ಜನಪ್ರತಿನಿಧಿ ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನಶಿಸುತ್ತಿದೆ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ :
ತೀರ್ಥಹಳ್ಳಿ : ತಾಲೂಕಿನ ಮಾಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಿವಮೊಗ್ಗ – ತೀರ್ಥಹಳ್ಳಿಯ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಇತಿಹಾಸ ಪ್ರಸಿದ್ದ ಆಂಜನೇಯ ದೇವಸ್ಥಾನ ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ನಶಿಸುತ್ತಿದೆ. ಆಂಜನೇಯ ದೇವಸ್ಥಾನದಲ್ಲಿ ಪ್ರತಿದಿನ ಪೂಜೆ ಏನೋ ನೆಡೆಯುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಸೌಲಭ್ಯ ಕೂಡ ದೇವಸ್ಥಾನಕ್ಕೆ ದೊರಕುತ್ತಿಲ್ಲ. ಚುನಾವಣೆ ಸಮಯದಲ್ಲಿ ದೇವಸ್ಥಾನಕ್ಕೆ ಹಲವು ಬಾರಿ ಈಗಿನ ಗೃಹ ಸಚಿವರು ಅದ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕರು ಆಗಿರುವ ಕಿಮ್ಮನೆ ರತ್ನಾಕರ್ ಭೇಟಿ ನೀಡಿದ ದೇವಸ್ಥಾನವನ್ನು…