ನಾಳೆ ಆಯನೂರಿಗೆ ಪ್ರಧಾನಿ ಮೋದಿ – ಕಾರ್ಯಕ್ರಮಕ್ಕೆ ಸಕಲ ಸಿದ್ದತೆ|MODI

ನಾಳೆ ಶಿವಮೊಗ್ಗದ ಆಯನೂರಿಗೆ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತಿದ್ದಾರೆ. ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.  ಮೇ 7ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್‌ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ…

Read More

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More

ಅಂತೂ ಪತ್ತೆಯಾಯ್ತು ಕೂಡ್ಲಿಗಿಯಲ್ಲಿ ನೀರುಪಾಲಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ :

  ಶಿವಮೊಗ್ಗ : ಕೂಡ್ಲಿಯಲ್ಲಿ ನೀರುಪಾಲಾಗಿದ್ದ ಹರೀಶ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ನೀರುಪಾಲಾದ ಹರೀಶ್ ಮೃತದೇಹ ಮೂರು ದಿನಗಳವರೆಗೆ ಪತ್ತೆಯಾಗಿರಲಿಲ್ಲ.ಸತತ ಶೋಧಕಾರ್ಯದ ಪರಿಣಾಮ ಇಂದು ಸಂಜೆ ಆತನ ಮೃತದೇಹ ಪತ್ತೆಯಾಗಿದೆ. ಮಡಿಕೆ ಚೀಲೂರಿನ ಬಳಿ ಹರೀಶ್ ಮೃತದೇಹ ಪತ್ತೆಯಾಗಿದೆ. ಭಾನುವಾರ ಪಿತೃಪಕ್ಷದ ಸ್ನಾನಕ್ಕೆ ಕೂಡಲಿಯ ಸಂಗಮಕ್ಕೆ ಬಂದಿದ್ದ ಬೀರೂರಿನ ಪಿನಿಯಾಚಾರ್ ಕುಟುಂಬದ ಹರೀಶ್ (24) ನೀರಿಗೆ ಇಳಿದಾಗ ಕೊಚ್ಚಿಹೋಗಿದ್ದನು. ಮೃತದೇಹವನ್ನು ಅಗ್ನಿಶಾಮಕ ದಳದವರು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ಹಸ್ತಾಂತರಿಸಿದ್ದಾರೆ.

Read More

ರಿಪ್ಪನ್‌ಪೇಟೆ : ಸಿಡಿಲು ಬಡಿದು ಮೂರು ಎಮ್ಮೆ ಸಾವು|lighting

ಮೇಯಲು ಹೋಗಿದ್ದ ಜಾನುವಾರುಗಳಿಗೆ ಸಿಡಿಲು ಬಡಿದು ಮೂರು ಎಮ್ಮೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಮ್ಮಡಿಕೊಪ್ಪ ಗ್ರಾಮದ ಪುರುಮಠ ಎಂಬಲ್ಲಿ ನಡೆದಿದೆ. ಪುರುಮಠ ಗ್ರಾಮದ ರಾಜು ಎಂಬವರಿಗೆ ಸೇರಿದ ಮೂರು ಸಾಕು ಎಮ್ಮೆಗಳು ಮನೆ ಸಮೀಪದ ಕಾಡಿನಲ್ಲಿ ಮೇಯಲು ಹೋದಾಗ ಈ ಘಟನೆ ನಡೆದಿದೆ. ಗುರುವಾರ ಮೇಯಲು ಬಿಟ್ಟಿದ್ದ ಎಮ್ಮೆ ಮನೆಗೆ ಬಾರದ ಹಿನ್ನಲೆಯಲ್ಲಿ ಸ್ಥಳೀಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಮನೆ ಮಂದಿ, ಕೊನೆಗೆ ಮನೆ ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಎಮ್ಮೆಯ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ..!!ವೀಡಿಯೋ ವೈರಲ್|excise

ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ. ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು…

Read More

Ripponpete | ವಿವಿಧಡೆಯಲ್ಲಿ ಶಿವನಾಮ ಸ್ಮರಣೆ

ವಿವಿಧಡೆಯಲ್ಲಿ ಶಿವನಾಮ ಸ್ಮರಣೆ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನ, ಬೈರಾಪುರ ಉದ್ಭವ ಕಂತೆ ಸಿದ್ದೇಶ್ವರ ದೇವಸ್ಥಾನ ಮತ್ತು ಕೋಡೂರು ಶಂಕರೇಶ್ವರ ದೇವಸ್ಥಾನ,ಬರುವೆ ಕಲಾನಾಥ ರಾಮೇಶ್ವರ ದೇವಸ್ಥಾನ,ಹುಂಚದ ಕಮಟೇಶ್ವರ ದೇವಸ್ಥಾನ,ಹಾಲುಗುಡ್ಡೆಯ ಹಾಲರಾಮೇಶ್ವರ ದೇವಸ್ಥಾನ ಗವಟೂರು ರಾಮೇಶ್ವರದೇವಸ್ಥಾನ,ಕುಕ್ಕಳಲೇ ಕಾಶಿವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಇಂದು ವಿಶೇಷ ಪೂಜೆ ಮತ್ತು ರುದ್ರಾಭಿಷೇಕ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಮುಂಜಾನೆಯಿಂದಲೇ ಭಕ್ತರು ತಂಡೋಪತಂಡವಾಗಿ ದೇವಸ್ಥಾನಕ್ಕೆ ತೆರಳಿ ಶಿವ ನಾಮ ಸ್ಮರಣೆಯನ್ನು  ಜಪಿಸಿದರು. ದೇವಸ್ಥಾನಗಳಲ್ಲಿ ಭಕ್ತರ ಸಮೂಹ ಸರತಿ ಸಾಲಿನಲ್ಲಿ…

Read More

ದಳಪತಿಗಳನ್ನು ಹಾಡಿ ಹೊಗಳಿದ ಸಿ ಎಂ ಇಬ್ರಾಹಿಂ

ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ  ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.‌ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ  ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು. ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು – ಓರ್ವ ಸಾವು|accident

ಶಿವಮೊಗ್ಗ ಹೊರವಲಯದಲ್ಲಿ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರನ್ನ ಚಲಾಯಿಸಿಕೊಂಡು ಬಂದ ವ್ಯಕ್ತಿ ಸಾವನ್ನಪ್ಪಿದ್ದಾನೆ.ಸೋಮವಾರ ಸಂಜೆ ಸುಮಾರು 4-45 ರ ವೇಳೆಗೆ ಶಿವಮೊಗ್ಗದಿಂದ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮಕ್ಕೆ ಕಿಯಾ ಕಾರಿನಲ್ಲಿ ಏಕಾಂಗಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಶರತ್ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. 29 ವರ್ಷದ ಯುವಕ ಶರತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ಠಾಣ ವ್ಯಾಪ್ತಿಯಲ್ಲಿ…

Read More
Exit mobile version