Headlines

ಅಕ್ಟೋಬರ್ ನಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ,ದೇಶದಲ್ಲಿ ದಂಗೆ:ಭವಿಷ್ಯವಾಣಿ

ನವದೆಹಲಿ:ಕೊರೊನಾ ಮೊದಲನೇ,ಎರಡನೇ ಅಲೆಯ ವಿಚಾರದಲ್ಲಿ ಬಹುತೇಕ ಕರಾರುವಕ್ಕಾಗಿ ಭವಿಷ್ಯ ನುಡಿದಿದ್ದ ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಮತ್ತೊಂದು ಆತಂಕಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಮೇ 6ರಿಂದ 26ರವರೆಗಿನ ಅವಧಿಯಲ್ಲಿ ಕೊರೊನಾ ಗರಿಷ್ಠ ಮಟ್ಟಕ್ಕೆ ಹೋಗಲಿದೆ. ಈ ಅವಧಿ ಸ್ವಲ್ಪದಿನ ಅಂದರೆ ಜೂನ್ 3ರವರೆಗೆ ಹೋಗಬಹುದು. ಈ ಅವಧಿ ಮುಗಿದ ನಂತರ, ಕೊರೊನಾ ವೈರಸಿನ ಪ್ರಭಾವ ಕಮ್ಮಿಯಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದರು. ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ಪ್ರಧಾನಿ ಮೋದಿಯವರು ಎಡವಿದ್ದು ಅವರು ರಾಜೀನಾಮೆ ನೀಡಬೇಕಾದ…

Read More

ರಾಜ್ಯದಲ್ಲಿ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಎರಡು ಮಕ್ಕಳ ಯೋಜನಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಟುಂಬಕ್ಕೆ 2 ಮಕ್ಕಳು ಇರಬೇಕು ಎಂಬ ತೀರ್ಮಾನ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರಾಜ್ಯದಲ್ಲಿ ಏನು ಮಾಡ್ಬೇಕು ಎಂದು ಸಿಎಂ ನೇತೃತ್ವದಲ್ಲಿ ಕುಳಿತು ಚರ್ಚೆ,ಯೋಚನೆ ಮಾಡುತ್ತೇವೆ.ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಾ ಹೋಗ್ತಾನೆ ಇದೆ. ಅದನ್ನು ಕಡಿಮೆ ಮಾಡಲು ಬಹಳ ವರ್ಷದಿಂದ ಕೇಂದ್ರ ಸರಕಾರಗಳು ಎಲ್ಲಾ ಪ್ರಯತ್ನ ಮಾಡುತ್ತಿದೆ. ಅದ್ರೇ, ಯಾವುದೇ ಪ್ರಯೋಜನವಾಗುತ್ತಿಲ್ಲ, ಇದರಿಂದ ಬಡತನ, ನಿರುದ್ಯೋಗ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ದೇಶ ಸಂಪದ್ಭರಿತವಾಗಬೇಕಾದರೆ ಜನಸಂಖ್ಯೆ ನಿಯಂತ್ರಣ…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ…

Read More

ವಾಯುಭಾರ ಕುಸಿತ ನಾಳೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ:

ಬೆಂಗಳೂರು: ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಮುಲ್ಕಿಯಲ್ಲಿ 16 ಸೆಂ.ಮೀ, ಕಲಬುರಗಿಯಲ್ಲಿ 11 ಸೆಂ.ಮೀ, ಮಂಗಳೂರು, ಸುಬ್ರಹ್ಮಣ್ಯ,…

Read More

ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More

ಸಾಗರದಲ್ಲಿ ಪಾದಚಾರಿಗೆ ಕಾರಿನಲ್ಲಿ ಗುದ್ದಿ ಚಾಲಕ ಪರಾರಿ:

ಸಾಗರ: ಇಲ್ಲಿನ ಸಿಂಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಆದಿಶಕ್ತಿ ನಗರದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 7.30 ರ ಸುಮಾರಿಗೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆದಿಶಕ್ತಿ ನಗರದ ಬಾಬು(47) ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಾಗರ ಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಶರೀರವನ್ನು ಸಾಗರ…

Read More

ಅನಗತ್ಯ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ವಿರೋಧ :

ರಿಪ್ಪನ್ ಪೇಟೆ : ಇಲ್ಲಿಯ ಗ್ರಾಮ ಪಂಚಾಯಿತಿ ಮುಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಈ ಹಿಂದೆ ವಿಶ್ವ ಯೋಜನೆಯನ್ವಯ ಮಾಡಿರುವ ಚಪ್ಪಡಿ ಕಲ್ಲಿನಲ್ಲಿ ನಿರ್ಮಾಣಗೊಂಡ ಭದ್ರವಾದ ಚರಂಡಿಯನ್ನು ತೆಗೆದು ಹೊಸ ಬಾಕ್ಸ್ ಚರಂಡಿ ಮಾಡಲು ಹೊರಟಿರುವ ಗ್ರಾಮ ಪಂಚಾಯಿತಿ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ. ಆರ್ .ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿ ಸ್ಥಳದಲ್ಲಿಯೇ ಧರಣಿ ನಡೆಸಿದರು.  ಹಿಂದಿನ ಗ್ರಾಮಪಂಚಾಯಿತಿ ಅವಧಿಯಲ್ಲಿ ಅಂದು ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಈಗ ಹಾಲಿ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ  ಮಹಾಲಕ್ಷ್ಮಿ ಅಣ್ಣಪ್ಪ ಇವರು ತಮ್ಮ ವಿವೇಚನಾ…

Read More

ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ:

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ ಪದವಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 35000 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.   ನಮ್ಮಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿಯಿಂದಾಗಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ಬಿಡುತ್ತಾರೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯಿಂದ ಮಕ್ಕಳ ಶಿಕ್ಷಣ ಬಿಡಬಾರದೆಂದು ಕರ್ನಾಟಕ ಸಮಾಜ ಕಲ್ಯಾಣ ವತಿಯಿಂದ ಸರ್ಕಾರವು ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಅಧ್ಯಯನಕ್ಕೆ ಪ್ರೋತ್ಸಾಹಧನವನ್ನು ವಿಂಗಡಿಸಲಾಗಿದೆ. ಪಿಯುಸಿ ಮತ್ತು ಡಿಪ್ಲೋಮೋ : 20000/- ಯಾವುದೇ ಪದವಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು ಇಡಲು ಆಗ್ರಹ:

ರಿಪ್ಪನ್ ಪೇಟೆ: ಶಿವಮೊಗ್ಗದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ನೂತನ ವಿಮಾನ ನಿಲ್ದಾಣಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ರಾಜ್ಯದ ಕೀರ್ತಿಯನ್ನು ಇಡೀ ದೇಶಕ್ಕೆ ಪರಿಚಯಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರ ಹೆಸರನ್ನು  ಇಡಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ರವರಿಗೆ ರಾಜ್ಯ ಜೆಡಿಎಸ್ ಮಾಜಿ ಪ್ರಧಾನಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. .                     …

Read More