Headlines

ಬೈಕ್ ಅಪಘಾತ : ಅಪಘಾತವಾದ ಬೈಕ್‌ ಮೈಮೇಲೆ ಬಿದ್ದು ಸವಾರ ಸಾವು

ತೀರ್ಥಹಳ್ಳಿ : ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಬೈಕ್ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಇಂದು ಬೆಳಗಿನ ಜಾವ ಈ ಅಪಘಾತವಾಗಿದೆ. ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು 37 ವರ್ಷದ ರವಿನಾಯ್ಕ್ ಎಂದು ಗುರುತಿಸಲಾಗಿದ್ದು, ನಳೀನ್ ಕೊಪ್ಪ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ರಸ್ತೆ…

Read More

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ತರಗತಿ ವಿದ್ಯಾರ್ಥಿನಿ ….

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ವಿದ್ಯಾರ್ಥಿನಿ …. 14 ವರ್ಷಗಳ ಹಿಂದೆ ಯಾರೋ ಬೀದಿಯಲ್ಲಿ ಬಿಟ್ಟು ಹೋಗಿದ್ದ ಮೂರು ದಿನಗಳ ಕಂದನನ್ನು ತಂದು ಸಾಕಿ, ಸಲುಹಿ ಅಮ್ಮನ ಪ್ರೀತಿಯನ್ನೆಲ್ಲಾ ಧಾರೆಯೆರೆದಿದ್ದ ಈ ಮಹಿಳೆ ಮುಂದೆ ಈಕೆಯೇ ತನ್ನ ಪಾಲಿನ ಯಮಸ್ವರೂಪಿಣಿಯಾಗುತ್ತಾಳೆ ಎನ್ನುವುದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಮಕ್ಕಳಿಲ್ಲದ ಕೊರಗನ್ನು ಈ ಕಂದ ನೀಗಿಸಿದಳು ಎಂದು ಯಾರೋ ಹೆತ್ತು ಬೀಸಾಡಿದ ಮಗುವನ್ನು ತಂದು ಸಾಕಿ, ಸಲುಹಿ ಆಕೆಗೆ ಆರೈಕೆ ಮಾಡಿದ್ದರು ಈ ಅಮ್ಮ….

Read More

SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗೆ ಸನ್ಮಾನ

ಭದ್ರಾವತಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 573(91.56) ಅಂಕಗಳನ್ನು ಗಳಿಸಿ ಅದ್ವಿತೀಯ ಸಾಧನೆಗೈದ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಶಶಾಂಕ್ ರವರಿಗೆ ಹಳೇನಗರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಳೇನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಚನ್ನಕೇಶವ ಮತ್ತು ಲತಾಮಣಿ ದಂಪತಿಗಳ ಪುತ್ರನಾದ ಶಶಾಂಕ್ ರವರು ನ್ಯೂಟೌನ್ ನ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು SSLC ಪರೀಕ್ಷೆಯಲ್ಲಿ 91.56% ಅಂಕ ಗಳಿಸುವ ಮೂಲಕ ಶಾಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಗುರುವಾರ ಹಳೇನಗರ ಪೊಲೀಸ್ ಠಾಣೆಯಲ್ಲಿ…

Read More

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮದ ಬಡ ರೋಗಿಯ ಚಿಕಿತ್ಸೆಗೆ ನೆರವಾಗಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರೂ ವಾಸಿಯಾದ ರಾಜೇಶ್ 34 ವರ್ಷ ಇವರು (GBS syndrome )ಕಾಯಿಲೆಗೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 15 ಲಕ್ಷದ ಅವಶ್ಯಕತೆಯಿದ್ದು,ಕೂಲಿ ಮಾಡಿ ಬದುಕುವ ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಚಿಕಿತ್ಸೆಯ ಹಣಕ್ಕಾಗಿ ನಮ್ಮ ಮಾದ್ಯಮದ ಮೂಲಕ ದಾನಿಗಳ ಮುಂದೆ ಬಂದಿದ್ದಾರೆ. ಈ ಖಾಯಿಲೆಯಿಂದ ಬಳಲುತ್ತಿರುವ ಇವರಿಗೆ ಸುಮಾರು ಐದಾರು ತಿಂಗಳುಗಳಿಂದ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು ಈಗಾಗಲೇ 6 ರಿಂದ 7 ಲಕ್ಷ ಹಣ ಖರ್ಚಾಗಿದ್ದು ಹಣದ…

Read More

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ! 

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಭೇದಿಯಾಗಿ ಅಸ್ವಸ್ಥರಾದ ಘಟನೆ ನಡೆಸಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ…

Read More

ಸಾಗರ : ಗಾಂಜಾ ಸೇವನೆ ಮಾಡಿದ್ದ ಮೂವರ ಬಂಧನ : ವಿಶೇಷ ಟೆಸ್ಟಿಂಗ್ ಕಿಟ್ ಮೂಲಕ ಪತ್ತೆ :

ಸಾಗರ: ಗಾಂಜಾ ಸೇವಿಸಿದ ಮೂವರನ್ನು ತಪಾಸಣೆಗೆ ಒಳಪಡಿಸಿದ್ದು, ಅವರು ಮಾದಕ ವಸ್ತು ಸೇವಿಸಿದ ವಿಚಾರ ದೃಢಪಟ್ಟಿದ್ದು, ಅವರನ್ನು ಎನ್.ಡಿ.ಪಿ.ಎಸ್.ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ತಾಲೂಕಿನ ಆವಿನಹಳ್ಳಿ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು ಸಾಗರ ಗ್ರಾಮಾಂತರ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  ಆಗ ಗಾಂಜಾ ಸೇವಿಸಿರಬಹುದು ಎಂಬ ಅನುಮಾನ ಮೂಡಿದೆ.  ನಂತರ ಅವರನ್ನು ಗಾಂಜಾ ಟೆಸ್ಟಿಂಗ್ ಕಿಟ್ ಮೂಲಕ ಪರೀಕ್ಷಿಸಲಾಗಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಸೊರಬ ಮೂಲದ ಶಶಾಂಕ್, ಸುಮಂತ್, ಶಿಕಾರಿಪುರದ ಮಹೇಶ್ ಎಂಬುವವರನ್ನು…

Read More

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶು ಸಾವು – ಆಸ್ಪತ್ರೆಯ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ|hospital

ಶಿವಮೊಗ್ಗ: ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವಿಗೀಡಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಪೂಜಿ ನಗರದ ಭಾಗ್ಯ ಮತ್ತು ನಾಗರಾಜ್ ದಂಪತಿಗಳಿಗೆ ಚೊಚ್ಚಲ ಗಂಡು ಮಗುವಿಗೆ ನಿನ್ನೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ತಕ್ಷಣ ತೂಕಹಾಕಿಲ್ಲ ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ವೈದ್ಯರೇ ಸಾವಿಗೆ ಕಾರಣವಾಗಿದ್ದಾರೆ ಎಂದು ಪೋಷಕರು ಮತ್ತು ಪೋಷಕರ ಕಡೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗು ಸಾವಿಗೆ ಮುಂಚೆ ವೈದ್ಯರು ಉಸಿರಾಟ ತೊಂದರೆ…

Read More

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಉಲ್ಲಾಸ್ ಆರ್ ಆಯ್ಕೆ :

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಯುವ ಮುಖಂಡ ಉಲ್ಲಾಸ್ ಆರ್ ರವರು ಆಯ್ಕೆಯಾಗಿದ್ದಾರೆ.  ಹೊಸನಗರ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹೆಚ್ಚು ಗುರುತಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿರುವ ಯುವ ನಾಯಕರಿಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಲ್ಲಿ ಉತ್ತಮ ಹುದ್ದೆ ನೀಡುವಂತೆ ಹೊಸನಗರ ಯುವ ಕಾಂಗ್ರೆಸ್ ಸಮಿತಿಯಿಂದ ಶಿಪಾರಸು ಮಾಡಲಾಗಿತು. ಪಕ್ಷ ಸಂಘಟನೆಯ ಆದಾರದ ಮೇಲೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ರವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್…

Read More

Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read More

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ – ಕುಣಿದು ಕುಪ್ಪಳಿಸಿದ ಯುವಕ ಯುವತಿಯರು | ರಿಪ್ಪನ್‌ಪೇಟೆ : ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಯುವಕರು|Holi

ಶಿವಮೊಗ್ಗ : ನಿರಂತರ ಹಾಡು, ಹಾಡಿಗೆತಕ್ಕಂತೆ ಸ್ಟೆಪ್ಸು ಹೀಗೆ ಶಿವಮೊಗ್ಗ ಗೋಪಿ ವೃತ್ತದ ಬಳಿ ಹೋಳಿ ಹಬ್ಬವನ್ನ ಭರ್ಜರಿಯಾಗಿ ಆಚರಿಸಲಾಯಿತು. ಈ ಬಾರಿ ವಿನೂತನವಾಗಿ ಹೋಳಿ ಹಬ್ಬವನ್ನ‌ಆಚರಿಸಲಾಗಿದೆ. ಎರಡು ವರ್ಷಗಳಿಂದ ಕೊರೋನ ಹಿನ್ನಲೆಯಲ್ಲಿ ಈ ಹಬ್ಬಗಳು ಕಳೆಗುಂದಿದ್ದವು. ಆದರೆ ಈ ಬಾರಿ ಗೋಪಿ ವೃತ್ತದ ಬಳಿ ಡಿಜೆ ಹಾಡು ಎಂತಹವರನ್ನೂ ಹಬ್ವ ಆಚರಣೆಗೆ ಕೈಬೀಸಿ ಕರೆಯಲಿದೆ.  ಗೀತಾಂತಲೀ…., ಕಾಣದಂತೆ ಮಾಯವಾದನು ನಮ್ಮ ಶಿವ…, ನಮ್ಮೂರ ಜಾತ್ರೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ಹೀಗೆ ನಿರಂತರ ಡಿಜೆ ಹಾಡುಗಳಿಗೆ ಯುವಕ ಯುವತಿಯರು…

Read More