ನಂದಿತಾ ಸಾವಿನ ಪ್ರಕರಣ ಸಿಬಿಐ ಗೆ ವಹಿಸಿ :ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್

ತೀರ್ಥಹಳ್ಳಿ: ನೂತನವಾಗಿ ಗೃಹ ಸಚಿವರಾಗಿ ಆಯ್ಕೆಯಾಗಿರುವ ಆರಗ ಜ್ಞಾನೇಂದ್ರರವರು ತೀರ್ಥಹಳ್ಳಿಯ ನಂದಿತಾ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಿ ನ್ಯಾಯ ಕೊಡಿಸುವ ಮೂಲಕ ಸತ್ಯಾಂಶವನ್ನು ಜನರ ಮುಂದಿಡಬೇಕು ಎಂದು ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ರವರು ಆಗ್ರಹಿಸಿದ್ದಾರೆ. ಕರ್ನಾಟಕ ಸರ್ಕಾರದ ಅತಿಮುಖ್ಯ ಮತ್ತು ಎರಡನೇ ಮಹತ್ವದ ಖಾತೆಯನ್ನು ಅಲಂಕರಿಸಿದ್ದೀರಿ, ಅಭಿನಂದನೆಗಳು. ತೀರ್ಥಹಳ್ಳಿಯ ನಾಗರೀಕರಿಗೆ ನಿಮ್ಮ‌ಮೇಲೆ ಅತೀವ ನಿರೀಕ್ಷೆಯಿದೆ . ತಾವು ಪಕ್ಷದಲ್ಲೂ ಅತಿ ಪ್ರಭಾವಿಗಳು,ನೇರವಾಗಿ ದೆಹಲಿಯ ಸಂಪರ್ಕ ಹೊಂದಿರುವ ನಾಯಕರು. ಕಳೆದ ಚುನಾವಣೆಯಲ್ಲಿ ಅಂದಿನ‌ ನಿಮ್ಮ‌ಪಕ್ಷದ…

Read More

ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಾಸಕ ಬಸವನಗೌಡ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ..!

 ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯದ ಬುದ್ಧಿಜೀವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರ ಪ್ರತಿಕೃತಿ ದಹಿಸುವ ಮೂಲಕ ಯುವಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಬಿಹೆಚ್ ರಸ್ತೆಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಅವರ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಮತ್ತು ಬುದ್ದಿ ಜೀವಿಗಳ ಬಗ್ಗೆ ಅಸಂಬದ್ದವಾಗಿ,ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹುಚ್ಚ…

Read More

ಅಡುಗೆ ಮಾಡುವ ವಿಚಾರಕ್ಕೆ ಜಗಳ : ಅತ್ತೆಯ ಮೈಮೇಲೆ ಬಿಸಿ ಅನ್ನದ ತಿಳಿ ಸುರಿದ ಸೊಸೆ

ಸಾಗರ: ಅಡುಗೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತೆ ಮತ್ತು ಸೊಸೆಯ ನಡುವೆ ಮಾತಿಗೆ ಮಾತು ಬೆಳೆದು ಸೊಸೆಯು ಅತ್ತೆಯ ಮೈಮೇಲೆ ಬಿಸಿ ಗಂಜಿಯ ತಿಳಿಯನ್ನು ಸುರಿದ ಘಟನೆ ಸಾಗರದ ಮುಳ್ಳಕೆರೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಮುಳ್ಳಕೆರೆ ನಿವಾಸಿ ಪಾರ್ವತಮ್ಮ (58) ಎಂಬುವವರ ತಲೆ ಮೇಲೆ ಅವರ ಸೊಸೆ ನೇತ್ರಾ ಗಂಜಿ ಸುರಿದ ಪರಿಣಾಮ ತೀವ್ರ ಸುಟ್ಟ ಗಾಯಗಳಿಂದ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿ ತಿಳಿಯನ್ನು ತಲೆ ಮೇಲೆ ಸುರಿಯುತ್ತಿದ್ದಂತೆ ಪಾರ್ವತಮ್ಮ ಅವರು ಜೋರಾಗಿ ಕೂಗಿಕೊಂಡು ಹೊರಗೆ…

Read More

ಬೇಳೂರು ಗೋಪಾಲಕೃಷ್ಣ ಬಿಜೆಪಿ ಸರ್ಕಾರ ಪತನದ ಬಗ್ಗೆ ಹಗಲುಕನಸು ಕಾಣುತ್ತಿದ್ದಾರೆ : ಸಚಿವ ಶಿವರಾಂ ಹೆಬ್ಬಾರ್

ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.‌ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು….

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ದೇಶ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಸ್ವಾತಂತ್ರ್ಯದ  ಅಮೃತ ಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್‌ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಗತ್ತಿನ ರಾಷ್ಟ್ರಗಳಲ್ಲಿ ಭಾರತ ಶಾಂತಿಪ್ರಿಯ ದೇಶವಾಗಿದೆ. ಇಲ್ಲಿ ಧರ್ಮಗಳ ಮಧ್ಯೆ ಪ್ರೀತಿ, ಮಾನವೀಯತೆ ಇದೆ. ಇಲ್ಲಿ ಜೀವಿಸುವುದೇ ನಮ್ಮ ಪುಣ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಚಟುವಟಿಕೆಗಳನ್ನು ಕಂಡರೆ ಇದು ಅರ್ಥವಾಗುತ್ತದೆ. ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ…

