ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ : ಬಿ ಕೆ ಸಂಗಮೇಶ್
ಭದ್ರಾವತಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ. ಅಮೂಲ್ಯ ಸೇವೆಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿಂದು ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ…