ನೇದರವಳ್ಳಿಯ ಸೊಪ್ಪಿನ ಬೆಟ್ಟ ಕಾಡು ಲೂಟಿಯಾಗುತ್ತಿದ್ದರೂ ಸುಮ್ಮನೆ ಕುಳಿತಿರುವ ಅಧಿಕಾರಿಗಳು : ಪರಿಸರ ಪ್ರೇಮಿ ಮಂಜಪ್ಪ ಗಂಭೀರ ಆರೋಪ.

ಸಾಗರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯ್ತಿಯ ನೇದರವಳ್ಳಿಯಲ್ಲಿ ಸರ್ವೆ ನಂಬರ್  10 ಮತ್ತು 11 ರಲ್ಲಿ  43ಎಕರೆ ಸೊಪ್ಪಿನ ಬೆಟ್ಟದಲ್ಲಿ ತೋಟಕ್ಕೆ ಮುಫತ್ತು ಎಂದು ಕಾಡು ಇತ್ತು. ಆದರೆ ಇತ್ತೀಚಿನ ಹತ್ತು ವರ್ಷದ ಈ ಕಡೆ ನೇದರವಳ್ಳಿ ಗ್ರಾಮದ 20 ಕ್ಕೂ ಹೆಚ್ಚು ಜನ ಈ ಕಾಡನ್ನು ಇದೀಗ ಒತ್ತುವರಿ ಮಾಡಿದ್ದಾರೆ ಟ್ರಂಚ್ ಹೊಡೆಸಿದ್ದಾರೆ ಹಾಗೂ ಬೆಳೆಯನ್ನು ಸಹ ಮಾಡಿದ್ದಾರೆ. ಹಾಗೂ ಕಾಡಿನ ಜಾಗದಲ್ಲಿ ಇದೀಗ ಕ್ರಿಕೆಟ್ ಮೈದಾನವನ್ನು ಮಾಡಿದ್ದು ಇದಕ್ಕೆ ಅವಕಾಶವನ್ನು ನೀಡಿದವರು ಯಾರು…

Read More

ಮನುಷ್ಯ ಸಮಾಜಮುಖಿಯಾಗಿ ಯೋಚಿಸಿ ಬದುಕಬೇಕು ಹಾಗೂ ಇತರರಿಗೆ ಮಾದರಿಯಾಗಬೇಕು :ಮಳಲಿ ಶ್ರೀ

ರಿಪ್ಪನ್ ಪೇಟೆ:ನಾನು ನನ್ನದು ಎಂಬುದಕ್ಕಿಂತ ನಾವು ನಮ್ಮದು ಎಂಬ ಮನೋಭಾವ ಇದ್ದಾಗ ಮಾತ್ರ ಬೆಳೆಯಲಿಕ್ಕೆ ಸಾದ್ಯ ಎಂದು ಮಳಲಿಮಠದ .ಡಾ.ಶ್ರೀ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು. ಬುಧವಾರ ಹೊಸನಗರ ತಾಲೂಕಿನ ಮಸರೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ. ಶ್ರಾವಣ ಮಾಸದ ಅಂಗವಾಗಿ  ಹಮ್ಮಿಕೊಂಡ. ವಿಶೇಷ ರುದ್ರಾಭಿಷೇಕ ಪೂಜಾ ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿ ಆಶೀರ್ವಚನ ನೀಡಿದ  ಅವರು . ಮನುಷ್ಯ ಸಮಾಜಮುಖಿಯಾಗಿ ಯೋಚಿಸಿ ಬದುಕಬೇಕು ಹಾಗೂ ಇತರರಿಗೆ ಮಾದರಿಯಾಗಬೇಕು. ನಾನು ನನ್ನಿಂದಲೆ ಎಂಬ ಅಹಂಕಾರವನ್ನು ಬಿಡಬೇಕು ಎಂದರು….

Read More

ಹಿರೇಮನೆ ಗಿರಿಜನ ಆಶ್ರಮ ಶಾಲೆ ಹೆಸರು ಬದಲಾವಣೆಗೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ವಿರೋಧ

ಸಾಗರ :ತಾಲ್ಲೂಕಿನ ತಾಳಗುಪ್ಪ ಹೋಬಳಿ ಹಿರೇಮನೆಯಲ್ಲಿ 50 ವರ್ಷಗಳ  ಹಿಂದೆ ಪ್ರಾರಂಭಗೊಂಡ ಮಹಾತ್ಮಾಗಾಂಧಿ ಗಿರಿಜನ ಆಶ್ರಮ ಶಾಲೆ ಈ ಹೆಸರನ್ನು ಸರ್ಕಾರ ಏಕಾಏಕಿ ವಾಲ್ಮೀಕಿ ಆಶ್ರಮ ಶಾಲೆ ಎಂದು ಮರು ನಾಮಕರಣ ಮಾಡಿರುವ ಕ್ರಮವನ್ನು  ವಿರೋಧಿಸಿ ಕರ್ನಾಟಕ ಅರಣ್ಯ  ಮೂಲ ಬುಡಕಟ್ಟುಗಳ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಇಂದು ಸಾಗರ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತು.   ಸರ್ಕಾರದ ಈ ನೀತಿಯನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ…

