ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ನಡುವೆ ಗುರುವಾರ ರಾತ್ರಿ ಸಂಭವಿಸಿದೆ. ಅವಲಗೋಡು ಗ್ರಾಮದ ಯುವರಾಜ್ ಗಣಪತಿ (38) ಮೃತ ಬೈಕ್ ಸವಾರ. ಉಳುವಿಯಿಂದ ಅವಲಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಗೆ ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ…


