ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭ, ಎಷ್ಟಿದೆ ದರ? ಬುಕ್‌ ಮಾಡುವುದು ಹೇಗೆ?|Airport

ಬೆಂಗಳೂರು – ಶಿವಮೊಗ್ಗ ನಡುವೆ ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಇಂಡಿಗೋ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಸೀಟ್‌ ಕಾಯ್ದಿರಿಸುವ ಅವಕಾಶ ಕಲ್ಪಿಸಿದೆ. ಆ.31ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಇಂಡಿಗೋ ವೆಬ್‌ಸೈಟ್‌ನಲ್ಲಿ ಇವತ್ತು ಸಂಜೆಯಿಂದ ಬುಕಿಂಗ್‌ ಆರಂಭವಾಗಿದೆ. ಆ.31ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಆರಂಭವಾಗಲಿದೆ. ಬೆಳಗ್ಗೆ 11.05ಕ್ಕೆ ವಿಮಾನ ಶಿವಮೊಗ್ಗ ತಲುಪಲಿದೆ. 1 ಗಂಟೆ 15 ನಿಮಿಷದ ನಾನ್‌ ಸ್ಟಾಪ್‌ ಫ್ಲೈಟ್‌ ಇರಲಿದೆ ಎಂದು ಪ್ರಕಟಿಸಲಾಗಿದೆ. ಎರಡು ಬಗೆಯ ಟಿಕೆಟ್‌ ಮಾದರಿ…

Read More

“ಸ್ವಧರ್ಮದಲ್ಲಿ ನಿಷ್ಠೆ, ಪರ ಧರ್ಮದಲ್ಲಿ ಸಹಿಷ್ಣುತಾ “: ಭಾವವನ್ನು ಹೊಂದಿರುವ ದೇಶ ನಮ್ಮದು : ಮಳಲಿ ಶ್ರೀ

 ರಿಪ್ಪನ್ ಪೇಟೆ : ನಮ್ಮ ದೇಶವು ಅನೇಕ ಧರ್ಮಗಳ ಮಹಾಸಾಗರ ವಾಗಿದ್ದು ಅನೇಕತೆಯಲ್ಲಿ ಏಕತೆಯನ್ನು ಹೊಂದಿ ಸ್ವಧರ್ಮದಲ್ಲಿ ನಿಷ್ಠೆ ಪರಧರ್ಮ ದಲ್ಲಿ ಸಹಿಷ್ಣುತಾ ಭಾವವನ್ನು ಹೊಂದಿರುವ ದೇಶವಾಗಿದೆ ಎಂದು ಮಳಲಿ ಮಠದ  ಶ್ರೀ ಡಾ.  ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ರಿಪ್ಪನ್ ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಇಂದು ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಹೊಸವರ್ಷದ ಧ್ವಜಾರೋಹಣದ  ಯುಗಾದಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ  ಸ್ವಾಮೀಜಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.  ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಭಾರತವು…

Read More

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ | HDK

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಆಕ್ಷೇಪಾರ್ಹ ವಿಡಿಯೋಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಸಂಬಂಧಿತ ಸುದ್ದಿಗಳು ಹರಿದಾಡಿದ ಕಾರಣ ದೇವೇಗೌಡ ಅವರಿಗೆ ನಾನೇ ಮನವಿ ಮಾಡಿದ್ದೇನೆ.ಪ್ರಜ್ವಲ್ ಅವರನ್ನು ಅಮಾನತು ಮಾಡಲು ನಿರ್ಧರಿಸಿದ್ದೇವೆ ಎಂದರು. ಯಾರು ಎಲ್ಲಿ ಹೋಗುತ್ತಾರೆಂದು ಕಾಯಲು ಆಗುತ್ತದೆಯೇ ಎಂದ ಅವರು, ತಪ್ಪು ಮಾಡಿದವರಿಗೆ…

Read More

ಕೈ ತಪ್ಪಿದ ಚೊಚ್ಚಲ ಒಲಿಂಪಿಕ್ ಪದಕ – ಕುಸ್ತಿ ಪಂದ್ಯದಿಂದ ವಿನೇಶ್ ಪೋಗಟ್ ಅನರ್ಹ

ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೋಗಟ್ ಆಘಾತವಾಗಿದ್ದು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರೇವೇಶಿಸಿದ್ದ ವಿನೇಶ್ ಪೋಗಟ್ ಹೆಚ್ಚು ದೇಹ ತೂಕ ಹೊಂದಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ…