Read More

ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ,ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶ,ಮೂಲಭೂತ ಸೌಕರ್ಯ ಒದಗಿಸಲು ಬದ್ದ:ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಶಿವಮೊಗ್ಗ : ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ, ಸಂಪರ್ಕ ಸಂವಹನ ಹಾಗೂ ವೃತ್ತಿ ಕೌಶಲ್ಯ ಅಭಿವೃದ್ದಿಗೆ ವಿಫುಲ ಅವಕಾಶವಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದರಾಗಿದ್ದೇವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ದಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ಅವರು, ಕೋವಿಡ್ ನಂತರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಂಪರ್ಕದಿಂದ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗವಕಾಶದ ಸಾಧ್ಯತೆಗಳು ತೆರೆದಿದ್ದು, ಇದಕ್ಕೆ ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಉದ್ಯೋಗ…

Read More

ಅಂತರ್ಜಾಲ ಮಕ್ಕಳ ಕವಿಗೋಷ್ಟಿಯಿಂದ 75ನೇ ಸ್ವಾತಂತ್ರ್ಯ ಸಂಭ್ರಮ:

ಶಿವಮೊಗ್ಗ : ೭೫ ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ಅಂತರ್ಜಾಲದ ಮೂಲಕ ದಿನಾಂಕ:15-08-2021 ನೇ ಭಾನುವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಮಕ್ಕಳ ಕವಿಗೋಷ್ಠಿಯ ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರದ ೩೫ ಮಕ್ಕಳು ಭಾಗವಹಿಸಿ ಸ್ವಾತಂತ್ರ್ಯದ ಹಣತೆ ಎಂಬ ವಿಷಯದ ಮೇಲೆ ಕವಿತೆ ಬರೆದು ವಾಚಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ.ರಾ.ಬ.ಸಂ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಹೆಚ್ ಮಹೇಶ್ ರವರು ಸಂಘದ ಸಾಧನೆಗಳನ್ನು ಸವಿವರವಾಗಿ ವಿವರಿಸಿದರು. ಶಿವಮೊಗ್ಗ ಜಿಲ್ಲಾ…

Read More

ಹೊಸನಗರ: ಯುವಕನ ಕಿಡ್ನಿ ವೈಫಲ್ಯ,ಚಿಕಿತ್ಸೆಗೆ ನೆರವು ಯಾಚನೆ :

ಹೊಸನಗರ: ಇಲ್ಲಿನ ಮಾರಿಗುಡ್ಡ ವಾಸಿಯಾದ ಯುವಕನೊಬ್ಬ 3 ವರ್ಷಗಳಿಂದ ಕಿಡ್ನಿ ವೈಫಲ್ಯಕ್ಕೊಳಗಾಗಿದ್ದು, ಚಿಕಿತ್ಸೆ ವೆಚ್ಚ ಭರಿಸಲಾಗದೆ ಅವರ ಕುಟುಂಬ ದಾನಿಗಳಿಂದ ನೆರವು ಯಾಚಿಸಿದೆ. ಹೊಸನಗರದ ಮಾರಿಗುಡ್ಡ ವಾಸಿಯಾದ ಮಂಜುನಾಥ ಮತ್ತು ಪದ್ಮಾವತಿ ದಂಪತಿಗಳ  ಮಗನಾದ 23  ವರ್ಷ ವಯ್ಯಸ್ಸಿನ ಶರತ್ ಎಂಬುವವರು ಸುಮಾರು 3 ವರ್ಷದಿಂದ ಕಿಡ್ನಿ ವೈಫಲ್ಯಗೊಂಡಿದ್ದು, ಆರ್ಥಿಕ ಸಮಸ್ಯೆಯಿಂದಾಗಿ ಡಯಾಲಿಸಿಸ್ ಮಾಡಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಈಗಾಗಲೇ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಆರಂಭವಾಗಿದೆ, ಇನ್ನೂ ಹೆಚ್ಚಿನ  ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ…

Read More

ಈ ಗ್ರಾಮದ ಯುವಕರಿಗೆ ಎಲ್ಲೂ ಕಸ ಕಾಣುವಂತಿಲ್ಲ ಕಸ ಕಂಡರೆ ಕೆಂಡಾಮಂಡಲವಾಗುತ್ತಾರೆ.ಯಾವ ಊರಿನ ಯುವಕರು ಇವರು?! ಒಮ್ಮೆ ಈ ಸುದ್ದಿ ನೋಡಿ.

