Ripponpete | ಕೃಷಿ ವಿವಿ ವಿದ್ಯಾರ್ಥಿಗಳಿಂದ ಅಣಬೆ ಕೃಷಿ ಪ್ರಾತ್ಯಕ್ಷಿಕೆ

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಸಿಹಿಜೇನಿ ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ ಚಿಕ್ಕಜೇನಿ ಗ್ರಾಮದಲ್ಲಿ ಅಣಬೆ ಕೃಷಿಯ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಹಾಗೂ ಗುಂಪು ಚರ್ಚೆಯನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಸಂಕ್ಷಿಪ್ತವಾಗಿ ಅಣಬೆಯ ಬಗ್ಗೆ ಅಣಬೆಯಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿಧಾನ ಪ್ರಾತ್ಯಕ್ಷಿಕೆಯಲ್ಲಿ ರೈತರು ಮನೆಯಲ್ಲಿಯೇ ಸುಲಭವಾಗಿ ಅಣಬೆ ಬೆಳೆಸಲು ಬೇಕಾದ ಸಾಮಗ್ರಿಗಳ ಬಗ್ಗೆ…

Read More

ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale

ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…

Read More

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…

Read More

Ripponpete | ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ತಮ್ಮಡಿಕೊಪ್ಪ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಮಂಜಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ನಾಯ್ಕ್ ಮತ್ತು ಮಧುಸೂಧನ್ ಇದ್ದರು.

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ‌ ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ‌ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಸಾಗರದ ಬಿಜೆಪಿ ಮುಖಂಡ , ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಅವನ…

Read More

ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.

ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ  ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…

Read More

ಕರ್ನಾಟಕ ದಲ್ಲಿ SSLC ಪರೀಕ್ಷೆ :ಸಾಗರದ ವಿದ್ಯಾರ್ಥಿಗಳಿಗೆ ಶಾಸಕ ಹರತಾಳು ಹಾಲಪ್ಪ ರವರಿಂದ ಮಾಸ್ಕ್ ಕೊಟ್ಟು ‌ಶುಭ ಹಾರೈಕೆ

ಸಾಗರ : ಎಸ್ಎಸ್ಎಲ್ಸಿ‌ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ  ಶುಭ ಹಾರೈಸಿದ ಶಾಸಕರಾದ ಹರತಾಳು ಹಾಲಪ್ಪ ರವರು ಸಾಗರದ ಸರ್ಕಾರಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಿ ಸ್ವಾಗತಿಸಿ ಗಮನ ಸೆಳೆದಿದ್ದಾರೆ. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳು‌ ಅಂಜಿಕೊಳ್ಳುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಆರೋಗ್ಯ ದಲ್ಲಿ ಏರುಪೇರು ಇದ್ದರೆ ಕೂಡಲೆ ಶಾಲೆ ಮುಖ್ಯಸ್ಥರ ಗಮನಕ್ಕೆ ತನ್ನಿ ನಾವು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡುತ್ತೇವೆ ಸಾಗರ ಶಾಸಕ ಹರತಾಳು ಹಾಲಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ನೀಡಿ,…

Read More

ಅರ್ಧ ಲಕ್ಷ ರೂ. ದಾಟಿದ ಕೆಂಪಡಕೆ ದರ, ಹಬ್ಬಕ್ಕೂ ಮುನ್ನ ಅಡಕೆ ಬೆಳೆಗಾರರಿಗೆ ಭರ್ಜರಿ ಗಿಫ್ಟ್‌!

ಶಿವಮೊಗ್ಗ : ನಗರದ ಅಡಿಕೆ ಮಾರುಕಟ್ಟೆಯಲ್ಲಿ ಕೆಂಪಡಿಕೆ ಶುಕ್ರವಾರ ಪ್ರತಿ ಕ್ವಿಂಟಲ್‍ಗೆ ಸರಾಸರಿ ₹51 ಸಾವಿರ ದರ ಕಂಡಿದೆ. ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಅಡಿಕೆ ದರ ಗಗನಮುಖಿಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಹೆಚ್ಚಿದ ದರದಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಹೆಚ್ಚುತ್ತಿದೆ. ಅತೀ ಹೆಚ್ಚು ಅಡಿಕೆ ಬೆಳೆಯುವ ಹೊಸನಗರ,ತೀರ್ಥಹಳ್ಳಿ, ಸಾಗರ ಬಾಗದ ರೈತರ ಮನೆಯಲ್ಲಿ ಹಬ್ಬದ ವಾತಾವರಣವಾಗಿದೆ. ಕಳೆದ ಕೆಲ ತಿಂಗಳಿನಿಂದ ₹40 ಸಾವಿರ ಆಸುಪಾಸಿನಲ್ಲಿ ಅಡಿಕೆ ಖರೀದಿ ಆಗುತ್ತಿತ್ತು. ನಾಲ್ಕು ದಿನಗಳ…

Read More