Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊಸನಗರ : ತಾಲ್ಲೂಕಿನ ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ 6 ಅಡಿ ಸುತ್ತಳತೆಯ 20 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥರಾಗಿದ್ದು ಬೇರೆ-ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ…

Read More

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿ – ಅಂಗನವಾಡಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ|accident-protes

ಅಂಗನವಾಡಿ ಮಗುವಿಗೆ ಬೈಕ್ ಡಿಕ್ಕಿಯಾದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತ್ತು ಪೋಷಕರು ಅಂಗನವಾಡಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಲಕ್ಕವಳ್ಳಿ ಅಂಗನವಾಡಿ ಕೇಂದ್ರದ ಮಗು ಅಂಗನವಾಡಿಯಿಂದ ರಸ್ತೆ ದಾಟುವಾಗ ಅಪಘಾತವಾಗಿ ಗಾಯಗೊಂಡ ಘಟನೆಯನ್ನು ಪ್ರತಿಭಟಿಸಿ ಸ್ಥಳೀಯ ಆಡಳಿತ ಹಾಗೂ ಗ್ರಾಮಸ್ಥರು ಅಂಗನವಾಡಿಗೆ ಶುಕ್ರವಾರ ಬೀಗ ಹಾಗಿ ಪ್ರತಿಭಟನೆ ನಡೆಸಿದ್ದಾರೆ.     ಗುರುವಾರ ಮಗು ಅಂಗನವಾಡಿಯಿಂದ ಮನೆಗೆ ತೆರುಳುವಾಗ ಬೈಕ್ ಡಿಕ್ಕಿಯಾಗಿ ಮಗು ಮುಖ, ತಲೆಗೆ ಪೆಟ್ಟು ಬಿದ್ದಿದೆ. ಸಂಜೆ ಆದ ಕಾರಣ…

Read More

ಅಶಾ,ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಮ ಶ್ರೇಷ್ಟ ಸೇವೆ – ಹರತಾಳು ಹಾಲಪ್ಪ|haratalu

ರಿಪ್ಪನ್‌ಪೇಟೆ : ಜಗತ್ತನ್ನೆ ತಲ್ಲಣಗೊಳಿಸಿದ ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ಹಗಲಿರುಳು ತಾಯಿಯಂತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ರಕ್ಷಣೆಗಾಗಿ ಅಶಾ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆಂದು ಕ್ಷೇತ್ರದ ಶಾಸಕ ಹಾಗೂ ಎಂ.ಎಸ್.ಐ.ಎಲ್.ಅಧ್ಯಕ್ಷ ಹರತಾಳು ಹಾಲಪ್ಪ ಪ್ರಶಂಶೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶ್ರೀರಾಘವೇಂದ್ರ ಸ್ವಾಮಿ ಮಠದ ಸಭಾ ವನದಲ್ಲಿ ಅಯೋಜಿಸಲಾದ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಅವರು ಸರ್ಕಾರದ ಕನಿಷ್ಟ ವೇತನದ ನೌಕರರಾಗಿದ್ದರು ಸಹ…

Read More

ಮಹಿಳೆ ಇಂದು ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ : ಕೆಪಿಸಿಸಿ ವಕ್ತಾರೆ ಪ್ರಪುಲ್ಲಾ ಮಧುಕರ್

ಹೊಸನಗರ :- ಮಹಿಳೆ ಎಂದಿಗೂ ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ, ಸಮಾಜದಲ್ಲಿ ಅವಳಿಗೂ ಸಹಾ ಪುರುಷ ಸಮಾನತೆ ಹಕ್ಕನ್ನು ನೀಡಲು ಹಲವಾರು ವರ್ಷಗಳಿಂದ ಹೋರಾಟ ನಡೆಸಿದ ಪರಿಣಾಮವಾಗಿ ಇಂದು ಪುರುಷ ಸಮಾನಾರ್ತಕ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ  ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕೆ.ಪಿ.ಸಿ.ಸಿ ವಕ್ತಾರೆ ಪ್ರಪುಲ್ಲಾ ಮಧುಕರ್ ರವರು ಅಭಿಪ್ರಾಯ ಪಟ್ಟರು.  ಇಂದು ಪಟ್ಟಣದ ಕಾಂಗ್ರೇಸ್ ಕಚೇರಿಯಲ್ಲಿ ಡಿಜಿಟಲ್ ಮಹಿಳಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ …

