Headlines

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್‌ ಈಶ್ವರಪ್ಪ…

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಉರುಳಿಬಿದ್ದ ಬೃಹತ್ ಮರ :

ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಆಗುಂಬೆ ಘಾಟಿಯಲ್ಲಿ ಮರ ಉರುಳಿ ಬಿದ್ದ ಘಟನೆ ನಡೆದಿದೆ. ಈ ಘಟನೆಯಿಂದ ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ,ಮರ ಬಿದ್ದಿರುವ ಹಿನ್ನಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸೋಮೇಶ್ವರ ಕಡೆಯಿಂದ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಚಾಲಕ ಮತ್ತು ಪಕ್ಕದಲ್ಲಿದ್ದ ಮತ್ತೊಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಮರ ಬಿದ್ದ ತಕ್ಷಣ ಗಾಬರಿಯಾದ ಚಾಲಕ…

Read More

ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ..!!|deadbody

ತೀರ್ಥಹಳ್ಳಿ : ಪಟ್ಟಣದ ಹೊಸ ಕೋರ್ಟ್ ಬಳಿ  ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. 4 ದಿನಗಳ ಹಿಂದೆಯೇ ಲಾರಿಯಲ್ಲೇ ಹೃದಯಾಘಾತದಿಂದ  ಸಾವನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯಿಂದ ಲಾರಿಯಲ್ಲಿ ಲೋಡ್ ತುಂಬಿಸಿಕೊಂಡು ಬಂದು ತೀರ್ಥಹಳ್ಳಿಯಲ್ಲಿ ಇಳಿಸಿ ರಾತ್ರಿ ಊಟ ಮಾಡಿ ಲಾರಿಯಲ್ಲಿ ಮಲಗಿದ್ದಾಗ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಂದಾಜು 50 ವರ್ಷದ ವ್ಯಕ್ತಿ ಎನ್ನಲಾಗುತಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶವವಾಗಿ ಪತ್ತೆಯಾದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ : ಸತತ ಮೂರು ದಿನಗಳ ಕಾರ್ಯಾಚರಣೆ ನಂತರ ಪತ್ತೆ

ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲಿಕ ಪ್ರಕಾಶ್ ರವರ ಶವ ಕೊನೆಗೂ ಪಟಗುಪ್ಪ ಹೊಳೆಯಲ್ಲಿ  ಪತ್ತೆಯಾಗಿದೆ. ಕಳೆದ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಪ್ರಕಾಶ್,ಶನಿವಾರ ಅವರ ಮೊಬೈಲ್ ಹಾಗೂ ಕಾರು ಪಟಗುಪ್ಪೆ ಸೇತುವೆ ಬಳಿ ಪತ್ತೆಯಾಗಿದ್ದವು.ಕೂಡಲೇ ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದ ಅಗ್ನಿಶಾಮಕದಳ ಹಾಗೂ ಮುಳುಗು ತಜ್ಞರಿಂದ ಶೋಧ ಕಾರ್ಯ ನಡೆದಿತ್ತು.ಆದರೆ ಮೂರು ದಿನ ಸತತವಾಗಿ ಶೋಧ ಕಾರ್ಯ ನಡೆಸಿದರು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳ್ಳಗ್ಗೆ ಪ್ರಕಾಶ್ ಅವರ ಶವ ಪಟಗುಪ್ಪೆ ಹೊಳೆಯಲ್ಲಿಯೇ ಪತ್ತೆಯಾಗಿದೆ. ಅವರ ಹಿತೈಷಿಗಳು ಮತ್ತು ಕುಟುಂಬಸ್ಥರು ಈ ಪ್ರಕರಣದ ಹಿಂದೆ…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read More

ವಿಧಾನಸಭಾ ಚುನಾವಣೆಗೆ ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ|congress

ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲಾ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಾರಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕಳೆದ ಕೆಲವು ದಿನಗಳಿಂದ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಪುನಃ ಕಾಗೋಡು ತಿಮ್ಮಪ್ಪ ಸ್ಪರ್ಧೆ ಮಾಡುತ್ತಾರೆ…

Read More

ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ…

Read More

ಆನಂದಪುರದ ಕಣ್ಣೂರು ಸಮೀಪ ರಸ್ತೆ ಅಪಘಾತ : ಓರ್ವ ಸ್ಥಳದಲ್ಲೇ ಸಾವು,ಚಾಲಕನ ಸ್ಥಿತಿ ಚಿಂತಾಜನಕ :

ಸಾಗರ : ಇಲ್ಲಿನ ಆನಂದಪುರ ಸಮೀಪದ ಕಣ್ಣೂರು ಬಳಿ ಲಾರಿ ಹಾಗೂ ಅಶೋಕ್ ಲೈಲಾಂಡ್ ಮಿನಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅಶೋಕ್ ಲೈಲಾಂಡ್ ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ವಾಹನದ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.  ಮೃತನು ಶಿರಾಳಕೊಪ್ಪ ಮೂಲದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರ ಹೋಗುತ್ತಿತ್ತು,ಅಶೋಕ್ ಲೈಲಾಂಡ್ ಮಿನಿವಾಹನ ಶುಂಠಿ ತುಂಬಿಕೊಂಡು ಕುಂದಾಪುರ ಹೊಗುತ್ತಿದ್ದವು. ಅಪಘಾತದ ಸ್ಥಳದಲ್ಲಿ ಅರ್ಧ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್…

Read More