Headlines

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು RIPPONPETE | ಇಲ್ಲಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಳೆ ಮಳವಳ್ಳಿ ಗ್ರಾಮದ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಿಗ್ಗೆ ಹಾಲು ತರಲು ತೆರಳುತಿದ್ದ ವೇಳೆಯಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಿಗೆ ಭಯ ಮೂಡಿಸಿದ್ದು ಸಾಕು ಪ್ರಾಣಿಗಳು ಹಾಗೂ ದನಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದೆ.ಚಿರತೆ ಕೆಲ…

Read More

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read More

ಮಳೆಯಿಂದ ಹಾನಿಯಾದ ಕುಟುಂಬಗಳನ್ನು ಭೇಟಿ ಮಾಡಿದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು.

    ಸಾಗರ : ತಾಲೂಕಿನ ಹೊಸೂರು ಗ್ರಾಮ ಪಂಚಾಯತಿಯ ನೆದರವಳ್ಳಿ ಗ್ರಾಮದ ವೀರೇಂದ್ರ ಗೌಡ್ರು ಹಾಗೂ ಚಿದಾನಂದ ಗೌಡರ ಕೊಟ್ಟಿಗೆ ಮನೆ  ನಿನ್ನೆ ಬಂದ ಗಾಳಿ ಮಳೆಯ ಆರ್ಭಟಕ್ಕೆ ಹಾನಿಗೊಳಗಾಗಿತ್ತು. ಇಂದು ಸ್ಥಳಕ್ಕೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು ಭೇಟಿ ನೀಡಿದರು ಸ್ಥಳ ಪರಿಶೀಲಿಸಿದ  ನಂತರ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.  ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕರಾದ ಗಣಪತಿ ಮಂಡಗಳಲೆ ಗ್ರಾಮ ಪಂಚಾಯಿತಿಯ ಸದಸ್ಯರಾದ ಆನಂದ…

Read More

ಶಿವಮೊಗ್ಗ ಗೃಹರಕ್ಷಕದಳದ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ ।ರಿಪ್ಪನ್ ಪೇಟೆಯಲ್ಲಿ 12 ಹೊಸನಗರದಲ್ಲಿ 10 ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ |Home guards

ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ 05, ಸೊರಬ 30, ಶಿರಾಳಕೊಪ್ಪ 15, ಹೊಳೆಹೊನ್ನೂರು 20, ರಿಪ್ಪನ್‍ಪೇಟೆ 12, ಆನಂದಪುರಂ 10, ಹಾರನಹಳ್ಳಿ 10 ಒಟ್ಟು 240 ಗೃಹ ರಕ್ಷಕ ದಳದ ನೂತನ…

Read More

ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು!?

A tragic incident in Shivamogga where a 15-year-old SSLC student was allegedly killed by his classmates following a minor dispute over a cricket game. Police have detained seven juvenile suspects, and the Karnataka government has announced ₹15 lakh compensation to the victim’s family. ಕ್ರಿಕೆಟ್ ಜಗಳಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಬಲಿ; ಏಳು ಮಂದಿ ಸಹಪಾಠಿಗಳು ಪೊಲೀಸ್ ವಶಕ್ಕೆ | ಪ್ರಕರಣದ…

Read More

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ : ಯಡಿಯೂರಪ್ಪ ನಿವಾಸದಲ್ಲಿ ನೀರವ ಮೌನ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪತಿ ನೀರಜ್ ಕೆಲಸಕ್ಕೆ ತೆರಳಿದ ನಂತರ ಸುಮಾರು 10 ಗಂಟೆ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಗಳು ಪದ್ಮಾವತಿಯವರ ಪುತ್ರಿ ಆಗಿರುವ ಸೌಂದರ್ಯ ಬೆಂಗಳೂರು ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ…

Read More

ಮುಂದುವರಿದ ಭಾರಿ ಮಳೆ : ಹೊಸನಗರ, ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ :

ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 8ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ ಶಿವಮೊಗ್ಗ : ಈ ನಾಡು ಕಂಡ ಧೀಮಂತ ನಾಯಕ ಎಸ್ ಬಂಗಾರಪ್ಪ. ರಾಜ್ಯದ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸೂಕ್ತ ಗೌರವ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಅವರ ಹೆಸರಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ ಬಂಗಾರಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಅಮೀರ್…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಒಟ್ಟು 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಕ್ಷೇತ್ರದಿಂದ 35 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಡಿದ್ದು ಜೂ.22 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ.  ಹೊಸನಗರ ಕ್ಷೇತ್ರದಿಂದ…

Read More
Exit mobile version