Read More

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read More

ಹೊಸನಗರ : ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು|sonale

ಹೊಸನಗರ : ನೀರು ತುಂಬಿದ ಬಕೆಟ್‌ಗೆ ಬಿದ್ದು ಒಂದು ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಸೋನಲೆ ಗ್ರಾ.ಪಂ ವ್ಯಾಪ್ತಿಯ ಹೊಸಕೊಪ್ಪ ಎಂಬಲ್ಲಿ ನಡೆದಿದೆ. ಕೂಲಿ ಕೆಲಸಗಾರರಾದ ಹರೀಶ್ ಹಾಗೂ ವೀಣಾ ದಂಪತಿಗಳ ಒಂದು ವರ್ಷ ಒಂದು ತಿಂಗಳ ಸಂಕೇತ್ ಎಂಬ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪೋಷಕರು ಬಕೆಟ್‌ನಲ್ಲಿ ನೀರು ಹಾಕಿ ಆಗಾಗ ಮಗುವಿಗೆ ಆಟವಾಡಿಸುವ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ.  ಆದರೆ ಇಂದು ದುರಂತವೆಂದರೆ ದನಗಳಿಗೆ ಕುಡಿಯಲು ಇಟ್ಟಿದ್ದ ಅರ್ಧ ಬಕೆಟ್ ನೀರಿನಲ್ಲಿ ಮಗು.ತಲೆಕೆಳಗಾಗಿ…

Read More

ಶಿವಮೊಗ್ಗ ಜೈಲಿನಲ್ಲಿ ಮಾರಾಮಾರಿ : ಒಬ್ಬನಿಗೆ ಆರು ಜನರಿಂದ ಥಳಿತ|jail

ಶಿವಮೊಗ್ಗ : ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಮೇಲೆ ಹಳೇ ದ್ವೇಷದಿಂದ ಇತರ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ನಾಗರಾಜ್ ಎಂಬ ವಿಚಾರಣಾಧೀನ ಕೈದಿ ಮೇಲೆ ಸಚಿನ್ ಅಲಿಯಾಸ್ ಸ್ಯಾಡೋ, ದರ್ಶನ್, ಪರಶುರಾಮ, ಅನಿಲ್‌ಕುಮಾರ್, ವಿಶ್ವನಾಥ, ವಿಶಾಲ್ ಎಂಬುವರು ಹಲ್ಲೆ ಮಾಡಿದ್ದಾರೆ. ನಾಗರಾಜ್ ಭದ್ರಾವತಿಯ ಎರಡನೇ ಅಪರ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಲು ಜೈಲಿನಲ್ಲಿರುವ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುವಾಗ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಜೈಲು ನಿರೀಕ್ಷಕ ಆತ್ಮಾನಂದ ಕುದರಿ ಮತ್ತು…

Read More

ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌

ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌ ಸಾಮಾನ್ಯವಾಗಿ ಪ್ರಸಿದ್ಧ ದೇಗುಲಗಳಲ್ಲಿ ಆಗಾಗ ಹುಂಡಿ ಎಣಿಕೆ ಕಾರ್ಯ ನಡೆಯುತ್ತಲೇ ಇರುತ್ತದೆ. ಇನ್ನು ಹುಂಡಿ ಎಣಿಕೆ ವೇಳೆ ಹಣದ ಜೊತೆಗೆ ವಿಚಿತ್ರ ಹರಕೆಯ ಪತ್ರಗಳನ್ನು ಭಕ್ತರು ಹಾಕಿರುವುದು ಕಂಡುಬರುತ್ತದೆ. ಇನ್ನು ಇಂತಹ ಪತ್ರಗಳು ಸಾಮಾಜಿಕ ಜಾಲತಣಗಳಲ್ಲಿ ಭಾರೀ ಸದ್ದು ಮಾಡುತ್ತವೆ. ಹಾಗೆಯೇ ಇಂತಹದ್ದೆ ಘಟನೆಯೊಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರ ದೇವಲಗಾಣಗಾಪುರದಲ್ಲಿ ನಡೆದಿದೆ.ಪ್ರಸಿದ್ಧ ದೇವಾಲಯಗಳ ಹುಂಡಿ ಎಣಿಕೆ…

Read More

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು ಮಾರುತಿಪುರ : ನಿರೇರೀ ಹಾಗೂ ವಂದಗದ್ದೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಶಾಲಾ ಕಾಲುಸಂಕ ಕಾಮಗಾರಿಗೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳವಾರ ವಂದಗದ್ದೆ – ನೀರೇರಿ ಗ್ರಾಮಗಳ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಂಜಿನೀಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂಧರ್ಭದಲ್ಲಿ ಮಾರುತಿಪುರ ಗ್ರಾಪಂ…

Read More

KSRTC ಬಸ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ : ವೇಗವಾಗಿ ಆಗಮಿಸಿದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಮೊಪೆಡ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಬುಳ್ಳಾಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬುಳ್ಳಾಪುರ ಗ್ರಾಮದ ನಿವಾಸಿಯಾದ ಕರಿಬಸಪ್ಪ (65) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರ ಪುತ್ರ ಬಸವರಾಜ್ (35) ಅವರಿಗೆ ಗಾಯವಾಗಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕತೆ, ಮಿತಿಮೀರಿದ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಈ ಸಂಬಂಧ ಬಸ್ ಚಾಲಕನ…

Read More