Headlines

ಗೋಡೆ ಕೊರೆದು ಚಿನ್ನದ ಅಂಗಡಿಯಿಂದ 1 ಕೋಟಿ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಭದ್ರಾವತಿ ನಗರದ ಸರ್ಕಾರಿ ಆಸ್ಪತ್ರೆ ಸಮೀಪ ಇರುವ ಎಸ್​ಎಸ್​ ಜ್ಯುವೆಲರ್ಸ್​ನಲ್ಲಿ ಸುಮಾರು 1ಕೋಟಿ 34 ಲಕ್ಷ 73 ಸಾವಿರ ರೂ  ಮೌಲ್ಯದ ಚಿನ್ನ,ಬೆಳ್ಳಿ,ಹಾಗೂ ನಗದು ಕಳ್ಳತನವಾಗಿದೆ.ಶನಿವಾರ ರಾತ್ರಿ ಈ ಘಟನೆ ನಡೆದಿದೆ.  ಎಸ್ ಎಸ್ ಜ್ಯುವೆಲ್ಲರ್ಸ್ ಅಂಗಡಿಯ ಹಿಂಬದಿಯಲ್ಲಿ ಕನ್ಸರ್​ವೆನ್ಸಿ ಇದ್ದು ಅಂಗಡಿಯ ಒಳಭಾಗದಲ್ಲಿ ಮನೆಯ ಮಾದರಿಯಲ್ಲಿದ್ದು, ಅಲ್ಲಿ ಬಳಕೆ ಮಾಡದ ಕೆಲ ರೂಮ್​ಗಳಿತ್ತು.ಕಳೆದೊಂದು ವಾರದಿಂದ ಸಂಪೂರ್ಣವಾಗಿ ವಾಚ್ ಮಾಡಿದ ಕಳ್ಳರು ಹಿಂದಿನ ದಿನ ಕನ್ನ ಹಾಕಲು ಬೇಕಿರುವ ಹ್ಯಾಮರ್​, ಡ್ರಿಲ್ಲರ್​, ರಾಡ್​, ಗ್ಯಾಸ್​ ಕಟ್ಟರ್, ಹೀಗೆ ಟೂಲ್ಸ್​ಗಳನ್ನು…

Read More

ಗಾಂಜಾ ಮಾರುತ್ತಿದ್ದ ಯುವಕನ ಬಂಧನ

ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ರಿಪ್ಪನ್‌ಪೇಟೆ : ನಿವೃತ್ತ ಎಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯ ಬೀಳ್ಕೊಡುಗೆ |ASI

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 30 ವರ್ಷಗಳಲ್ಲಿ ಭದ್ರಾವತಿ ,ಶಿವಮೊಗ್ಗ ಮತ್ತು ರಿಪ್ಪನ್‌ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಗಣಪತಿ ಎಂ ರವರನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಶಿವಾನಂದ ಕೋಳಿ ಮತ್ತು ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬೀಳ್ಕೊಟ್ಟರು. ನಂತರ ಮಾತನಾಡಿದ ನಿವೃತ ಎ ಎಸ್ ಐ ಗಣಪತಿ ಎಂ 30…

Read More

24 ಗಂಟೆಯಲ್ಲಿ ಕಿಡ್ನಾಪ್ ಪ್ರಕರಣ ಬೇಧಿಸಿದ ಪೊಲೀಸರು : ಭದ್ರಾವತಿಯಲ್ಲಿ ಅಪಹರಣ – ಸಾಗರದಲ್ಲಿ ಆರೋಪಿಗಳು|crime news

ಅಪ್ರಾಪ್ತ ಬಾಲಕನನ್ನ ಅಪಹರಿಸಿ ಹಣದ ಬೇಡಿಕೆ ಇಟ್ಟ ಪ್ರಕರಣವನ್ನ 24 ಗಂಟೆಯಲ್ಲಿ ಬೇಧಿಸಿದ ಭದ್ರಾವತಿ ನ್ಯೂ ಟೌನ್ ಪೊಲೀಸರು ಐವರು ಆರೋಪಿಯನ್ನ ಬಂಧಿಸಿದ್ದಾರೆ. ಓರ್ವನ ಬಂಧನಕ್ಕಾಗಿ ಭರ್ಜರಿ ಬಲೆಯನ್ನೇ ಹೆಣೆದಿದ್ದಾರೆ. ಘಟನೆಯ ಹಿನ್ನಲೆ: ಭದ್ರಾವತಿ ಅಂಡರ್ ಬ್ರಿಡ್ಜ್ ಬಳಿಯಿರುವ ಎಲ್ಐಸಿ ಕಚೇರಿ ಬಳಿ ಎಳನೀರು ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಬಳಿ ಬಂದ ಅಪರಿಚತನೋರ್ವ ನನ್ನ ಬಳಿ ಹಣ ಖಾಲಿಯಾಗಿದೆ. ಫೋನ್ ಪೇ ನೂ ಇಲ್ಲ. ನಾಲ್ಕು ಎಳನೀರು ಕೊಚ್ಚಿಕೊಂಡು 100 ಮೀಟರ್ ದೂರದಲ್ಲಿರುವ ವ್ಯಾನ್ ನಲ್ಲಿರುವ ಸ್ನೇಹಿತನ…

Read More

ಹೊಬುಜಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ|hombuja

ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು –  ಆರಗ ಜ್ಞಾನೇಂದ್ರ   ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ  ಹೊಂಬುಜ ಕ್ಷೇತ್ರದ ಸರ್ವಾಂಗಿಣ  ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ  ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಚಾಲನೆ ನೀಡಿ ಅವರು ಮಾತನಾಡಿದರು. ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ…

Read More

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ  ಡಿಸೆಂಬರ್ 1: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಭದ್ರಾವತಿಯ ಯುವಕನೋರ್ವನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ – 1 ಕೋರ್ಟ್ ತೀರ್ಪು ನೀಡಿದೆ. 21 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದ ಯುವಕನಾಗಿದ್ದಾನೆ  ಜೈಲು ಶಿಕ್ಷೆಯ ಜೊತೆಗೆ 61 ಸಾವಿರ ರೂ. ದಂಡ ವಿಧಿಸಲಾಗಿದೆ….

Read More

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ | Hanuman langur

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ಕಳೆದೊಂದು ವಾರದಲ್ಲಿ 14 ಮಕ್ಕಳಿಗೆ ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರು ಮುಶಿಯಾಗಳ (ಹನುಮಾನ್‌ ಲಂಗೂರ್‌) ಪೈಕಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆಹಿಡಿದಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರವಳಿಕೆ ಮದ್ದು ನೀಡಿ ಮುಶಿಯಾ ಸೆರೆ ಹಿಡಿಯಲಾಗಿದೆ. ಗ್ರಾಮದಲ್ಲಿ ಮುಶಿಯಾಗಳ ತಂಡ ಬೀಡು ಬಿಟ್ಟಿದೆ. ಅದರಲ್ಲಿ ಮೂರು ಮುಶಿಯಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ…

Read More

ಕಸದ ತೊಟ್ಟಿಯಾದ ಉಳವಿ ಬಸ್ ನಿಲ್ದಾಣ: ಗಾಢ ನಿದ್ರೆಯಲ್ಲಿ ಗ್ರಾಮಾಡಳಿತ.!

ಸೊರಬ: ಇಲ್ಲಿನ ಸಮೀಪದ ಉಳವಿಯ ಬಸ್ ನಿಲ್ದಾಣಕ್ಕೆ ಕಾಲಿಡಲು ಹೆದರುವ ಪರಿಸ್ಥಿತಿ ಪ್ರಯಾಣಿಕರದ್ದು,ಪಟ್ಟಣದಲ್ಲಿರುವ ಬಸ್‌ ನಿಲ್ದಾಣ ಹಾಳು ಕೊಂಪೆಯಂತಾಗಿದ್ದು, ಇದ್ದೂ ಇಲ್ಲದಂತಾಗಿದೆ.  ಸೊರಬಕ್ಕೆ ಹೊಂದಿರುವ ಪಟ್ಟಣಕ್ಕೆ ಅಗತ್ಯ ತಕ್ಕಂತೆ ಬಸ್‌ ನಿಲ್ದಾಣ ಅವಶ್ಯಕತೆ ಇದೆ. ಬೆಳೆಯುತ್ತಿರುವ ಪಟ್ಟಣಕ್ಕೆ ಬಸ್‌ ನಿಲ್ದಾಣದ ಭಾಗ್ಯ ಯಾವಾಗ ಕೂಡಿ ಬರುತ್ತದೆ ಎಂಬ ಪ್ರಶ್ನೆ ಎದುರಾಗಿದೆ. ಬಸ್ ನಿಲ್ದಾಣದ ಸುತ್ತ ಕಸ ಕಡ್ಡಿ ಹುಲ್ಲು ಬೆಳೆದಿದ್ದು,ಬಸ್ ನಿಲ್ದಾಣಕ್ಕೆ ಹೋಗಲು ಮಾರ್ಗವೇ ಇಲ್ಲದಾಗಿದೆ,ಒಳಗೆ ಬಾಟಲಿ ಕಸ ಕಡ್ಡಿ ಕೆಸರು ತುಂಬಿದೆ, ಬಣ್ಣವಿಲ್ಲದೆ‌ ಸೊರಗುತ್ತಿದೆ,ಪ್ರಯಾಣಿಕರು ಶಾಲಾ…

Read More