ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ ರಿಪ್ಪನ್‌ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು. ರಿಪ್ಪನ್‌ಪೇಟೆ…

Read More

ಅನುದಾನ ಕೊರತೆ: ಗೃಹ ಸಚಿವರ ತವರು ಕ್ಷೇತ್ರದಲ್ಲಿಯೇ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯರು ವಿಧಾನ ಪರಿಷತ್ ಚುನಾವಣೆ ಬಹಿಷ್ಕರಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಏಳು ಜನರು ಈ ಬಾರಿ ಮತದಾನ ಮಾಡದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಾಲೂರು ಕೊಳಿಗೆ ಗ್ರಾಮ ಪಂಚಾಯತಿಗೆ ಈವರೆಗೆ 1.68 ಕೋಟಿ ರೂಪಾಯಿ ಸರ್ಕಾರದ ಅನುದಾನ ಬಂದಿಲ್ಲ. ನಾಲೂರು ಕೊಳಿಗೆ ವ್ಯಾಪ್ತಿಯ ಮೂರು ಮರಳು ಕ್ವಾರಿಗಳು ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ…

Read More

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | MLC election

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿ ಭೋಜೆಗೌಡ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಭೋಜೆಗೌಡ ಪ್ರಚಂಡ ಗೆಲುವು ಸಾಧಿಸುತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಬಾವುಟ…

Read More

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ: ಚಂದ್ರಕಲಾ | ಗರ್ಭಿಣಿಯರು ಧನಾತ್ಮಕವಾಗಿ ಆಲೋಚಿಸಲಿ : ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ  ಹೇಳಿದರು.        ಸಮೀಪದ ಮೂಗುಡ್ತಿ ಸಭಾಭವನದಲ್ಲಿ ಬುಧವಾರ ಗ್ರಾಮ ಪಂಚಾಯತಿ ಹೆದ್ದಾರಿಪುರ ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ…

Read More

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್​ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿದೆ. ”ಶಸ್ತ್ರಚಿಕಿತ್ಸೆ ವೇಳೆ ಮತ್ತು ನಂತರದ ಆರೈಕೆ ಸಮಯದಲ್ಲಿ ಶಿವರಾಜ್‌ಕುಮಾರ್…

Read More

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ : ಸದನದಲ್ಲಿ ಗುಡುಗಿದ ಶಾಸಕ ಹರತಾಳು ಹಾಲಪ್ಪ|halappa

ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸಲು ಹೊರಟರೆ ರಕ್ತ ಕ್ರಾಂತಿಯಾಗುತ್ತದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಸದನದಲ್ಲಿ ಗುಡುಗಿದ್ದಾರೆ. ಅಧಿವೇಶನದಲ್ಲಿ ಮಾತನಾಡುತ್ತಾ ಶರಾವತಿ ಮುಳುಗಡೆ ಸಂತ್ರಸ್ಥರನ್ನು ತೆರವುಗೊಳಿಸಲು ಹೊರಟರೆ ರಕ್ತಕ್ರಾಂತಿಯೊಂದಿಗೆ ಸಾಮೂಹಿಕ ಆತ್ಮಹತ್ಯೆ ನಡೆಯುತ್ತದೆ ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದರು. ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಿಸಲು ಸರ್ಕಾರ ಸುಮಾರು 8 ಸಾವಿರ ಕುಟುಂಬಗಳನ್ನು ರಾತ್ರೋರಾತ್ರಿ ಎಬ್ಬಿಸಿ, ಬೇರೆ ಬೇರೆ ಕಡೆಗಳಲ್ಲಿ ತಂದು ಬಿಟ್ಟಿತು. ಈಗಲೂ ಇವರ ಹೆಸರಿಗೆ…

Read More

ಹೊಸನಗರ ತಾಲೂಕ್ ಜೆಡಿಎಸ್ ನೂತನ ಅಧ್ಯಕ್ಷರಾಗಿ ಎನ್ ವರ್ತೇಶ್ ಅಧಿಕಾರ ಸ್ವೀಕಾರ:

ಹೊಸನಗರ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಕ್ಷೀಣಿಸುತ್ತಿದ್ದು ಇದನ್ನು ಬಲಪಡಿಸಲು ಹೊಸನಗರ ತಾಲ್ಲೂಕು ಕಾರ್ಯಕರ್ತರ ಸಭೆ ನಡೆಸಿ ಸಂಘಟನೆ ಮಾಡುವ ಉದ್ದೇಶದಿಂದ ಆಗಸ್ಟ್ 20 ಶನಿವಾರ 11 ಗಂಟೆಗೆ ಹೊಸನಗರ ಪ್ರವಾಸಿ ಮಂದಿರದ ಹತ್ತಿರವಿರುವ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್‌ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಪತ್ರಿಕಾಘೋಷ್ಟಿ…

Read More

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ Heavy rainfall continues in Hosanagara Taluk. The Tahsildar has declared a holiday for all schools and colleges on July 8, 2026, as a precautionary measure due to adverse weather conditions. ಹೊಸನಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 8, ಬುಧವಾರ)…

Read More
Exit mobile version