ಸಾಗರ : ಸದ್ಯದ ಪರಿಸ್ಥಿತಿಯಲ್ಲಿ ಜನ ಸಾಮಾನ್ಯವಾಗಿ ಕಸವನ್ನು ಅಥವಾ ಕೈಯಲ್ಲಿರುವ ಚೀಟಿ ,ಪೇಪರ್ ಗಳನ್ನು ಅಲ್ಲಿ ಇಲ್ಲಿ ಬಿಸಾಡುವುದು ಸಾಮಾನ್ಯ.ಸ್ವಚ್ಚತೆ ಬಗ್ಗೆ ಅಷ್ಟೊಂದು ತಲೆ ಕೆಡಿಸಿಕೊಳ್ಳುವುದು ಕಡಿಮೆ ಆದರೆ ಇಲ್ಲೊಂದು ಯುವಕರ ತಂಡ ಕಸವನ್ನು ಕಂಡರೆ ಕೆಂಡಾಮಂಡಲವಾಗುತ್ತಾರೆ ಆ ಗ್ರಾಮದಲ್ಲಿ ಕಸವನ್ನು ನಿರ್ಮೂಲನೆ ಮಾಡಬೇಕೆಂಬ ಪಣ ತೊಟ್ಟಿದ್ದಾರೆ ಸ್ವಚ್ಚತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಐಗಿನಬೈಲು ಗ್ರಾಮದ ಯುವಕರು ಇದೀಗ ಸ್ವಚ್ಚತೆಗಾಗಿ ಗ್ರಾಮದಲ್ಲಿ ಪಣತೊಟ್ಟಿದ್ದಾರೆ.ಗ್ರಾಮದ ಶಾಲೆ ಅಂಗನವಾಡಿ ಹಾಗೂ ದೇವಸ್ಥಾನಗಳ ಸುತ್ತಮುತ್ತ ಸ್ವಚ್ಚತೆಗಾಗಿ ಯುವಕರು…

Read More

ಸಮಾಜದಲ್ಲಿ ಶಾಂತಿ ಕದಡುವ ದುಷ್ಟ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ನೂತನ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇಂದಿಲ್ಲಿ ಹೇಳಿದರು. ಅವರು ಇಂದು ಶಿಕಾರಿಪುರಕ್ಕೆ ತೆರಳುವ ಮಾರ್ಗದ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಾಂತಿ ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಹೇಳಲಾಗಿದ್ದರೂ ಕೂಡಾ ಕೆಲವು ವ್ಯಕ್ತಿಗಳು ದೇಶದ್ರೋಹದ ಕೃತ್ಯದಲ್ಲಿ ತೊಡಗಿಕೊಂಡಿದ್ದು ಆಂತಹವರನ್ನು ಆರಂಭದಲ್ಲಿ ಚಿವುಟುವ ಕಾರ್ಯ…

Read More

ರಿಪ್ಪನ್ ಪೇಟೆ: ಸ್ವಾತಂತ್ರ್ಯೋತ್ಸವದ ದಿನದಂದು ಮೌನ ಹೋರಾಟಕ್ಕಿಳಿದ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ:

ರಿಪ್ಪನ್ ಪೇಟೆ:ದೇಶಕ್ಕೆ ಸ್ವಾತಂತ್ರ್ಯಬಂದು ಎಪ್ಪತ್ತೈದು ವರ್ಷವಾಯಿತು,  ಭ್ರಷ್ಟಾಚಾರ ಮಾಡುವವರು,ಲೂಟಿ ಹೊಡೆಯುವವರು ಸ್ವಾತಂತ್ರ್ಯ ಸಿಕ್ಕಿದೆ.ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಿದ್ದೇವೆ,ಕೊಡಿಸಿದ್ದೇವೆ ಎಂಬ ಕೀಳು ಮಟ್ಟದ ಮಾತುಗಳನ್ನಾಡುತ್ತಿದ್ದಾರೆಯೇ ಹೊರತು ದೇಶದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಆಸಕ್ತಿ ಇಲ್ಲಾ ಇಚ್ಚಾಶಕ್ತಿ ಇಲ್ಲದ ರಾಜಕಾರಣಿಗಳಿಂದ ದೇಶಕ್ಕೆ ಏನೂ ಪ್ರಯೋಜನ ಇಲ್ಲಾ. ಎಲ್ಲಾ ಆಡಂಬರದ ಆಚರಣೆ ಎಂದು ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪೋಲಿಸರನ್ನು ಸದ್ಬಳಕೆ ಮಾಡಿಕೊಂಡ್ಡಿದ್ದರೆ ದೇಶ ಪ್ರಪಂಚಕ್ಕೆ ಮಾದರಿಯಾಗುತ್ತಿತ್ತು,ಆದರೆ ಅವರನ್ನು ಸದ್ಬಳಕೆ ಮಾಡಿಕೊಳ್ಳದೆ ದುರ್ಬಳಕೆ ಮಾಡಿಕೊಂಡು ಕೆಟ್ಟ ನೀತಿಯನ್ನು ಮಾಡಿಕೊಂಡು…

Read More

ಶೈಕ್ಷಣಿಕ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಆರಗ ಜ್ಞಾನೇಂದ್ರ

 ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆ ಇದ್ದರೂ ಅವಕಾಶವಿರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ  ಹೇಳಿದರು.  ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತ್ಯುತ್ತಮ ಕಾಲೇಜ್ ಎಂದು ಖ್ಯಾತಿ ಗಳಿಸಿರುವ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು  ಹಾಗೂ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಸೋಮವಾರ ಭೇಟಿ ನೀಡಿ…

Read More