ರಿಪ್ಪನ್ ಪೇಟೆ: ಕಾಂಗ್ರೆಸ್ ಮುಖಂಡ ಸುಳುಕೋಡು ನಾರಾಯಣಪ್ಪ ನಿಧನ : ಗಣ್ಯರ ಸಂತಾಪ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳಕೋಡು ಗ್ರಾಮದ ನಾರಾಯಣಪ್ಪ (68) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ ಅವರ ಆತ್ಮೀಯರಾಗಿದ್ದ ಸುಳುಗೋಡು ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷ ಹಾಗೂ ಈಡಿಗ ಸಮಾಜದಲ್ಲಿ ಪ್ರಮುಖ ನಾಯಕರಿಂದ ಗುರುತಿಸಿಕೊಂಡಿದ್ದರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅವರು ಕೃಷಿಕರಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು,…

Read More

ಭದ್ರಾವತಿ: ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಜಯಂತಿ:

ಭದ್ರಾವತಿ: ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸುರವರ 106 ನೇ ಜಯಂತಿ ಆಚರಿಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್  ಕಾರ್ಯಕ್ರಮ ಉದ್ಘಾಟಿಸಿ,  ಹಿಂದುಳಿದ ವರ್ಗಗಳ ಹರಿಕಾರ ದಿ: ದೇವರಾಜ ಅರಸುರವರ ಸಾಧನೆಗಳನ್ನು ಕುರಿತು ಮಾತನಾಡಿದರು. ತಹಸೀಲ್ದಾರ್ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು. ಗ್ರೇಡ್-2 ತಹಸೀಲ್ದಾರ್ ರಂಗಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್ವರಿ, ಮೇಲ್ವಿಚಾರಕ ರಮೇಶ್, ಕಂದಾಯಾಧಿಕಾರಿ ಪ್ರಶಾಂತ್, ಮುಖಂಡ ಟಿ.ವೆಂಕಟೇಶ್, ಮುಂತಾದವರು…

Read More

ರಿಪ್ಪನ್ ಪೇಟೆ: ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಡಾ. ಆರ್ ಎ ಅಬೂಬಕರ್ ನಿಧನ:

ರಿಪ್ಪನ್ ಪೇಟೆ: ಇಲ್ಲಿನ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಡಾ. ಆರ್ ಎ ಅಬೂಬಕರ್ (61) ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಗುರುವಾರ ರಾತ್ರಿ ತೀವ್ರ ತರವಾದ ಎದೆನೋವು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.ಶುಕ್ರವಾರ ಮಧ್ಯಾಹ್ನ 12ಕ್ಕೆ ರಿಪ್ಪನ್ ಪೇಟೆಯ ಖಬರ್ಸ್ಥಾನ್ ನಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ….

Read More

ಸಾಹಿತಿ ನಯನ ಕೋಟ ರವರಿಗೆ ಒಲಿದ ರಾಜ್ಯಮಟ್ಟದ ಗುರುಕುಲ ಸಾರ್ವಭೌಮ ಕವಿತಾ ಕೃಷ್ಣ ಪ್ರಶಸ್ತಿ:

ಚಿತ್ರದುರ್ಗ: ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಶಸ್ತಿ “ಗುರುಕುಲ ಕಲಾ ಸಾರ್ವಭೌಮ ಕವಿತಾಕೃಷ್ಣ” ಪ್ರಶಸ್ತಿಗೆ ಚಿತ್ರದುರ್ಗದ ಸಾಹಿತಿಯಾದ ನಯನ ಕೋಟ ರವರು ಆಯ್ಕೆಯಾಗಿದ್ದಾರೆ.  ಈ ಕುರಿತು ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಶ್ರೀ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಯನ ಕೋಟ ರವರು ಮೂಲತಃ ಉಡುಪಿ ಜಿಲ್ಲೆಯ ಕೋಟದವರು.ಪ್ರಸ್ತುತ  25 ವರ್ಷದಿಂದ ಚಿತ್ರದುರ್ಗದ ನಿವಾಸಿ. ಇವರ ತಾಯಿ ಸಾಹಿತಿ ನಾಗರತ್ನ ಬಿ(ವನಸುಮ ವಡ್ಡರ್ಸೆ) ಅವರಿಂದ ಪ್ರೇರಣೆ ಪಡೆದು 20 ವರ್ಷಗಳಿಂದ ಎಲೆಮರೆಯ…

