ರಿಪ್ಪನ್ಪೇಟೆ ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು:
ರಿಪ್ಪನ್ಪೇಟೆ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ ಪ್ರತಾಪ್ ನ ಬೆನ್ನು ಬಿದ್ದಿದ್ದ ಪೊಲೀಸರು ಇಂದು ಹೊಸನಗರ ಮೂಲಕ ಮಂಗಳೂರಿಗೆ ತೆರಳುತ್ತಿರುವ ಖಚಿತ ಮಾಹಿತಿ ಮೇರೆಗೆ ಹೊಸನಗರ ಪಟ್ಟಣದಲ್ಲಿ ಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಶಾಂತವೀರ ಹಾಗೂ ಸಿಪಿಐ ಗಿರೀಶ್ ಮಾರ್ಗದರ್ಶನದಲ್ಲಿ ಪಿಎಸ್…