Read More

ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ,ಹಣ್ಣು ನಿಷೇದ : ಸರ್ಕಾರದ ಆದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಆಕ್ರೋಶ

ಸಾಗರ: ಇನ್ನು ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಸದನದಲ್ಲಿ ಪ್ರಶ್ನಿಸಲಿದ್ದೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ  ಘೋಷಿಸಿದರು. ಇಲ್ಲಿನ ದೇವರಾಜ ಅರಸು ಸಭಾಭವನದಲ್ಲಿ ಭಾನುವಾರ ತಾಲೂಕಿನಲ್ಲಿ ಈವರೆಗೆ 1 ಲಕ್ಷ ಕೋವಿಡ್ ನಿರ್ಬಂಧಕ ಲಸಿಕೆ ನೀಡಿದ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರದ ಸ್ವಯಂ ಸೇವಕರು ಹಾಗೂ ಆರೋಗ್ಯ ಇಲಾಖೆಯ ನೌಕರರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ…

Read More

ತೀರ್ಥಹಳ್ಳಿ: ಗೃಹಸಚಿವರ ಕಾರು ನಿರ್ಗಮಿಸುತ್ತಿದ್ದಂತೆಯೇ ಪಾದಾಚಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಒಮಿನಿ ಕಾರು:

ತೀರ್ಥಹಳ್ಳಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರು ಮತ್ತು ಅವರ ಬೆಂಗಾವಲು ವಾಹನಗಳು ಹೋಗುತ್ತೀದ್ದಂತೆ ಹಿಂದಿದ್ದ ಓಮ್ನಿ ಕಾರೊಂದು ಪಲ್ಟಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಗುಡ್ಡೆಕೊಪ್ಪ ನಿವಾಸದಿಂದ ಕೊಪ್ಪದ ಕಡೆ ಗೃಹ ಸಚಿವರ ಕಾರು ಪಯಣ ಬೆಳೆಸಿತು. ಈ ವೇಳೆ ಡಿಸಿಸಿ ಬ್ಯಾಂಕ್ ಎದುರು ಕಾಯಿ ಮೂಟೆ ಹೊತ್ತಿದ್ದ ವ್ಯಕ್ತಿಯೊಬ್ಬ ಸಚಿವರ ಕಾರು ಪಾಸ್ ಆಗುತ್ತಿದ್ದಂತೆ ರಸ್ತೆಗೆ ಹಾರಿದ್ದಾನೆ. ಈ ವೇಳೆ ಓಮ್ನಿ ಕಾರು ಆತನಿಗೆ ಡಿಕ್ಕಿಯಾಗಿ ನಿಯಂತ್ರಣ…

Read More

ರೌಡಿಸಂ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಇನ್ನಷ್ಟು ಬಲ:ಸೈಬರ್ ಕ್ರೈಂ ತಡೆಗೆ ಪ್ರತಿ ಜಿಲ್ಲೆಗೂ ಸಾಧನ ಒದಗಿಸಲಾಗುವುದು : ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ರೌಡಿಸಂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೌಡಿಗಳಿಗೆ ಏನೇನು ಭಯ ಹುಟ್ಟಿಸಬೇಕೋ ಆ ಎಲ್ಲಾ ಕೆಲಸಗಳು ಮಾಡಲಾಗುತ್ತಿದೆ.ರೌಡಿಸಂ, ಮಾದಕವಸ್ತುಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವನ್ನ ಮಟ್ಟಹಾಕಬೇಕಿದೆ. ನೊಂದಿತರು ಆಕಾಶ ನೋಡದಂತೆ ಅಸಾಹಯಕರನ್ನಾಗಿ ಮಾಡಬಾರದು. ಹಾಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದರು. ಕ್ರೈಂ ಟ್ರಯಲ್ ಹಾಗೂ ಕನ್ವಿಕ್ಷನ್…

Read More

ಸಾಗರ : ಶಿಕ್ಷಕರ ಕೊರತೆ ಹಿನ್ನೆಲೆ ಗ್ರಾಮಸ್ಥರು ಹಾಗೂ ಎಸ್ ಡಿಎಂ ಸಿ ಸದಸ್ಯರಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ :

ಸಾಗರ : ಮಕ್ಕಳು ಓದಿ ವಿದ್ಯಾವಂತರಾಗಲೆಂದು ಹಲವು ಕನಸುಗಳನ್ನು ಕಂಡು ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ.ಆದರೆ ಶಾಲೆಯಲ್ಲಿ ಶಿಕ್ಷಕರೇ ಸರಿಯಾಗಿ ಬೋಧನೆ ಮಾಡದಿದ್ದರೆ ಮಕ್ಕಳು ವಿದ್ಯಾಭ್ಯಾಸ ಕಲಿಯುವುದು ಹೇಗೆ ಎಂಬುವುದು ಸರ್ವೇ ಸಾಮಾನ್ಯ ವಿಚಾರ. ಆದರೆ ಇದೀಗ ಇಲ್ಲೋಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎದುರು ಹಾಗೂ ಬಿಇಒ ಕಚೇರಿ ಮುಂದೆ ಗ್ರಾಮಸ್ಥರು ಹಾಗೂ ಎಸ್ಡಿಎಂಸಿ ಸದಸ್ಯರು ಶಿಕ್ಷಕರ ನಿಯೋಜನೆ ಮಾಡಲೆಂದು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ…

Read More