Read More

Hosanagara | “ಶ್ರೀ ಶಿವಲಿಂಗೇಶ್ವರ” ಪ್ರಶಸ್ತಿಗೆ ಹೊಸನಗರದ ಡಾ.ಗುರುರಾಜ್ ಆಯ್ಕೆ

ಶ್ರೀ ಶಿವಲಿಂಗೇಶ್ವರ ಪ್ರಶಸ್ತಿಗೆ’’ ಹೊಸನಗರದ ಡಾ.ಗುರುರಾಜ ಆಯ್ಕೆ ರಿಪ್ಪನ್‌ಪೇಟೆ;-ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದವರು ಕೊಡಮಾಡುವ ಶ್ರೀ ಶಿವಲಿಂಗ ಶ್ರೀ ಪ್ರಶಸ್ತಿಗೆ  ಹೊಸನಗರದ ಡಾ.ಗುರುರಾಜರವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ವೈದ್ಯ ನಾರಾಯಣೋ ಹರಿ ಎಂಬುದು ದಾರ್ಶನಿಕರ ಅಭಿಪ್ರಾಯವಾಗಿದ್ದರೆ ವೈದ್ಯರು ದೇವರಿಗೆ ಸಮಾನ ದೇವರನ್ನು ಯಾರು ಪ್ರತ್ಯಕ್ಷವಾಗಿ ಕಂಡಿಲ್ಲ.ಅದರೆ ನಮ್ಮ ಸಮಾಜದಲ್ಲಿರುವ ಕೆಲವೊಬ್ಬ ವೈದ್ಯರುಗಳು ದೇವರ ರೂಪದಲ್ಲಿ ಬಂದು ರೋಗಿಗಳಿಗೆ ಜೀವ ಉಳಿಸಿದ ಮಾನಸಿಕ ಧೈರ್ಯ ತುಂಬಿದ ಎಷ್ಟೋ ಉದಾಹರಣೆಗಳಿವೆ.ಅಂತಹ ಸಾಕಷ್ಟು…

Read More

ಕೆಂಚನಾಲ : ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ – ಎರಡು ಪ್ರತ್ಯೇಕ ಪ್ರಕರಣ ದಾಖಲು|rpet

ಮಾರುತಿ ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಣಿಕೆಗೆ ಯತ್ನ ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಜಾನುವಾರುಗಳನ್ನು ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾದ ಘಟನೆ ನಡೆದಿದೆ. ನಡೆದಿದ್ದೇನು..?? ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಅನುಮಾನದಿಂದ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ಕಾರಿನ ಚಾಲಕ ಮಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿ ಅಸ್ಲಾಂ ಬೇಗ್ ಸಿಕ್ಕಿಬಿದ್ದಿದ್ದಾನೆ ಈ ಸಂಧರ್ಭದಲ್ಲಿ ಓಮಿನಿ ಕಾರಿನಲ್ಲಿ ಕೈಕಾಲು ಕಟ್ಟಿ ಎರಡು ಜಾನುವಾರುಗಳನ್ನು…

Read More

ಹೈಕೋರ್ಟ್ ನ್ಯಾಯವಾದಿ ಕೆ ದಿವಾಕರ್ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ :

ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ.  ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ‌. ಈ ಬಗ್ಗೆ ಆಮ್ ಆದ್ಮಿ ಪಕ್ಷದ  ಸಂಚಾಲಕ ಅಮೃತರಾಜ್ ಮಾತನಾಡಿ…

Read More

ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News

ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News ಆನಂದಪುರ : ಇಲ್ಲಿನ ಹೆದ್ದಾರಿಯಲ್ಲೆ ಯುವಕನೊಬ್ಬ ಲಾಂಗ್‌ ಝಳಪಿಸಿ ಹೆದರಿಸಿದ್ದು ಇದರಿಂದ ಜನರು ಆತಂಕಗೊಂಡ ಘಟನೆ ನಡೆದಿದೆ.  ಆನಂದಪುರದ ಹೆದ್ದಾರಿಯಲ್ಲಿ ಯುವಕನೊಬ್ಬ ಲಾಂಗ್‌ ಹಿಡಿದು ರೋಡಲ್ಲಿ ಬೀಸಿದ್ದಾನೆ.  ವೆಹಿಕಲ್‌ಗಳ ಮೇಲೆ ಆತ ಲಾಂಗ್‌ ಬೀಸಿದ್ದಾನೆ ಎನ್ನಲಾಗಿದೆ. ಸುಮಾರು ಇಪ್ಪತ್ತು ನಿಮಿಷಗಳ ಕಾಲ ಈ ಹೈಡ್ರಾಮಾ ನಡೆದಿದೆ ಎನ್ನಲಾಗುತಿದ್ದು,ಇದರಿಂದ ರಸ್ತೆಯಲ್ಲಿ ಪ್ರಯಾಣಿಸುತಿದ್ದ ವಾಹನ ಮಾಲೀಕರು ಕೆಲಕಾಲ ಆತಂಕಗೊಂಡಿದ್ದಾರೆ….

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…

Read More