ಮಾಸ್ತಿಕಟ್ಟೆ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ :
ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಯಡೂರು ಗ್ರಾಮದ ಮೇಕೇರಿಯಲ್ಲಿ ಈಚರ್ ಲಾರಿಯೊಂದು ಕೆಎಸ್ಆರ್ ಟಿಸಿ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮತ್ತು ಹಲವು ಕಾಲೇಜ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈಚರ್ ಲಾರಿಯು ಕುಂದಾಪುರದಿಂದ ಶಿವಮೊಗ್ಗಕ್ಕೆ ಇಟ್ಟಿಗೆಯನ್ನು ತುಂಬಿಸಿಕೊಂಡು ಹೋಗುತ್ತಿತ್ತು.ಕೆ ಎಸ್ ಆರ್ ಟಿ ಸಿ ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತಿತ್ತು.ಈ ಸಂಧರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಅಪಘಾತದಿಂದ…