Headlines

ಮುಂದುವರಿದ ವರುಣನ ಆರ್ಭಟ..ಮುಳುಗಡೆ ಭೀತಿಯಲ್ಲಿ ಕರ್ನಾಟಕದ ಅನೇಕ ಜಿಲ್ಲೆಗಳು..

ಪಶ್ಚಿಮಘಟ್ಟದಲ್ಲಿ ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಶುಕ್ರವಾರದ ಹೊತ್ತಿಗೆ ಇನ್ನಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟ ಭಾಗದ ನದಿಗಳೆಲ್ಲ ಮೈದುಂಬಿ ಹರಿಯುತ್ತಿದ್ದು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಹರಾಷ್ಟ್ರ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿರುವ ಪರಿಣಾಮ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭಿತಿ ಎದುರಾಗಿದೆ. ಉತ್ತರ ಕನ್ನಡ ಶಿವಮೊಗ್ಗ, ಉಡುಪಿ, ಕೊಡಗು, ದಕ್ಷಿಣ ಕನ್ನಡದಲ್ಲಿ ವಾರದ ಮಳೆ ಶನಿವಾರದ ಹೊತ್ತಿಗೆ ಧಾರಕಾರವಾಗಿ ಸುರಿಯುತ್ತಿದ್ದು ನದಿಗಳೆಲ್ಲ ತುಂಬಿ ಹರಿಯತೊಡಗಿವೆ. ಕೃಷ್ಣ ಮತ್ತು ಕಾವೇರಿ ಕೊಳ್ಲದಲ್ಲಿ ಭಾರಿ ಮಳೆಯ…

Read More

ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More

ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ

A heartbreaking incident from Ramanagara where a monkey mourns the death of an elderly woman who used to feed it, highlighting the emotional bond between humans and animals. ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ ಮಾನವೀಯತೆ ಎಂದರೆ ಕೇವಲ ಮನುಷ್ಯರಲ್ಲಿ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ಅದೆಷ್ಟೋ ಆಳವಾಗಿ ನೆಲೆಸಿದೆ ಎಂಬುದನ್ನು ತೋರಿಸುವ ಮನಕಲಕುವ ಘಟನೆ ರಾಮನಗರ ಜಿಲ್ಲೆಯ ರಾಯರದೊಡ್ಡಿಯಲ್ಲಿ ನಡೆದಿದೆ. ತನಗೆ ಆಹಾರ…

Read More

12 ದೇವಸ್ಥಾನದಲ್ಲಿ ಹುಂಡಿ ಕಳುವು ಮಾಡಿದ್ದ ಅಂತರ್ ಜಿಲ್ಲಾ ಹುಂಡಿ‌ ಕಳ್ಳರ ಬಂಧನ :

ಶಿವಮೊಗ್ಗ: ಅಂತರ ಜಿಲ್ಲಾ ದೇವಾಲಯಗಳಲ್ಲಿ ಕಳವು ಮಾಡಿದ್ದ ಇಬ್ಬರು ಹುಂಡಿ ಕಳ್ಳರನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಹಾವೇರಿ ದಾವಣಗೆರೆ ಜಿಲ್ಲೆಯ ಒಟ್ಟು 12 ದೇವಾಲಯಗಳಲ್ಲಿ ಹುಂಡಿಗಳ ಕಳ್ಳತನ ಮಾಡಿರುವುದು ಬಯಲಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಹೂನ್ನಾಳಿ ತಾಲೂಕು ಬುಳ್ಳಾಪುರ ಗ್ರಾಮದ ಚಿನ್ನು ಅಲಿಯಾಸ್ ಡಿ.ಜೆ (26) ಹಾಗೂ ಶಿವಮೊಗ್ಗ ತಾಲೂಕು ತರಗನಹಳ್ಳಿ ಗ್ರಾಮದ ಮಣಿಕಂಠ ಅಲಿಯಾಸ್ ಮಣಿ(26) ಬಂಧಿತ ಕಳ್ಳರು. ಕಳೆದ ತಿಂಗಳು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ದೇವಾಲಯದ ಹುಂಡಿ…

Read More

ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ಬಿಜೆಪಿಗೆ ಸೇರ್ಪಡೆ:

ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ರವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು.  ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ವಾರ್ಡ್ ನಂಬರ್ 1 ರಿಂದ ಆಯ್ಕೆಯಾದ ಮಹಾಲಕ್ಷ್ಮಿ ಅಣ್ಣಪ್ಪ. ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿಗ ಸದಸ್ಯರಿಂದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇಂದು ಸಾಗರದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗೃಹಮಂತ್ರಿ ಆರಗ ಜ್ಞಾನೇಂದ್ರ. ಸಾಗರ ಹೊಸನಗರ…

Read More

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ…

Read More

10 ಕೋಟಿ ರೂ ಬೆಲೆಯ ನಾಯಿಯ ನೋಡಲು ಮುಗಿಬಿದ್ದ ಜನ – ಭೀಮಾ ನ ಲುಕ್ ಗೆ ಎಲ್ಲಾ ಫಿದಾ….|DOG SHOW

ಶಿವಮೊಗ್ಗ ದಸರಾದ ಅಂಗವಾಗಿ ಗಾಂಧಿ ಪಾರ್ಕ್ ನಲ್ಲಿ ನಡೆದ ಡಾಗ್ ಶೋ ನಲ್ಲಿ ಬೆಂಗಳೂರಿನ ಸತೀಶ್ ಮಾಲೀಕತ್ವದ ಟಿಬೇಟಿಯನ್ ಮಸ್ತೀಪ್ ಬ್ರೀಡ್ ನಾಯಿ ಭೀಮ ಎಲ್ಲಾರ ಆಕರ್ಷಣೀಯವಾಗಿತ್ತು ಈ ನಾಯಿಯ ಹೆಸರು ಭೀಮಾ,ಇದರ ಬೆಲೆ ಬರೋಬ್ಬರಿ 10 ಕೋಟಿ. ಎ ಸಿ ರೂಂ ನಲ್ಲಿ ವಾಸ ,ಡೈಲಿ ಚಿಕನ್ ಬೇಕೆ ಬೇಕು.. 10 ಕೋಟಿ ಬೆಲೆಯ ನಾಯಿಗೆ ಡಾಗ್ ಶೋನಲ್ಲಿ ಡಿಮ್ಯಾಂಡೋ ಡಿಮ್ಯಾಂಡ್ ಇದೆ. ಡಾಗ್ ಶೋ ನಲ್ಲಿ ಮಾಲೀಕ ಸತೀಶ್ ಎರಡು ಸುತ್ತು ಪ್ರೇಕ್ಷಕರಿಗೆ ಪ್ರದರ್ಶಿಸಿದರು….

Read More

ಅಕ್ರಮ ಮರಳು ಅಡ್ಡೆ ಮೇಲೆ ದಿಡೀರ್ ದಾಳಿ

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಿಡೀರ್ ದಾಳಿ ಅಕ್ರಮವಾಗಿ ಮರಳು (Sand) ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ದಿಢೀರ್‌ ದಾಳಿ ನಡೆಸಿದ್ದಾರೆ. ಈ ಸಂದರ್ಭ ಅಧಿಕಾರಿಗಳನ್ನು ಕಂಡು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್‌ ನಿಲ್ಲಿಸದೆ ಪರಾರಿಯಾಗಿದ್ದಾನೆ. ಆದರೆ ಜೆಸಿಬಿಯೊಂದು ಸಿಕ್ಕಿಬಿದ್ದಿದೆ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಗಣಿ ಮತ್ತು ಭೂ…

Read More

ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ|crime news

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ  ತೀರ್ಥಹಳ್ಳಿ: ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ನಗುಮಗು ಆಂಬುಲೆನ್ಸ್ ವಾಹನದ ಸೇವೆಯ ಚಾಲಕ ವೃತ್ತಿ ಮಾಡಿಕೊಂಡು ಬೆಟ್ಟಮಕ್ಕಿಯಲ್ಲಿ ವಾಸವಾಗಿದ್ದ ರಮೇಶ್ ನೇಣುಬಿಗಿದುಕೊಂಡು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಬೆಟ್ಟಮಕ್ಕಿಯ ತನ್ನ ಬಾಡಿಗೆ ಮನೆಯಲ್ಲಿ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಅನೇಕ ಸಂದರ್ಭದಲ್ಲಿ ಜೀವದ ನೂರಾರು ಜನರ ಜೀವ ಉಳಿಸಿದ್ದು ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಮೃತದೇಹವನ್ನು ಅವರ ಸ್ವಂತ ಊರು ಹೊಸನಗರಕ್ಕೆ ತೆಗೆದುಕೊಂಡು…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್|rpet

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More
Exit mobile version