Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

ಅಕ್ರಮ ಮರಳು ತುಂಬಿಸಿ ಮೇಲೆ ಎಂ ಸ್ಯಾಂಡ್ ಲೇಪನ – ಟ್ರ್ಯಾಕ್ಟರ್ ವಶಕ್ಕೆ.!!!|sand mafia

ಶಿವಮೊಗ್ಗ – ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೊಮ್ಮನಕಟ್ಟೆ ಜಿ ಬ್ಲಾಕ್ ನಲ್ಲಿ ನಡೆದಿದೆ. ಮರಳಿನ ರಾಯಲ್ಟಿ(royalty) ವಿಚಾರದಲ್ಲಿ ಟ್ರ್ಯಾಕ್ಟರ್ ನಲ್ಲಿ ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಲಾಗಿತ್ತು. ಲಾರಿಯ ರಾಯಲ್ಟಿ ಪಡೆದಿದ್ದ ಸ್ಥಳೀಯರೊಬ್ಬರು ಟ್ರ್ಯಾಕ್ಟರ್ ನಲ್ಲಿ ಮರಳು ತುಂಬಿ ಅದರ ಮೈಮೇಲೆ ಎಂಸ್ಯಾಂಡ್ ಮುಚ್ಚಿದ್ದಾರೆ ಎಂದು ಬೊಮ್ಮನ್ ಕಟ್ಟೆಯ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.  ಪೊಲೀಸರು ಸ್ಥಳಕ್ಕೆ ಬಂದು…

Read More

ರಾಷ್ಟ್ರ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ|volleyball

ರಿಪ್ಪನ್ ಪೇಟೆ : ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ (16ವರ್ಷದೊಳಗಿನ ವಯೋಮಿತಿ ) ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಶ್ರೀರಾಮನಗರ ನಿವಾಸಿಗಳಾದ ಶೇಖಬ್ಬ ಹಾಗೂ ಸೈಫುನ್ನಿಸಾ ದಂಪತಿಗಳ ಪುತ್ರನಾದ ಸೂಫಿಯಾನ್ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ…

Read More

ನಿಗದಿತ ಅವಧಿಯ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುತ್ತೆ: ಸಚಿವ ಸಿ.ಸಿ.ಪಾಟೀಲ್

ಶಿವಮೊಗ್ಗ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ…

Read More

Ripponpete | ಸರ್ವ ಧರ್ಮದ ಸಾರವೂ ಒಂದೇ – ಪ್ರೋ ಹೆಚ್ ವಿ ರಾಮಪ್ಪಗೌಡ

ಸಂತೃಪ್ತಿಯ ಬದುಕಿಗೆ ಧರ್ಮ ಧಾರ್ಮಿಕ ಕಾರ್ಯಗಳು ಪೂರಕ ರಿಪ್ಪನ್‌ಪೇಟೆ;-ಆಘೋಚರ ಶಕ್ತಿಯೇ ದೇವರು.ಸರ್ವಾ ಧರ್ಮದ ಸಾರವೂ ಒಂದೇ ಅಗಿದ್ದು ಏಕಾಗ್ರತೆಯಿಂದ ಭಗವಂತನಲ್ಲಿ ಪ್ರಾರ್ಥಿಸಿದಲ್ಲಿ ಪುಣ್ಯ ಪ್ರಾಪ್ತಿಯೊಂದಿಗೆ ಸಂತೃಪ್ತಿ ದೊರೆಯುವುದೆಂದು  ಶಿವಮೊಗ್ಗ ಹೆರೆಗೊಡಿಗೆ ನಿವೃತ್ತ  ಪ್ರೋ.ಹೆಚ್.ವಿ.ರಾಮಪ್ಪಗೌಡ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಹೊಸನಗರದ  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಆಯೋಜಿಸಿದ್ದ ಗ್ರಾಮ ಸುಭಿಕ್ಷೆಗಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ೪೫೮ ನೇ ನಮ್ಮೂರ ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಭ್ರಷ್ಟಾಚಾರ…

