ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ
ಶಿವಮೊಗ್ಗ : ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಶನಿವಾರ ಆಗಸ್ಟ್ 28 ರಂದು ಅಮಾಯಕ ಶಿಕ್ಷಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಮೊದಲಿನಿಂದಲು ನಾಗರಿಕರು ಸ್ಮಾರ್ಟ್ ಸಿಟಿಯ ನಿಧಾನಗತಿಯ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ ಆದರೆ ಇದರ ಬಗ್ಗೆ ಪಾಲಿಕೆಯಾಗಲೀ ಜಿಲ್ಲಾಡಳಿತವಾಗಲಿ ಉಸ್ತುವಾರಿ ಸಚಿವರಾಗಲಿ ಗಮನ ಹರಿಸಿದಿರುವುದು ನಿಜಕ್ಕೂ ವಿಷಾದನೀಯ,ಈಗಾಗಲೇ ನಗರದ ಮುಖ್ಯ ರಸ್ತೆಯನ್ನು ದ್ವಿಪಥ ರಸ್ತೆ 2 ವರ್ಷದಿಂದ ಅಗೆದು ಹಾಕಿ ಜನರಿಗೆ ತೊಂದರೆಯಾಗುವಂತೆ ಮಾಡಲಾಗಿದೆ ಎಂಜಿನಿಯರ್ ಮತ್ತು ಗುತ್ತಿಗೆದಾರರು…