Hombuja | ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು

ಭಕ್ತರ ಸದೀಚ್ಛೆ ಧರ್ಮಪಥದಲ್ಲಿರಲಿ : ಹೊಂಬುಜಾ ಶ್ರೀಗಳು ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಂಪರಾಗತ ವಾರ್ಷಿಕ ರಥೋತ್ಸವ ಮಹೋತ್ಸವವು ಆರು ದಿನಗಳ ಪರ್ಯಂತ ವಿವಿಧ ಜಿನಾಗಮ ಶಾಸ್ತೋಕ್ತ ಪೂಜೆ, ಆರಾಧನೆ, ಉತ್ಸವಾದಿಗಳು ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿತ್ಯವಿಧಿ ಸಹಿತ ಪೂಜಾ ವಿಧಾನಗಳು, ಕುಂಕುಮೋತ್ಸವವು ಸಾಂಗವಾಗಿ ಏರ್ಪಟ್ಟಿತ್ತು. ಕುಮದ್ವತಿ ತೀರ್ಥದಲ್ಲಿ ಉತ್ಸವ ಮೂರ್ತಿಯ ಅವಭೃತ ಸ್ನಾನದ ಬಳಿಕ ಸಾಲಾಂಕೃತ ಪಲ್ಲಕ್ಕಿ…

Read More

Thirthahalli | ಸಾಲ ಬಾಧೆ ತಾಳಲಾರದೆ ಹೊಟೇಲ್ ಮಾಲೀಕ ಆತ್ಮಹತ್ಯೆ

 ಹೋಟೆಲ್ ಮಾಲೀಕ ನೇಣಿಗೆ ಶರಣು ! ತೀರ್ಥಹಳ್ಳಿ: ಸಾಲದ ಸಂಕಷ್ಟಕ್ಕೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಜ್ಜವಳ್ಳಿಯಲ್ಲಿ ನೆಡೆದಿದೆ. ತಾಲೂಕಿನ ಬೆಜ್ಜವಳ್ಳಿಯ ಅನ್ನಪೂರ್ಣ ಹೋಟೆಲ್ ಮಾಲೀಕರಾದ ಉಮೇಶ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಉಮೇಶ್ ಸಾಲದ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಹೊಸನಗರದ ರಾಮಚಂದ್ರಪ್ಪ|eyedonate

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಠದಜಡ್ಡು ಗ್ರಾಮದ ವ್ಯಕ್ತಿಯೊಬ್ಬರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮಠದಜಡ್ಡು ನಿವಾಸಿ ಈ ರಾಮಚಂದ್ರಪ್ಪನವರು (76) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರಿಗೆ ನಿಕಟವರ್ತಿಯಾಗಿದ್ದ ಇವರು ಅನೇಕ ಸಮಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಮೃತರು ಚಾಲುಕ್ಯ ಬಸವರಾಜ್‌ರವರು ಸೇರಿ ಓರ್ವ ಪುತ್ರ, ಓರ್ವ ಪುತ್ರಿ, ಪತ್ನಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಇವರು ನಿಧನದ ನಂತರ ತಮ್ಮ ಕಣ್ಣು ಇನ್ನೊಬ್ಬರಿಗೆ ಬೆಳಕಾಗಬೇಕು…

Read More

ಭಾರಿ ಮಳೆಗೆ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Read More

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರು ಓದಿದ ಶಾಲೆ ಈಗ ನಿರ್ವಹಣೆ ಇಲ್ಲದೆ ಸೋರುತ್ತಿದೆ. ಶತಮಾನದ ಇತಿಹಾಸ ಇದ್ದಂತಹ ಶಾಲೆಯಲ್ಲಿ ಈಗ ಸಂಪೂರ್ಣ ನೀರಿನ ಹೊಳೆ ಹರಿಯುತ್ತಿದೆ. ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಅಂಚೆ ಕಛೇರಿ ಪಕ್ಕದಲ್ಲಿ ಇರುವ ಶತಮಾನದ ಇತಿಹಾಸ ಹೊಂದಿದ, ಅದರಲ್ಲೂ ರಾಷ್ಟ್ರ ಕವಿ ಕುವೆಂಪು ಅವರು ಓದಿದ್ದ ಶಾಲೆಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಮಳೆಗಾಲದಲ್ಲಿ ಸೋರುತ್ತಿದೆ. ಶಾಲೆಯಲ್ಲಿ…