Read More

ಶಿವಮೊಗ್ಗ: ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ :ಕಾರು ಚಾಲಕ ಸ್ಥಳದಲ್ಲೆ ಸಾವು

ಶಿವಮೊಗ್ಗ: ಖಾಸಗಿ ಬಸ್ ಮತ್ತು ಕಾರ್ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ದುರ್ಘಟನೆ ಶಿವಮೊಗ್ಗದ ಕುಂಚೇನಹಳ್ಳಿ ಸಮೀಪ ನಡೆದಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿಕಾರಿಪುರ ನಿವಾಸಿ ರಾಕೇಶ್ (35) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಇನ್ನಿಬ್ಬರು ಸಹ ಪ್ರಯಾಣಿಕರಾದ ಜ್ಯೋತಿ ಮತ್ತು ಚೈತ್ರರಿಗೆ ಅಪಘಾತದಲ್ಲಿ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಸಿಫ್ಟ್ ಕಾರಿನಲ್ಲಿ ಬರುವಾಗ ಕುಂಚೇನ ಹಳ್ಳಿಯ ಗ್ರಾಪಂ ಕಚೇರಿ ಮುಂಭಾಗ ಕೃಷ್ಣ…

Read More

ಸಾಗರ: ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದಿಂದ ರಕ್ತದಾನ ದಿನಾಚರಣೆ

ಸಾಗರ:182ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ವತಿಯಿಂದ ಸಾಗರದ ಸರ್ಕಾರಿ ಆಸ್ಪತ್ರೆಯ ರೋಟರಿ ರಕ್ತ ನಿಧಿ ಸಂಸ್ಥೆ ಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು       ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಅಧ್ಯಕ್ಷರಾದ ಶ್ರೀಯುತ ಷಣ್ಮುಖ ಅವರು ಮಾತನಾಡಿ ರಕ್ತದಾನ ಮಹಾದಾನ ರಕ್ತದಾನ ಶಿಬಿರವನ್ನು ಅನೇಕ ವರ್ಷಗಳಿಂದ ನಮ್ಮ ಸಂಘ ನಡೆಸಿಕೊಂಡು ಬರುತ್ತಿದ್ದು ಅನೇಕ ಜನರಿಗೆ ಅನುಕೂಲವಾಗಿದೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ಮತ್ತು…

Read More

ರಿಪ್ಪನ್ ಪೇಟೆ: ಸರ್ಕಾರಿ ಸಮುದಾಯ ಆಸ್ಪತ್ರೆಗೆ ಮಂಜೂರಾದ ಜಾಗವನ್ನು ಒತ್ತುವರಿದಾರರಿಂದ ರಕ್ಷಿಸಿ : ಗ್ರಾಪಂ ಸದಸ್ಯ ಆಸಿಫ಼್ ಭಾಷಾಸಾಬ್

ರಿಪ್ಪನ್ ಪೇಟೆ: ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿರುವ ಜಾಗವನ್ನು ಒತ್ತುವರಿದಾರರಿಂದ ರಕ್ಷಿಸುವಂತೆ ಹಾಗೂ ಪೋಡಿ ಮಾಡಿಕೊಡುವಂತೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯರಾದ ಬಿ ಆಸೀಫ಼್ ಜಿಲ್ಲಾಧಿಕಾರಿಗಳಿಗೆ ರಿಪ್ಪನ್ ಪೇಟೆ ಉಪ ತಹಶಿಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ 59 ರಲ್ಲಿ ರಿಪ್ಪನ್ ಪೇಟೆ ಜನತೆಯ ಬಹುದಿನಗಳ ಕನಸಿನ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಈ ಹಿಂದೆ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ 5 ಎಕರೆ ಜಾಗ…

Read More

ಸಾಹಿತಿ ಮೈನಾ ನಾಸಿರ್ ಕಾರ್ಗಲ್ ರವರಿಗೆ ಒಲಿದ ರಾಜ್ಯ ಮಟ್ಟದ ಗುರುಕುಲ ಸಾರ್ವಭೌಮ ಕವಿತಾಕೃಷ್ಣ ಪ್ರಶಸ್ತಿ :

