Headlines

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಟ್ರಾಕ್ಟರ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

ರಿಪ್ಪನ್‌ಪೇಟೆ :ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಇಬ್ಬರು ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಬಂಧಿತ ಅರೋಪಿಗಳು ಆನಂದಪುರದ ದಾಸನಕೊಪ್ಪ ವಾಸಿ ಸಂದೀಪ (30) ಹಾಗೂ ಟ್ರ್ಯಾಕ್ಟರ್‌ ಚಾಲಕ ಹಾವೇರಿ ಜಿಲ್ಲೆಯ ಗುಡ್ಡಪ್ಪ (28) ಎನ್ನಲಾಗಿದೆ.  ಶನಿವಾರದಂದು ಸಾಗರ ರಸ್ತೆಯ ವಡಗೆರೆಯ ವೆಂಕಪ್ಪ ಶೆಟ್ಟಿ ಅವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.  ಈ ಪ್ರಕರಣದ ಪ್ರಮುಖ ಆರೋಪಿ ವಡಗೆರೆ –ಚಂದಾಳದಿಂಬದ ವಾಸಿ ಪ್ರತಾಪ್‌ಸಿಂಗ್‌ ಮಂಗಳವಾರ…

Read More

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು

ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು ಶಿವಮೊಗ್ಗ:ಮಾದೇಶ್ವರ ದೇವಸ್ಥಾನದ ರಸ್ತೆಯ ಮೂಲಕ ವೀರಾಪುರಕ್ಕೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದ  ವೇಳೆ ಗೃಹಿಣಿಯ  ಮಾಂಗಲ್ಯ ಸರವನ್ನು ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಕಿತ್ತು ಪರಾರಿಯಾದ ಘಟನೆ ಭದ್ರಾವತಿಯಿಂದ ವರದಿಯಾಗಿದೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ವಾಸವಾಗಿರುವ  ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹಿರಿಯೂರು ವೀರಾಪುರದ ಹನುಮಂತೇಗೌಡ ಎನ್ನುವವರು  ಬೈಕ್ ನಲ್ಲಿ ಪತ್ನಿ ಜೊತೆ  ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುವಾಗ ಬೈಪಾಸ್ ಬಳಿ ಹನುಮಂತೆ ಗೌಡ…

Read More

HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ

HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ ಹೊಸನಗರ ಹಾಗೂ ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು ಮುಂಜಾನೆ 6:30ಕ್ಕೆ ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ವೀರಶೈವ ಸಂಪ್ರದಾಯದಂತೆ ಹಿಂದೂ ರುದ್ರಭೂಮಿಯಲ್ಲಿ ಜರುಗಲಿದೆ‌. ಸಂತಾಪ : ಕರುಣಾಕರ್ ನಿಧನದ…

Read More

ಜಡಿಮಳೆಗೆ ಕೆಸರುಗದ್ದೆಯಾದ ರಸ್ತೆ: ಭತ್ತ ನಾಟಿ ಮಾಡಿ ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು|Hosanagar News

ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಗ್ರಾಮದ ಮಹಿಳೆಯರು, ಸಮಸ್ಯೆ ಬಗೆಹರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಕೆರೆಗದ್ದೆಗೆ ತೆರಳಲು ಸರಿಯಾದ ರಸ್ತೆ ಸೌಕರ್ಯ ಇಲ್ಲದೆ, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಹಿಳೆಯರು ಸೇರಿ ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ….

Read More

ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ

ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಶಿವಮೊಗ್ಗ , ಫೆ. 6: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಫೆ. 6 ರಂದು ಭಾಗಿಯಾಗಿದ್ದಾರೆ. ಗಂಗಾ, ಯುಮುನಾ, ಸರಸ್ವತಿ ಸಂಗಮ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಪೋಟೋ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಕುಮಾರ್ ಬಂಗಾರಪ್ಪ ಅವರು ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ….

Read More

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!!

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!! ಹೊಸನಗರ : ಅಂದರ್ ಬಾಹರ್ ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣ ವಶಪಡಿಸಿಕೊಂಡಿರುವ ಘಟನೆ ಗೇರುಪುರದಲ್ಲಿ ನಡೆದಿದೆ. ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಗೂ…

Read More

ಹೊಸನಗರದ ದಕ್ಷ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ:

ಹೊಸನಗರ :- ತಾಲ್ಲೂಕಿನಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ‌ ಹೆಸರಾಗಿರುವ ಪಿ.ಎಸ್.ಐ ರಾಜೇಂದ್ರನಾಯ್ಕ್ ರವರನ್ನು ಯಾವುದೇ ಕಾರಣಕ್ಕೂ ವರ್ಗಾಯಿಸಬಾರದು ಎಂದು ಸಾರ್ವಜನಿಕರಿಂದ ತಾಲ್ಲೂಕು ದಂಡಾಧಿಕಾರಿ (ತಹಶಿಲ್ದಾರ್) ಮೂಲಕ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕರಿಂದ ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ರವರಿಗೆ ಸಲ್ಲಿಸಿದ ಮನವಿಯಲ್ಲಿ ತಾಲ್ಲೂಕಿನಾಧ್ಯಂತ ಮರಳು ಮಾಫಿಯವಾಗಲಿ, ಡ್ರಕ್ಸ್ ಮಾಫಿಯಾ, ಹೆಣ್ಣುಮಕ್ಕಳಿಗೆ ಕೆಲಸದ ಆಮಿಷ ತೋರಿಸಿ ಅನೈತಿಕ ಸಂಬಂಧಗಳಿಗೆ ಬಳಸುವಂತಹಾ ಕ್ರೂರಿಗಳಿಗೆ, ಕಲ್ಲು ಕೋರೆ, ಗಾಂಜಾ ಸೇರಿದಂತೆ ವಿವಿಧ ರೀತಿಯ ಕಳ್ಳ ದಂದೆಯಲ್ಲಿ ತೊಡಗಿದವರಿಗೆ…

Read More

ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟ 5 ವರ್ಷದ ಪುಟ್ಟ ಮಗು :

ಕುಂಸಿ : ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ 5 ವರ್ಷದ ಪುಟ್ಟ ಮಗುವು ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲ್ಲೂಕಿನ ಮಾಸನಕಟ್ಟೆ ಗ್ರಾಮದಿಂದ ರಸ್ತೆ ಕಾಮಗಾರಿಗೆ ಇಮಾಮ್ ಸಾಬ್ ಕುಟುಂಬ ಕೆಲಸಕ್ಕೆಂದು ಆಯನೂರಿನ ಕುಂಸಿಯ ರೇಚಿಕೊಪ್ಪ ಗ್ರಾಮಕ್ಕೆ ಬಂದಿತ್ತು. ನಿನ್ನೆ ಮಧ್ಯಾಹ್ನ ಮಗುವನ್ನು ಜಮೀನಿನ ಪಕ್ಕದಲ್ಲಿ ಮಲಗಿಸಿ ಪೋಷಕರು ಅಲ್ಲೇ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿದ್ದರು. ಮಗುವಿಗೆ ಬಿಸಿಲು ಆಗಬಾರದೆಂಬ ಉದ್ದೇಶದಿಂದ ಮಗುವಿನ ಮೇಲೆ ಟುವೆಲ್  ಹಾಸಲಾಗಿತ್ತು ಅದೇ…

Read More

ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More