ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ‌ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು….

Read More

ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬನಿಗೆ ಮಂಗನ ಖಾಯಿಲೆ (KFD) ಧೃಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಗುತ್ತಿಯಡೆಹಳ್ಳಿ  ಬಳಿಯ ಹಳ್ಳಿ ಬೈಲು ಗ್ರಾಮದ 54 ವರ್ಷದ ವ್ಯಕ್ತಿಗೆ ಕೆಎಫ್ಡಿ ಪಾಸಿಟಿವ್ ದೃಢಪಟ್ಟಿದೆ. ನಾಲ್ಕೈದು ದಿನದಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಮಂಗನ ಖಾಯಿಲೆ ಇರುವುದು ಪತ್ತೆಯಾಗಿದೆ. ಜ್ವರ ಲಕ್ಷಣ ಇಲ್ಲದಿದ್ದರೂ ಎರಡು ದಿನ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ನಿಗಾದಲ್ಲಿಡಲಾಗಿತ್ತು. ಅವರ ಮನೆಯ ಉಳಿದ ಸದಸ್ಯರಿಗೆ ಯಾವುದೇ ಲಕ್ಷಣಗಳಿಲ್ಲ. ಆ ಊರಿನ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು.

Read More

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವಲಯ ಮಟ್ಟದ 16 ವರ್ಷ ವಯೋಮಿತಿ ಒಳಗಿನ ಕ್ರೀಡಾಕೂಟದಲ್ಲಿ ನಡೆದ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗಮನ ಸೆಳೆದಿದೆ. ಸ್ಪರ್ಧೆಯಲ್ಲಿ ನಿರ್ಣಾಯಕರು ಪಕ್ಷಪಾತ ತೋರಿದ್ದಾರೆ ಎಂಬ ಆರೋಪ ಹೊರಿಸಿ, ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡೂರಿನ ಬ್ಲಾಸಂ ಶಾಲೆ ಹಾಗೂ ಹೆದ್ದಾರಿಪುರದ ಶಿವರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು “ಮೋಸದಾಟಕ್ಕೆ ಧಿಕ್ಕಾರ” ಎಂದು ಘೋಷಣೆ…

Read More

ಆಯನೂರು ಕ್ಯಾಷಿಯರ್ ಕೊಲೆ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ – ಆರೋಪಿಗಳ ಕಾಲಿಗೆ ಗುಂಡು|shot

ಆಯನೂರಿನ ನವರತ್ನ ಬಾರ್ ನಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ, ಆರೋಪಿಗಳನ್ನ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಸತೀಶ್ ಹಲ್ಲೆ ಮಾಡಲು ಮುಂದಾಗಿದ್ಧಾನೆ. ಈ ವೇಳೆ ಪೊಲೀಸರು ರಕ್ಷಣಾತ್ಮಕವಾಗಿ ಆತನ ಕಾಲಿಗೆ ಗುಂಡು ಹೊಡೆದಿದ್ಧಾರೆ.  ಸತೀಶ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಎಸ್​ಐ ರಾಜು ರೆಡ್ಡಿಯವರು ಆರೋಪಿ ಕಾಲಿಗೆ ಗುಂಡು ಹೊಡೆದು ಆತನನ್ನ ಬಂಧಿಸಿದ್ದಾರೆ. ನಿನ್ನೆ ಮಧ್ಯರಾತ್ರಿ ನಡೆದಿದ್ದ ಕೊಲೆ ಸಂಬಂಧ ಆರೋಪಿ ಸತೀಶ್​ನನ್ನ ಬಂಧಿಸಲು…

Read More

ರೈತ ಪರ ಹೋರಾಟಗಾರ ಕೆ ಸಿ ವೀರಭದ್ರಪ್ಪ ಗೌಡ ಕಗ್ಗಲಿ ನಿಧನ :

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಮೃತರು 8 ಜನ ಮಕ್ಕಳು,12 ಜನ ಮೊಮ್ಮಕ್ಕಳು ,7 ಜನ ಮರಿ ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ರೈತ ಪರ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.ರೈತ ಪರ ಹೋರಾಟದಲ್ಲಿ ಇವರು ಬಳ್ಳಾರಿಯಲ್ಲಿ 21 ದಿನ ಜೈಲು ವಾಸ ಅನುಭವಿಸಿದ್ದರು. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ಕಗ್ಗಲಿ…

Read More

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ|crime news

ಶಿವಮೊಗ್ಗ ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ. ಶಿವಮೊಗ್ಗ ವಿನೋಬನಗರದಲ್ಲಿ ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಸುಳಿವು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳು ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಐಪಿಎಸ್ ಬಿಂದುಮಣಿ ನೇತೃತ್ವದಲ್ಲಿ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು. ಸದ್ಯ ಏಳು ಸಂತ್ರಸ್ತ ಮಹಿಳೆಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು ಜಿಲ್ಲೆಯಲ್ಲಿ ವೇಶ್ಯಾವಾಟಿಕೆ…

Read More

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ – ಗಾಂಜಾ ಸಮೇತ ಆರೋಪಿಯ ಬಂಧನ|Arrested

ಸಾಗರ : ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಸೂರಗುಪ್ಪೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಹಿತ ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸೊರಬ ತಾಲೂಕಿನ ಗಣಪತಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಮಾರು 500 ಗ್ರಾಂ ಒಣ ಗಾಂಜಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ…

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ ರಿಪ್ಪನ್‌ಪೇಟೆ; ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಬಿ.ಜೆ.ಪಿ.ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಕ್ಕ ಪದ್ಮಾವತಿಯವರು ರಿಪ್ಪನ್‌ಪೇಟೆಯಲ್ಲಿ ತಮ್ಮನ ಪರವಾಗಿ ಮತಯಾಚಿಸುವ ಮೂಲಕ ಮನೆಮನೆಗೆ ಭೇಟಿ ನೀಡಿದರು. ಇಲ್ಲಿನ ವಿಪ್ರ ಮಹಿಳೆಯರೊಂದಿಗೆ ಹೆಬ್ಬಾರ್‌ ಪಿಕಲ್ಸ್ ಗೆ ಭೇಟಿ ನೀಡಿ ಕಾರ್ಮಿಕರಲ್ಲಿ ತಮ್ಮ ಬಿ.ವೈ.ರಾಘವೇಂದ್ರ ಪರ ಮತಯಾಚಿಸಿ ಕೇಂದ್ರದ ಮೋದಿ ಸರ್ಕಾರ ಘೋಷಿಸಲಾದ ಮಹಿಳಾ ಸಬಲೀಕರಣ ಮತ್ತು ಮುದ್ರ ಯೋಜನೆಯಿಂದ ಸ್ವಾವಲಂಬನೆ…

Read More

ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್

ಬ್ರೇಕಿಂಗ್ : ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್! ಬೆಂಗಳೂರು : ನಗರದ ಛಲವಾದಿ ಪಾಳ್ಯದ ಬಿಜೆಪಿಯ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹಂತಕರನ್ನು ಬಂದಿಸುವಲ್ಲಿ ಪೊಲೀಸರು ಯಶ ಕಂಡಿದ್ದಾರೆ. ಪೀಟರ್ ಮತ್ತು ಸೂರ್ಯ ಎಂಬ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ಮುಂದಾದ ವೇಳೆ ಸೂರ್ಯ ಮತ್ತು ಪೀಟರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಸುಮನಹಳ್ಳಿ ಶನಿವಮಹಾತ್ಮ ದೇವಾಸ್ಥಾನದ ಬಳಿ ಬಂಧಿಸಿದ್ದಾರೆ….

Read More