Headlines

ಅನಾಮಧೇಯ ಶವ: ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ : ಜ.08 ರಂದು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅನಾಮಧೇಯ ವೃದ್ದರೋರ್ವರು ಮರಣ ಹೊಂದಿದ್ದಾರೆ.      ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಲಾಗಿದ್ದ ಸುಮಾರು 60 ರಿಂದ 65 ವರ್ಷದ ಅನಾಮಧೇಯ ವೃದ್ದರು ಮೃತಪಟ್ಟಿದ್ದು ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ. ಮೃತರು ಸುಮಾರು 5.6 ಅಡಿ ಎತ್ತರ ಇದ್ದು ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು, 01 ಇಂಚು ಉದ್ದದ ಬಿಳಿ ಗಡ್ಡ ಮೀಸೆ ಇರುತ್ತದೆ. ಮುಂಭಾಗದ…

Read More

ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಾಸಕ ಬಸವನಗೌಡ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ..!

 ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯದ ಬುದ್ಧಿಜೀವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರ ಪ್ರತಿಕೃತಿ ದಹಿಸುವ ಮೂಲಕ ಯುವಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಬಿಹೆಚ್ ರಸ್ತೆಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಅವರ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಮತ್ತು ಬುದ್ದಿ ಜೀವಿಗಳ ಬಗ್ಗೆ ಅಸಂಬದ್ದವಾಗಿ,ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹುಚ್ಚ…

Read More

ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ

ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.

Read More

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ – ಪತಿ‌, ಅತ್ತೆ ಮತ್ತು ನಾದಿನಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್|Crime News

ಶಿವಮೊಗ್ಗ : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುರಿಯಲಿದೆ ಆದೇಶಿಸಿದೆ. ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ…

Read More

ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ : ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೆಹಬೂಬ್ ಆಲಾಮ್ ರವರ ನೇತೃತ್ವದಲ್ಲಿ  ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.  ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಸೋಮವಾರ ಚಂದ್ರನ ದರ್ಶನ ಆದ ಹಿನ್ನೆಲೆಯಲ್ಲಿ  ಇಂದು…

Read More

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸುಮಂತ ಎಲ್. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ   ಕ್ರೀಡಾ ಕೂಟದ ಬಾಲಕರ ತಟ್ಟೆ ಎಸೆತ ಸ್ಪರ್ಧೆಯಲ್ಲಿ ಈತ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ…

Read More

ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದ ಆರ್ ಶಂಕರ್ | shiggav

ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದ ಆರ್ ಶಂಕರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಗಳನ್ನು ಮಾಜಿ ಸಚಿವ ಆರ್ ಶಂಕರ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಆರ್ ಶಂಕರ್ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ…

Read More

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ! ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು  ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬದ ಗುಂಪಿನಲ್ಲಿ ಮಾರಿಕೆರೆ ದಡದಿಂದ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ತೀರ್ಥಹಳ್ಳಿಯ ಹೊದಲದಲ್ಲಿ ಕಂಡುಬಂದಿದ್ದು ಯಾವ ಕಾರಣಕ್ಕೆ ಬಂದಿದೆ ಎಂಬುದು ಮಾತ್ರ…

Read More

ಬೆಳೆಯುವ ಮಕ್ಕಳಲ್ಲಿ ಸಂಸ್ಕಾರ ಅರಳಬೇಕು: ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಒಂದು ಶಾಲೆ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆ ಶಾಲೆಯಿಂದ ಮಕ್ಕಳ ಮನಸ್ಸಿನಲ್ಲಿ ಸಂಸ್ಕಾರ ಅರಳುವಂತಾಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಹೆದ್ದಾರಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ 25 ಲಕ್ಷ ರೂ ವೆಚ್ಚದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಾಲೆಗಳು ದೇವಸ್ಥಾನಕ್ಕೆ ಸಮ. ದೇವಸ್ಥಾನಕ್ಕೆ ಕೊಡುವುದನ್ನು ಶಾಲೆಗಳಿಗೆ ಕೊಟ್ಟರೆ ಅಂತಹ ದಾನಿಗಳಿಗೆ ಹತ್ತು ಪಟ್ಟು ಹೆಚ್ಚು ಪುಣ್ಯಪ್ರಾಪ್ತಿಯಾಗುತ್ತದೆ. ಭಾಷಣದಿಂದ ಸಮಾಜ ಪರಿವರ್ತನೆಯಾಗವುದಿಲ್ಲ. ಅಧ್ಯಾಪಕರ ಪ್ರಮಾಣಿಕ ಪ್ರಯತ್ನದಿಂದ ಇಲ್ಲಿನ ಹಣತೆಗಳನ್ನು ದೇಶ ಬೆಳಗಲು ಪ್ರೇರೇಪಿಸಬಹುದು…

Read More

ಯಡಿಯೂರಪ್ಪ ಪ್ರಯಾಣಿಸುತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ತಪ್ಪಿದ ಭಾರಿ ಅನಾಹುತ|BSY

ಇಂದು ಕಲಬುರಗಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು.ಇದು ಕೆಲಕಾಲ ಆತಂಕ ಮೂಡಿಸಿತ್ತು.  ನಡೆದಿದ್ದೇನು??? :  ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  ಘಟನೆಯ ಬಗ್ಗೆ ವಿವರಣೆ ನೀಡಿದ ಪೈಲೆಟ್ ಜೋಸೆಪ್​, ಕ್ಯಾಮರಾದಲ್ಲಿ ರೆಕಾರ್ಡ್…

Read More
Exit mobile version