Headlines

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ

ಶಿವಮೊಗ್ಗದ ಆರ್‌ಎಸ್‌ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ ಶಿವಮೊಗ್ಗ: ನಗರದ ಪಂಚವಟಿ ಕಾಲೋನಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಚೇರಿ ಮಧು ಕೃಪಾ ಕಟ್ಟಡದ  ಕೊನೆಯ ಮಹಡಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಿಂದ ಕಚೇರಿಯಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಹೋಗಿವೆ. ಪ್ರಮುಖವಾಗಿ ಹಾಸಿಗೆ ಮತ್ತು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ…

Read More

ರಿಪ್ಪನ್‌ಪೇಟೆ ನಾಡಕಛೇರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ|beluru

“ಶಾಸಕ ಗೋಪಾಲಕೃಷ್ಣ ಬೇಳೂರು ನಾಡಕಛೇರಿ ದಿಢೀರ್ ಭೇಟಿ’’ ರಿಪ್ಪನ್‌ಪೇಟೆ;-ಕೆರೆಹಳ್ಳಿ ಹೋಬಳಿ ಕಛೇರಿಗೆ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯಕ್ಕೆ ಸರಿಯಾಗಿ ಕಛೇರಿಗೆ ಅಧಿಕಾರಿಗಳು ಬರುತ್ತಿಲ್ಲ ಮತ್ತು ಗ್ರಾಮ ಸಹಾಯಕ ಪ್ರವೀಣ್ ಎಂಬಾತನ ವಿರುದ್ಧ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ ಎಲ್ಲಿದ್ದಾನೆ ಎಂದು ಪ್ರಶ್ನಿಸಿದಾಗ ಉಪತಹಶೀಲ್ದಾರ್ ಊಟಕ್ಕೆ ಹೋಗಿದ್ದಾನೆ ಬಂದಿಲ್ಲ ಎಂಬ ಉತ್ತರ ನಿಮ್ಮ ಊಟದ ಸಮಯ ಎಷ್ಟು ಈಗ ಎಷ್ಟು ಸಮಯ ಎಂದಾಗ ಗ್ರಾಮ ಲೆಕ್ಕಾಧಿಕಾರಿ ಹೊಸನಗರಕ್ಕೆ ಮುಟೇಷನ್ ದಾಖಲೆ ತರಲು…

Read More

ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute

ರಿಪ್ಪನ್‌ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…

Read More

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More

ಅಕ್ರಮ ಕಸಾಯಿಖಾನೆ ಮೇಲೆ ದಾಳಿ : 8 ಗೋವುಗಳ ರಕ್ಷಣೆ – 7 ಗೋವುಗಳ ದಾರುಣ ಹತ್ಯೆ

ಶಿವಮೊಗ್ಗ ನಗರದ ಸೂಳೆಬೈಲ್​ನ ಸಮೀಪ ಇವತ್ತು ತುಂಗಾನಗರ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋಹತ್ಯೆ ನಿಷೇಧದ ನಡುವೆಯು, ಗೋವುಗಳನ್ನು ಮಾಂಸಕ್ಕಾಗಿ ಕೊಂದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಬೆನ್ನಲ್ಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.  ಸೂಳೆಬೈಲಿನ ಕಸಾಯಿ ಖಾನೆಯೊಂದ ಮೇಲೆ ತುಂಗನಗರ ಪೊಲೀಸರು ಬೆಳ್ಳಂಬೆಳಿಗ್ಗೆನೇ ದಾಳಿ ನಡೆಸಿ 8 ಗೋವುಗಳನ್ನ ರಕ್ಷಿಸಿದ್ದಾರೆ. ಆದರೆ 7 ಗೋವುಗಳ ಕತ್ತು ಸೀಳಿ ಹತ್ಯೆ ಮಾಡಿರುವ ದೃಶ್ಯಗಳು ಲಭ್ಯವಾಗಿವೆ. ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ ಶಿವಮೊಗ್ಗ, ಡಿಸೆಂಬರ್ 11: ಶಿವಮೊಗ್ಗ ತಾಲೂಕು ಗೋವಿಂದಪುರದಲ್ಲಿ ಅಬಕಾರಿ ಇಲಾಖೆ ದಿಡೀರ್ ದಾಳಿ ನಡೆಸಿ ಗೋವಾದ ಅಕ್ರಮ ಮದ್ಯ ವಶಕ್ಕೆ ಪಡೆದಿದ್ದಾರೆ. ಗೋವಿಂದಪುರದ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು…

Read More

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ

HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ. ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (25-05-2024)

POSTMAN NEWS | Adike Price , Arecanut Today Price | ಮೇ 25 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿಕಾರಿಪುರ ಮಾರುಕಟ್ಟೆ : ರಾಶಿ ಇಡಿ : 36099 – 52499 ಹೊಸ ರಾಶಿ ಇಡಿ : 31066 – 52699 ಹಂಡ ಇಡಿ : 27199 – 38199 ಗೊರಬಲು : 18199 – 33599 ಸೊರಬ ಮಾರುಕಟ್ಟೆ : ರಾಶಿ ಇಡಿ :…

Read More

ಹೊಸನಗರ ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ , ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಆಯ್ಕೆ

Hosanagara Taluk Working Journalists Association elected new office bearers, with H S Nagaraj as President and Rafi Ripponpete as General Secretary, chosen unanimously at a meeting held in Hosanagara. ಹೊಸನಗರ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಎಸ್. ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಕಾರ್ಯಕಾರಿ ಸಭೆಯಲ್ಲಿ…

Read More