Read More

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station. ಶಿವಮೊಗ್ಗ, ಜುಲೈ 5: ಎಕ್ಸ್‌ಪ್ರೆಸ್ ಬಸ್‌ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ…

Read More

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು  ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದು ,ಇನ್ನೂ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಬೇಳೂರು ಗೋಪಾಲಕೃಷ್ಣ ನಾಳೆ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಬೇಳೂರು ನಾಳೆ 11 ಗಂಟೆಗೆ ಕಾರ್ಯಕರ್ತರು ,ಅಭಿಮಾನಿಗಳು ಹಾಗೂ ಹಿತೈಶಿಗಳನ್ನು…

Read More

ಬೇಳೂರು ಗೋಪಾಲಕೃಷ್ಣ ಬಿಜೆಪಿ ಸರ್ಕಾರ ಪತನದ ಬಗ್ಗೆ ಹಗಲುಕನಸು ಕಾಣುತ್ತಿದ್ದಾರೆ : ಸಚಿವ ಶಿವರಾಂ ಹೆಬ್ಬಾರ್

ಶಿರಸಿ : ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರ ಬೀಳುವ ಕುರಿತು ಸ್ವಪ್ನ ಬಿದ್ದಿರಬೇಕು. ಆದರೆ ಯಾವುದೇ ಕಾರಣಕ್ಕೂ ಒಂದು ದಿನ ಮುಂಚಿತವಾಗಿಯೂ ಸರ್ಕಾರ ಪತನವಾಗಲ್ಲ.ಬಿಜೆಪಿ ಸರ್ಕಾರ ಅವಧಿ ಪೂರೈಸಲಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.‌ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಪಾಲಕೃಷ್ಣ ಅವರಿಗೆ ಅಧಿಕಾರ ಇಲ್ಲದೇ ಇರುವುದರಿಂದ ಶೀಘ್ರದಲ್ಲಿ ಚುನಾವಣೆಗೆ ಹೋಗಬೇಕಾಗಿದೆ. ಆದ ಕಾರಣ ಹತಾಶರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅವರ ಸರ್ಕಾರ ಪತನ ಹೇಳಿಕೆಗೆ ತಿರುಗೇಟು ನೀಡಿದರು….

Read More

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಶಿವಮೊಗ್ಗ:   ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ  ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ…

Read More

ತೀರ್ಥಹಳ್ಳಿ : ಹಣದಾಸೆಗೆ ಸ್ನೇಹಿತನನ್ನು ಗುಂಡಿಕ್ಕಿ ಕೊಂದಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ |POSTMAN NEWS

ತೀರ್ಥಹಳ್ಳಿ : ಸ್ನೇಹಿತನನ್ನು ಹಣದ ಆಸೆಗೆ ಗುಡ್ಡಕ್ಕೆ‌ ಕರೆಯಿಸಿ ಗುಂಡಿಕ್ಕಿ ಕೊಂದ ತೀರ್ಥಹಳ್ಳಿ ತಾಲೂಕಿನ ವಾಟಗಾರು ಗ್ರಾಮದ ಭುಜಂಗ (45) ಎಂಬುವರಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭುಜಂಗ ತಮ್ಮ ಪಕ್ಕದ ಗ್ರಾಮದ ಮಳಲಿಮಕ್ಕಿ ಗ್ರಾಮದ ನಾಗರಾಜ್ (35) ನನ್ನು ಕೆಸಿನಮನೆ ಗ್ರಾಮದ ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ ತನ್ನ ಬಳಿ ಇದ್ದ ನಾಡ ಬಂದೂಕುನಿಂದ ಗುಂಡಿಕ್ಕಿ ಕೊಂದಿದ್ದರು. ಬಳಿಕ ನಾಗರಾಜ್ ಬಳಿ ಇದ್ದ ಬೈಕ್, ಹಣ, ಬಂಗಾರದ ಚೈನ್…

Read More