾಣಪಕ್ಷಿ ಹಾರಿಹೋಗಿದೆ.ಮೃತದೇಹವನ್ನು ಆಂಬುಲೆನ್ಸ್ ಮೂಲಕ ಗರ್ತಿಕೆರೆಯ ಸ್ವ ಗೃಹಕ್ಕೆ ತರಲಾಗುತ್ತಿದೆ. ಕೋಣಂದೂರು ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿ ಮೂಡಿಸಿದ್ದ ಗಣೇಶ್ ಮೂರ್ತಿಯವರ ಅಗಲಿಕೆ ಅವರ ಅಸಂಖ್ಯಾತ…

Read More