Headlines

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ….

Read More

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ ಶಿವಮೊಗ್ಗ ಜಿಲ್ಲೆಯ ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಏರ್ಪಡಿಸಿದ್ದ ಒಂದು ದಿನದ ವಿಶೇಷ ಕಾರ್ಯಾಗಾರವು ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ. ಎಸ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. IPS ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ….

Read More

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಅಸ್ತಿತ್ವಕ್ಕೆ |SJKPS

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಇಂದು ಅಸ್ತಿತ್ವಕ್ಕೆ ಬಂದಿದೆ. ಹೊಸನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಯಡಗೆರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಘಟಕ ಅಸ್ತಿತ್ವಕ್ಕೆ ಬಂದಿತು. ನೂತನ ಅಧ್ಯಕ್ಷರಾಗಿ ವೆಂಕಟೇಶ್ ಮೂರ್ತಿ,ಉಪಾಧ್ಯಕ್ಷರಾಗಿ ನಾರಾಯಣ್ ಕಾಮತ್ ಮತ್ತು ರಫಿ ರಿಪ್ಪನ್‌ಪೇಟೆ ಪ್ರಧಾನ ಕಾರ್ಯದರ್ಶಿಯಾಗಿ ರಿ.ರಾ. ರವಿಶಂಕರ್ ಕಾರ್ಯದರ್ಶಿಯಾಗಿ ಹೆಚ್ ಎಸ್ ನಾಗರಾಜ್ ಕೋಶಾಧಿಕಾರಿಯಾಗಿ ರವಿರಾಜ್ ಎಂ.ಜಿ. ಭಟ್ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ದೀಪಕ್ ಸ್ವರೂಪ್…

Read More

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಎಚ್ಚರಿಕೆಯಿಂದ ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ ಎಂದು ರಿಪ್ಪನ್‌ಪೇಟೆ PSI. ಕೆ. ವೈ ನಿಂಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾ. ಸೇ. ಯೋ. ಪೊಲೀಸ್ ಇಲಾಖೆ ಹಾಗೂ ಐ.ಕ್ಯೂ.ಎ.ಸಿ ವತಿಯಿಂದ ಆಯೋಜಿಸಲಾದ ರಸ್ತೆ ಸುರಕ್ಷೆ ಕಾನೂನು ಅರಿವು…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…

Read More

ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ – ಮೂವರ ವಿರುದ್ದ ಪ್ರಕರಣ ದಾಖಲು|FIR

ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಬ್ರಾಹ್ಮಣವೊಂದರ ಕುಟುಂಬದ ಸಜೀವ ದಹನದ ಕುರಿತಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅ. 8 ರಂದು ರಾಘವೇಂದ್ರ ಕೇಕುಡ, ನಾಗರತ್ನ, ಶ್ರೀರಾಮ್ ಮತ್ತು ಭರತ್ ಎಂಬ ಒಂದೇ ಕುಟುಂಬದ ನಾಲ್ವರು ಮನೆಯ ಕೊಠಡಿಯೊಂದರಲ್ಲಿ ಕಟ್ಟಿಗೆ ಜೋಡಿಸಿಕೊಂಡು ಸಜೀವ ದಹನಕ್ಕೆ ಮುಂದಾಗಿದ್ದರು. ಭರತ್ ಸಾವಿನ ನಂತರ ಪ್ರಕರಣವನ್ನು ಯುಡಿಆರ್ (ಅಸಹಜ ಸಾವಿನ ವರದಿ) ಎಂದು ದಾಖಲಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಭರತ್ ಸಾವಿನ ನಂತರ ರಾಘವೇಂದ್ರ ಅವರ ಪತ್ನಿಯ ಸಹೋದರನ…

Read More

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಮಳಲಿಮಠ ಶ್ರೀಗಳು

ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ…

Read More

ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM

ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…

Read More
Exit mobile version