Read More

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ  ರಿಪ್ಪನ್‌ಪೇಟೆ : ‌ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್‌ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ‌. ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ…

Read More

ಸಿನಿಮೀಯ ರಿತಿಯಲ್ಲಿ ದನಗಳ್ಳರನ್ನು ಮಟ್ಟ ಹಾಕಿದ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ : ರಿಪ್ಪನ್ ಪೇಟೆ ಪೊಲೀಸರು ಬದುಕುಳಿದಿದ್ದೆ ಹೆಚ್ಚು

ಹೊಸನಗರ :  ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ.  ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ದನಕಳ್ಳರು ಮಾರಕಾಸ್ತ್ರಗಳಿಂದ ಬೆದರಿಸಿ ವಾಹನ ಚಲಾಯಿಸಿದ್ದಾರೆ.ಕೂಡಲೇ ಗ್ರಾಮಸ್ಥರು ತಹಸಿಲ್ದಾರ್ ವಿ.ಎಸ್. ರಾಜೀವ್‌ ಮತ್ತು ಸಿಬ್ಬಂದಿಗಳ ತಂಡಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತರಾದ ರಾಜೀವ್ ದನಗಳ್ಳರ ವಾಹನ ಹೊಸನಗರದಿಂದ ರಿಪ್ಪನ್ ಪೇಟೆ…

Read More

ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ

ಗಣಪತಿ ವಿಸರ್ಜನೆಗೆ ತೆರಳಿದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ ಶಿವಮೊಗ್ಗ : ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕನು ಆನೆ ಟ್ರಂಚ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಗೆರೆ ಅಂಚೆಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಮೃತನನ್ನು ನಾಗರಾಜ್ (34) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದ್ದು, ನಿನ್ನೆ ವಿಸರ್ಜನೆ ನೆರವೇರಿಸಲಾಯಿತು. ಈ ವೇಳೆ ಟ್ರಂಚ್‌ ಬಳಿ ಕಾಲು ಜಾರಿ ಬಿದ್ದು ದುರ್ಘಟನೆ…

Read More

ಏಕ ಕಾಲದಲ್ಲಿ 5 ಲಕ್ಷ ಜನ ಕನ್ನಡ ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಕನ್ನಡದ ವಿಶೇಷ ಮೂರು ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ತಿಳಿಸಿದ್ದಾರೆ. ಇಂದು ನಗರದಲ್ಲಿ ನಡೆದ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಎಂದು ನಡೆದ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ರಾಜ್ಯದ ಇತಿಹಾಸದಲ್ಲಿ ಈ ದಿನವನ್ನು ನೆನಪಿಟ್ಟುಕೊಳ್ಳಬೇಕು. ಈ ಯಶಸ್ವಿ ಕಾರ್ಯಕ್ರಮಕ್ಕೆ ಕಾರಣರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

ಅನುದಾನ ಕೊರತೆ: ಗೃಹ ಸಚಿವರ ತವರು ಕ್ಷೇತ್ರದಲ್ಲಿಯೇ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯರು ವಿಧಾನ ಪರಿಷತ್ ಚುನಾವಣೆ ಬಹಿಷ್ಕರಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಏಳು ಜನರು ಈ ಬಾರಿ ಮತದಾನ ಮಾಡದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಾಲೂರು ಕೊಳಿಗೆ ಗ್ರಾಮ ಪಂಚಾಯತಿಗೆ ಈವರೆಗೆ 1.68 ಕೋಟಿ ರೂಪಾಯಿ ಸರ್ಕಾರದ ಅನುದಾನ ಬಂದಿಲ್ಲ. ನಾಲೂರು ಕೊಳಿಗೆ ವ್ಯಾಪ್ತಿಯ ಮೂರು ಮರಳು ಕ್ವಾರಿಗಳು ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ…

Read More
Exit mobile version