ಅಂತೂ ಪತ್ತೆಯಾಯ್ತು ಕೂಡ್ಲಿಗಿಯಲ್ಲಿ ನೀರುಪಾಲಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ :

  ಶಿವಮೊಗ್ಗ : ಕೂಡ್ಲಿಯಲ್ಲಿ ನೀರುಪಾಲಾಗಿದ್ದ ಹರೀಶ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ನೀರುಪಾಲಾದ ಹರೀಶ್ ಮೃತದೇಹ ಮೂರು ದಿನಗಳವರೆಗೆ ಪತ್ತೆಯಾಗಿರಲಿಲ್ಲ.ಸತತ ಶೋಧಕಾರ್ಯದ ಪರಿಣಾಮ ಇಂದು ಸಂಜೆ ಆತನ ಮೃತದೇಹ ಪತ್ತೆಯಾಗಿದೆ. ಮಡಿಕೆ ಚೀಲೂರಿನ ಬಳಿ ಹರೀಶ್ ಮೃತದೇಹ ಪತ್ತೆಯಾಗಿದೆ. ಭಾನುವಾರ ಪಿತೃಪಕ್ಷದ ಸ್ನಾನಕ್ಕೆ ಕೂಡಲಿಯ ಸಂಗಮಕ್ಕೆ ಬಂದಿದ್ದ ಬೀರೂರಿನ ಪಿನಿಯಾಚಾರ್ ಕುಟುಂಬದ ಹರೀಶ್ (24) ನೀರಿಗೆ ಇಳಿದಾಗ ಕೊಚ್ಚಿಹೋಗಿದ್ದನು. ಮೃತದೇಹವನ್ನು ಅಗ್ನಿಶಾಮಕ ದಳದವರು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ಹಸ್ತಾಂತರಿಸಿದ್ದಾರೆ.

Read More

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

ಡಿಜಿಟಲ್ ಕಲಿಕೆ,ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್ ರಾಜ್ಯದ ‘ಸರ್ವರಿಗೂ ಸೂರು’ ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್‌ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…

Read More

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ‌ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News ಶಿವಮೊಗ್ಗದ ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದ್ದು,ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೆಲ್ಮೆಟ್ ಧರಿಸಿ ಸೈಕಲ್ ತುಳಿದು ಬೈಕ್ ಪ್ರಯಾಣಿಕರಿಗೆ ವಿಭಿನ್ನ ರೀತಿಯಲ್ಲಿ ಜಾಗೃತಿ ಮಾಡಿಸಿದ 72 ರ ಹರೆಯದ ಸಾಮಾಜಿಕ ಹೋರಾಟಗಾರ|Ripponpet

ರಿಪ್ಪನ್‌ಪೇಟೆ : 72 ವರ್ಷದ ಹಿರಿಯ ನಾಗರಿಕರೊಬ್ಬರು ತಮ್ಮ ಇಳಿ ವಯಸ್ಸಿನಲ್ಲಿಯೂ ಜನರಿಗೆ ಹೆಲ್ಮೆಟ್‌ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅದೂ ಸೈಕಲ್‌ ಮೂಲಕ ಎಂಬುದು ಮತ್ತೊಂದು ವಿಶೇಷ ಮೂರು ತಲೆಯ ಹೆಲ್ಮೆಟ್‌ ಹಾಕಿ, ತಮ್ಮ ಹಳೇ ಸೈಕಲ್‌ ಏರಿ ರಸ್ತೆಯುದ್ದಕ್ಕೂ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದಲ್ಲಿ ಜನಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತರಾಗಿರುವ ಟಿ.ಆರ್.ಕೃಷ್ಣಪ್ಪ, ಸೈಕಲ್ ಸವಾರಿಯ ಮೂಲಕ ವಿಭಿನ್ನ ರೀತಿಯಲ್ಲಿ ಮೂರು ಹೆಲ್ಮೆಟ್ ಹಾಕಿಕೊಂಡು ಜನರಲ್ಲಿ ಜಾಗೃತಿ…

Read More

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲೇ ಸಾವು :

ಶಿವಮೊಗ್ಗದ ಅಲ್ಕೊಳ ಸರ್ಕಲ್ ಹತ್ತಿರ ಬೈಕ್ ಅಪಘಾತವಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಎ‍ಕ್ಸ್ ಪಲ್ಸ್ KA14 E 9132 ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ತೆರಳುತ್ತಿದ್ದಾಗ ಆಲ್ಕೊಳ ಸರ್ಕಲ್ ಬಳಿ ಸ್ಕಿಡ್ ಆದ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಚಾಲನೆ ಸಮಯದಲ್ಲಿ ಹೆಲ್ಮೆಟ್ ಧರಿಸಿಲ್ಲ ಎಂಬುದು ಕಂಡು ಬಂದಿದೆ. ಮೃತರನ್ನು ಕೋಟೆಗಂಗೂರಿನ ಗ್ರಾಮದ ಅಭಯ್ ಮತ್ತು ವರುಣ್ ಎಂದು ಗುರುತಿಸಲಾಗಿದ್ದು,ಪಶ್ಚಿಮ ಪೊಲೀಸ್…

Read More

ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ|arrested

ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ ತೀರ್ಥಹಳ್ಳಿ:  ಪಟ್ಟಣದ ಎಡೆಹಳ್ಳಿ ಕೆರೆ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಡೆಹಳ್ಳಿ ಕೆರೆ ಸರ್ಕಲ್ ಹತ್ತಿರ ಯಾರೋ ಎರಡು ಜನ ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನ ವಾಮನ ಸುತಾರ ರವರ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಗಾಂಜಾ ಮಾರಾಟ ಮಾಡುತಿದ್ದ ಸಂಜಯ್  ಮತ್ತು  ಸುದೀಪ್….

Read More