Headlines

ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್​ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.  ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್‌ಪೇಟೆ : 24 ಗಂಟೆಯೊಳಗೆ ಸರ್ಕಾರಿ ವೈದ್ಯರ ವರ್ಗಾವಣೆಗೊಳಿಸುವಂತೆ ಗ್ರಾಮಸ್ಥರ ಒಕ್ಕೊರಲ ಆಗ್ರಹ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದರಿಲ್ಲದೇ ರೋಗಿಗಳು ಹಾಗೂ ಆಕಸ್ಮಿಕ ಅಪಘಾತಕ್ಕೀಡಾದವರು ಪರಿತಪಿಸುವಂತಾಗಿದ್ದು ಕೂಡಲೇ ನಾಲ್ವರು ವೈದ್ಯಾಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಕುವೆಂಪು ಸಭಾ ಭವನದಲ್ಲಿ 2022-23 ನೇ ಸಾಲಿನ ಗ್ರಾಮ ಸಭೆಯಲ್ಲಿ ಹೆಸರಿಗೆ ನಾಲ್ವರು ವೈದ್ಯಾಧಿಕಾರಿಗಳಿದ್ದರೂ ಕೂಡಾ ರಾತ್ರಿ ವೇಳೆ ಅರೋಗ್ಯ ಕಾರ್ಯಕರ್ತೆಯೇ ವೈದ್ಯರಾಗಿ ಹೆರಿಗೆ ಮಾಡಿಸುವುದು ಮತ್ತು ತುರ್ತು ಚಿಕಿತ್ಸೆ ನೀಡುವಂತಾಗಿದೆ ಹಾಗಾದರೆ ನಮ್ಮೂರಿಗೆ ಇಂತಹ ಬೇಜವಾಬ್ದಾರಿ ವೈದ್ಯಾಧಿಕಾರಿಗಳು ಏಕೆ…

Read More

ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ…

Read More

ಖಾಸಗಿ ಪ್ರಭಾವಿ ವ್ಯಕ್ತಿಗಳ ಮೋಸದ ಜಾಲಕ್ಕೆ ಮನೆ ಕಳೆದುಕೊಂಡು ಬೀದಿ ಪಾಲಾಗಿರುವ 65 ರ ವೃದ್ದೆ :

ಹೊಸನಗರ : ಮಾನಸಿಕ ಅಸ್ವಸ್ಥ ಮಗನೊಂದಿಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವೃದ್ದ ಮಹಿಳೆಯೊಬ್ಬರಿಗೆ ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ಬೆದರಿಸಿ ಅವರ ಆಸ್ತಿ ಕಬಳಿಸಿ ಮನೆಯಿಂದ ಹೊರದಬ್ಬಿರುವ ಘಟನೆ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬ್ರಹ್ಮೇಶ್ವರ ಗ್ರಾಮದ ಶಾರದಮ್ಮ ಎಂಬ 65 ರ ವೃದ್ದೆ 30 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದು, ಮೊದಲನೆ ಮಗ ವೀರಪ್ಪ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.ಮಾನಸಿಕ ಅಸ್ವಸ್ಥನಾಗಿರುವ ಎರಡನೇ ಮಗ ಜಗದೀಶ್ ಜೊತೆ ಕೂಲಿ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಬ್ರಹ್ಮೇಶ್ವರದ ವೃದ್ದೆಯ…

Read More

Ripponpete | ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ

ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ ರಿಪ್ಪನ್‌ಪೇಟೆ;-ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರ ಜಾನಪದ ಹಾಡಿನ ಮೂಲಕ ಕಲಾವಿದರ ತಂಡ ಮತಯಾಚನೆಯನ್ನು ನಡೆಸುತ್ತಾ ಮತದಾರರ ಮನವೊಲಿಸುತ್ತಿರುವುದು ವಿಶೇಷವಾಗಿದೆ. ಇಲ್ಲಿನ ವಿನಾಯಕ ವೃತ್ತದಲ್ಲಿ ಶಿವಮೊಗ್ಗದ ಕಲಾವಿದರ ತಂಡ ಇಂದು ಬಿಸಿಲಿನಲ್ಲಿಯೇ ಪಿಕ್‌ಆಪ್ ವಾಹನದ ಮೇಲೆ ನಿಂತು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರವಾದ ಜಾನಪದ ಹಾಡು ಹಾಡುವುದರೊಂದಿಗೆ ಕ್ರಮಸಂಖ್ಯೆ 8 ಕ್ಕೆ ಮತಹಾಕುವಂತೆ ಹಾಡು ಹಾಡಿ ಮತದಾರರನ್ನು ಸೆಳೆಯುತ್ತಿದ್ದು…

Read More

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟç ಸೇನಾ ಸೇವಾ ಸಮಿತಿಯ ೫೫ ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ ೬ ಗಂಟೆಗೆ ಅರಂಭಗೊಂಡಿತು. ಕರೋನಾ ಕಾರಣ ಕಳೆದೆರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ…

Read More

Ripponpete | ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ..!!

ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ ರಿಪ್ಪನ್‌ಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಪದೇಶಗಳ ಜೀವನದಿಯಾಗಿರುವ ಶರ್ಮಣ್ಯಾವತಿ(ಗವಟೂರು ಹೊಳೆ) ನದಿ ಗ್ರಾಮಾಡಳಿತದ ದಿವ್ಯ ನಿರ್ಲಕ್ಷ್ಯದಿಂದ  ದಿನೇ ದಿನೆ ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶರ್ಮಣ್ಯಾವತಿ ನದಿಯ ಎರಡು ಇಕ್ಕೆಲಗಳಲ್ಲಿ ಕೋಳಿ ತ್ಯಾಜ್ಯಗಳನ್ನು ಎಸೆಯುವ ಮೂಲಕ ಕಿಡಿಗೇಡಿಗಳು ತಮ್ಮ ವಿಕೃತಿಯನು ಮೆರೆಯುತಿದ್ದು,ಸೂರ್ಯೋದಯಕ್ಕೂ ಮುಂಚೆಯೆ ನದಿಯ ಬಳಿ ಬಂದು ತ್ಯಾಜ್ಯ ಎಸೆಯುತ್ತಾರೆ. ಕಸ, ಕಡ್ಡಿಗಳು, ಮದ್ಯದ ಬಾಟಲಿಗಳು, ವಿವಿಧ ತ್ಯಾಜ್ಯಗಳು, ಪ್ಲಾಸ್ಟಿಕ್‌ಗಳು, ಮನೆಯ ತ್ಯಾಜ್ಯವೂ…

Read More

ರಿಪ್ಪನ್‌ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…

Read More