ಕಾರ್ಗಲ್: ಗುರುಕುಲಾ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದಗುರುಕುಲ ಸಾರ್ವಭೌಮ ಕವಿತಾಕೃಷ್ಣ ಪ್ರಶಸ್ತಿಗೆ ಕಾರ್ಗಲ್ ನ ಸಾಹಿತಿ ಮೈನಾ ನಾಸಿರ್ ಕಾರ್ಗಲ್ ರವರು ಆಯ್ಕೆಯಾಗಿದ್ದಾರೆ.ಈ ಕುರಿತು ಗುರುಕುಲ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈನಾ ನಾಸಿರ್ ಕಾರ್ಗಲ್ ರವರು ಮೂಲತಃ ಉಡುಪಿ ತಾಲೂಕಿನ ಕೋಟಾದ ಸಮೀಪವಿರುವ ಮಧುವನದವರು. ಮದುವೆಯ ನಂತರ22 ವರ್ಷಗಳಿಂದ ಇವರು ಸಾಗರ ತಾಲೂಕಿನ ಜೋಗದ ಸಮೀಪವಿರುವ ಕಾರ್ಗಲ್ ನಲ್ಲಿ ವಾಸವಾಗಿರುತ್ತಾರೆ. 25 ವರ್ಷಗಳಿಂದಲೂ ಸಾಹಿತ್ಯ…

Read More

ಸೊರಬ ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಜ್ಜು:

ಸೊರಬ: ಅಚ್ಚರಿಯ ಬೆಳವಣಿಗೆಯಲ್ಲಿ ಜಿಲ್ಲೆಯ ಸೊರಬ ಪುರಸಭೆ ಸದಸ್ಯರು ಪುರಸಭೆಯ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮೆಟ್ಟಿಲೇರಿದ್ದಾರೆ. ಸೊರಬ ಪುರಸಭ ಅಧ್ಯಕ್ಷ ಎಂ.ಡಿ.ಉಮೇಶ್ ಅವರ ನಡುವಳಿಕೆಯಿಂದ ಬೇಸತ್ತು ಇಂದು ಪುರಸಭೆಯ 11 ಜನ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲು ತಟ್ಟಿದ್ದಾರೆ. 12 ಜನ ಸದಸ್ಯರಿರುವ ಸೊರಬ ಪುರಸಭೆಯಲ್ಲಿ 6 ಜನ ಸದಸ್ಯರು ಬಿಜೆಪಿ ಪಕ್ಷದ ಸದಸ್ಯರಿದ್ದು 4 ಜನ ಕಾಂಗ್ರೆಸ್, ಒಬ್ಬರು ಜೆಡಿಎಸ್ ಒಬ್ಬರು ಪಕ್ಷೇತರರಿದ್ದಾರೆ. ವಿಪಕ್ಷ ನಾಯಕ…

Read More

ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು:ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!

ಶಿವಮೊಗ್ಗ: ಶಿಕಾರಿಪುರದಲ್ಲಿ ರಾತ್ರೋರಾತ್ರಿ ಸ್ವಾತಂತ್ರ್ಯ ಹೋರಾಟಗಾರ,ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ತೆರವುಗೊಳಿಸಿದ ಹಿನ್ನೆಲೆ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆಯನ್ನ ನಡೆಸಲಾಯಿತು. ಜಿಲ್ಲಾಡಳಿತದ ಈ ಕ್ರಮದ ವಿರುದ್ದ ಸಂಗೊಳ್ಳಿ_ರಾಯಣ್ಣ ಅಭಿಮಾನಿ ಬಳಗ ಹಾಗೂ ಹಾಲುಮತ ಮಹಸಾಭಾ  ವತಿಯಿಂದ ಪ್ರತಿಭಟನೆ ನಡೆಸಿ ಪ್ರತಿಮೆ ಪುನರ್ ಪ್ರತಿಷ್ಠಾಪನೆಗಾಗಿ  ಎಲ್ಲಾ ಸಮಾಜದ ಮುಖಂಡರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಹೇಶ್‌ ಉಲ್ಮಾರ್‌ ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವಿನ ಹಿಂದೆ ರಾಜಕೀಯ ಹುನ್ನಾವಿರದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಭಂದವಿಲ್ಲದಿದ್ದರು…

Read More