ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ :
ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ ಇಂದು ಕೋಡೂರು, ಹುಂಚ ವ್ಯಾಪ್ತಿಯ ರೈತರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕಲಗೋಡು ರತ್ನಾಕರ ಮತ್ತು ತಾ.ಪಂ.ಮಾಜಿ ಸದಸ್ಯ ಚಂದ್ರಮೌಳಿಗೌಡ ನೇತೃತ್ವದಲ್ಲಿ ಹೊಸನಗರದ ಮೆಸ್ಕಾಂ ಕಛೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರೈತರ ಸಮಸ್ಯೆಗೆ ಮೆಸ್ಕಾಂ ಇಲಾಖೆ ಸ್ಪಂದಿಸಿ…


