Headlines

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು !!!!

ತೀರ್ಥಹಳ್ಳಿ: ತೀರ್ಥಹಳ್ಳಿಯ  ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ. ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್  (19) ಹಾಗೂ ಸೊನಲೆಯ  ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ  ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ  ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ…

Read More

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ  ಶಾಮನೂರು ಶಿವಶಂಕರಪ್ಪ ನಿಧನವು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಪತ್ರೀಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ತಮ್ಮ ನೇರ ನುಡಿ, ದೃಢ…

Read More

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತನ ಹರಕೆ

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಟ್ಟಾ ಕಾರ್ಯಕರ್ತನ ಹರಕೆ ರಿಪ್ಪನ್‌ಪೇಟೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗೆಲುವಿಗಾಗಿ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತರೊಬ್ಬರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದ ಸನ್ನಿಧಿಗೆ ಆಗಮಿಸಿ ತನ್ನ ಅಭಿಮಾನಿಯೊಂದಿಗೆ ಹರಕೆಯನ್ನು ಸಲ್ಲಿಸಿರುವ ಘಟನೆ ನಡೆದಿದೆ. ಪಟ್ಟಣದ ಬಿಜೆಪಿ ಕಟ್ಟಾ ಕಾರ್ಯಕರ್ತ ಹರೀಶ್ ಪ್ರಭು ಎಂಬುವರು ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್…

Read More

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ…

Read More

ಕುಕ್ಕಳಲೆ ಗ್ರಾಮದ ಪ್ರಗತಿಪರ ಕೃಷಿಕರಾದ ಪುಟ್ಟಸ್ವಾಮಿಗೌಡರು ನಿಧನ

ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸಂತಾಪ: ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ…

Read More

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More

ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ

A heartbreaking incident from Ramanagara where a monkey mourns the death of an elderly woman who used to feed it, highlighting the emotional bond between humans and animals. ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ ಮಾನವೀಯತೆ ಎಂದರೆ ಕೇವಲ ಮನುಷ್ಯರಲ್ಲಿ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ಅದೆಷ್ಟೋ ಆಳವಾಗಿ ನೆಲೆಸಿದೆ ಎಂಬುದನ್ನು ತೋರಿಸುವ ಮನಕಲಕುವ ಘಟನೆ ರಾಮನಗರ ಜಿಲ್ಲೆಯ ರಾಯರದೊಡ್ಡಿಯಲ್ಲಿ ನಡೆದಿದೆ. ತನಗೆ ಆಹಾರ…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News ಶಿವಮೊಗ್ಗ : ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು…

Read More

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಹಲ್ಲೆ, ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಭತ್ತು ಮಂದಿ ಆರೋಪಿಗಳನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಪವನ್ , ಮಂಜುನಾಥ್, ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ್, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪವನ್‌ ಮತ್ತು ಕಿರಣ್‌ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಗುರುವಾರ ರಾತ್ರಿ ನೇತಾಜಿ ಸರ್ಕಲ್‌ನಲ್ಲಿ ಗಲಾಟೆಯಾಗಿತ್ತು….

Read More