Headlines

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ|church

ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ ರಿಪ್ಪನ್‌ಪೇಟೆ : ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಶಿವಮೊಗ್ಗ ಮಲ್ಟಿಪಲ್ ಸೋಷಿಯಲ್ ಸರ್ವಿಸ್ ನಿರ್ದೇಶಕರಾದ ಧರ್ಮಗುರು ರೋಷನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ ಅವರು ಸಮಾಜದಲ್ಲಿನ ಪ್ರತಿಯೊಬ್ಬರು ಪ್ರೀತಿಯನ್ನು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ | ಬೇಳೂರು ಸ್ಪರ್ಧೆಗೆ ಗ್ರೀನ್ ಸಿಗ್ನಲ್

 ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿರುವುದು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸಿದೆ. ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ರವರಿಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು…

Read More

ಜನ ಸಾಮಾನ್ಯರ ಪ್ರಶಂಸೆಗೆ ಪಾತ್ರರಾದ ರಿಪ್ಪನ್ ಪೇಟೆಯ ಗ್ರಾಮ ಪಂಚಾಯತಿಯ ಯುವ ಸದಸ್ಯ::

ರಿಪ್ಪನ್ ಪೇಟೆ:: ರಾಜ್ಯಾದ್ಯಂತ ಕೋವಿಡ್ ಹಿನ್ನಲೆ ಲಾಕ್ ಡೌನ್ ಹೇರಿಕೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವಾಗ ರಿಪ್ಪನ್ ಪೇಟೆಯ ಬರುವೆ 3 ನೇ ವಾರ್ಡಿನ ಗ್ರಾಮ ಪಂಚಾಯಿತಿಯ ಯುವ ಸದಸ್ಯರಾದ ನಿರೂಪ್ ಕುಮಾರ್ ರವರು ಜನರ ಕಷ್ಟಕ್ಕೆ ಬೆನ್ನಿಗೆ ನಿಂತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಮಾದರಿಯಾಗಿದ್ದಾರೆ.. ವೈಯಕ್ತಿಕವಾಗಿ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಮುಖಾಂತರ ತನ್ನ ವಾರ್ಡಿನ ಸುಮಾರು 300 ಕುಟುಂಬಕ್ಕೆ ದಿನಸಿ ಕಿಟ್ ಕೊಟ್ಟು ಅವರ ಕಷ್ಟಕ್ಕೆ ಬೆಂಬಲವಾಗಿ ನಿಂತು ಆ ಕುಟುಂಬಗಳಲ್ಲಿ…

Read More

ಯುವತಿ ನಾಪತ್ತೆ : ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

An 18-year-old girl, Rakshitha G R from Kenchanala village in Hosanagara taluk of Shivamogga district, has gone missing since March 21, 2026. Public requested to share any information. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಳ ಗ್ರಾಮದ ಗೌಡಕೊಪ್ಪ ನಿವಾಸಿಯಾದ ರಕ್ಷಿತಾ ಜಿ.ಆರ್ (18) ಅವರು ಕಾಣೆಯಾಗಿರುವ ಬಗ್ಗೆ ಪ್ರಕರಣ ವರದಿಯಾಗಿದೆ. ರಕ್ಷಿತಾ ಅವರು ರಂಗನಾಥ್ ಅವರ ಪುತ್ರಿಯಾಗಿದ್ದು, ದಿನಾಂಕ 21.03.2026 ರಂದು ಬೆಳಿಗ್ಗೆ ಸುಮಾರು 11…

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More

RIPPONPETE | ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ ಪೇಟೆ ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ…

Read More

ಕಾಂಗ್ರೆಸ್ ಮೂರನೇ ಪಟ್ಟಿ ಪ್ರಕಟ – ಶಿವಮೊಗ್ಗ ನಗರ,ಗ್ರಾಮಾಂತರದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ|Congress

ಕಾಂಗ್ರೆಸ್‌ ಮೂರನೆ ಪಟ್ಟಿಯಲ್ಲಿ ಇಬ್ಬರು ಮಾಜಿ ಶಾಸಕರ ಮಕ್ಕಳಿಬ್ಬರಿಗೆ ಅದೃಷ್ಟ ಒಲಿದಿದೆ. ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಲಾಗಿದೆ. ಶಿಕಾರಿಪುರದಲ್ಲಿ ಗೋಣಿ ಮಾಲ್ತೇಶ್‌ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ತೀವ್ರ ಕುತೂಹಲ ಮೂಡಿತ್ತು. ಹಲವು ಲೆಕ್ಕಾಚಾರ, ಊಹಾಪೋಹ, ಲಾಬಿಗಳು ಕೂಡ ನಡೆದಿದ್ದವು. ಮೂರನೇ ಪಟ್ಟಿಯಲ್ಲಿ ಈ ಕುತೂಹಲಗಳಿಗೆ ತೆರೆ ಬಿದ್ದಿದೆ. ಶಿವಮೊಗ್ಗದಿಂದ ಮಾಜಿ ಶಾಸಕ ಹೆಚ್‌.ಎಂ.ಚಂದ್ರಶೇಖರಪ್ಪ ಪುತ್ರ ಹೆಚ್‌.ಸಿ.ಯೋಗೇಶ್‌ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ….

Read More

ತೀರ್ಥಹಳ್ಳಿ : ಎಬಿವಿಪಿ ತಾಲೂಕು ಅಧ್ಯಕ್ಷನ ಮೇಲೆ ಯುವಕರಿಂದ ಹಲ್ಲೆ!!!: ಲಘು ಲಾಠಿ ಪ್ರಹಾರ

ತೀರ್ಥಹಳ್ಳಿ : ಎಬಿವಿಪಿ ತಾಲೂಕು ಅಧ್ಯಕ್ಷ ಮತ್ತು ಆತನ ಸ್ನೇಹಿತನ ಮೇಲೆ 15 ಜನ ಯುವಕರು ಹಲ್ಲೆ ನಡೆಸಿದ್ದು ಗಲಾಟೆಯನ್ನ ಬಿಡಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿರುವ ಘಟನೆ ಪಟ್ಟಣದ ಬಾಳೆಬೈಲು ಸಮೀಪ ಇಂದು ನಡೆದಿದೆ. ತೀರ್ಥಹಳ್ಳಿಯ ಜಿಪಿಎಸ್ ಸಿ ಕಾಲೇಜಿನಲ್ಲಿ ಬಿಸಿಎ ಓದುತ್ತಿರುವ ಹಾಗೂ ಎಬಿವಿಪಿ ಸಂಘಟನೆಯ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡ ಮಳೆ ಅಧಿಕವಾಗಿರುವುದರಿಂದ ಮನೆಗೆ ತೆರಳಲು ಸ್ನೇಹಿತನಿಗೆ ಕಾರು ತರಲು ಹೇಳಿರುತ್ತಾನೆ. ಅದೇ ಸಮಯಕ್ಕೆ ನಿಶಾಂತ್ ಟಾಟಾ ಇಂಡಿಕಾ ಕಾರನ್ನ ತಂದಿದ್ದಾನೆ….

Read More