Headlines

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ|jds

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟನೆಗೆ ಅಣಿಯಾಗುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಮೊದಲಿಗೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ…

Read More

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ|lokayuktha

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ನೌಕರ ಶಿವಮೊಗ್ಗದ  ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಗೋಪಿನಾಥ್  ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದಾರೆ.ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.  ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್​ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್​ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ  ದೂರು ದಾಖಲಾಗಿತ್ತು.  ದೂರಿನನ್ವಯ ಲೋಕಾಯುಕ್ತ…

Read More

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಯುವಕರು ಕಣ್ಮರೆ

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಕಣ್ಮರೆ ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ. ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ. ಸಿಗಂದೂರು,…

Read More

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ – ಬಿ ವೈ ರಾಘವೇಂದ್ರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಬಗ್ಗೆ ಕೆಲವು ನಾಯಕರು ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ. ರಾಜಕಾರಣ ಮಾಡಲು ಬೇರೆ ವಿಚಾರಗಳಿದೆ. ಅದನ್ನೆಲ್ಲ ಬಿಟ್ಟು ಅಲ್ಲಿ ಆರ್ ಎಸ್ ಎಸ್ ಅನ್ನು ಎಳೆಯುವಂತಹದ್ದು ಸರಿಯಲ್ಲ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನವರಿಗಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು.  ತೀರ್ಥಹಳ್ಳಿಯಲ್ಲಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ ಆರ್ ಎಸ್ ಎಸ್ ಎಂಬುದು ದೇಶಕ್ಕೋಸ್ಕರ, ಹಿಂದೂ ರಾಷ್ಟ್ರಕ್ಕೊಸ್ಕರ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚ್ಯೂನರ್ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡುರೂ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚುನರ್ ಕಾರು ಪಲ್ಟಿಯಾದ ಘಟನೆ ನಡೆದಿದೆ. ಸೂಡೂರು ಗೇಟ್ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕುಂದಾಪುರ ಮೂಲದವರಾದ ಉದಯ್ ಕುಮಾರ್ ಕುಟುಂಬ ಬೆಂಗಳೂರಿನಲ್ಲಿ ವಾಸಿಸುತಿದ್ದು ಮದುವೆ ಕಾರ್ಯಕ್ರಮದ ನಿಮಿತ್ತ ಕುಂದಾಪುರಕ್ಕೆ ಬಂದು ವಾಪಾಸ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಒಬ್ಬರಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ಶಿವಮೊಗ್ಗದ…

Read More

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಒಂದು ವಾರದೊಳಗೆ ಎನ್ಐಎಗೆ ಹಸ್ತಾಂತರ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಹರ್ಷನ ಕೊಲೆ ಪ್ರಕರಣವನ್ನ ಇನ್ನೊಂದು ವಾರದೊಳಗೆ ಎನ್ಐಎ ತನಿಖಾ ತಂಡಕ್ಕೆ ಒಪ್ಪಿಸಲಾಗುವುದು ಎಂದು ಕೃಷಿ ಮತ್ತು ರೈತರ ಕಲ್ಯಾಣ ಕೇಂದ್ರ ಮಂತ್ರಿ ಶೋಭ ಕರದ್ಲಾಂಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳಿಗೆ ಮಾತನಾಡಿ ಹರ್ಷನ ಸಾವು ಕೇವಲ ಕುಟುಂಬಕ್ಕೆ ದುಖ ತಂದಿಲ್ಲ ಬದಲಿಗೆ ಇಡೀ ದೇಶಕ್ಕೆ ನೋವುತಂದಿದೆ ಎಂದರು. ಹರ್ಷನ ಸಾವಿನ ಹಿಂದೆ ಅಂತರಾಷ್ಟ್ರೀಯ ಷಡ್ಯಂತರ ಅಡಗಿದೆ ಎಂಬ ಶಂಕೆ ಇದೆ. ಈ ಹೇಳಿಕೆಯನ್ನ…

Read More

ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan

2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ…

Read More

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಶಿವಮೊಗ್ಗ:ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ  ನಂಜಪ್ಪ ಲೇ ಔಟ್ ನಲ್ಲಿರುವ ಖಾಸಗಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ದ್ವಿತಿಯ ಪಿಯು ವಿದ್ಯಾರ್ಥಿನಿ ಮೂರ್ಛೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಲೇಜಿನಲ್ಲಿ ಇದ್ದಕ್ಕಿದ್ದ ಹಾಗೆ ಅಸ್ವಸ್ಥಗೊಂಡು ಪ್ರಿನ್ಸಿಫಾಲರ ರೂಮ್‌ನ ಬಾಗಿಲಲ್ಲಿಯೇ ವಿದ್ಯಾರ್ಥಿನಿ ಕುಸಿದುಬಿದ್ದಿದ್ದಳು. ತಕ್ಷಣವೇ ಅಲ್ಲಿಂದ ಕಾರೊಂದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿ ಓದಿದ್ದ…

Read More
Lonely road

Morbi non suscipit massa nulla congue libero

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More