ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ನಡೆಯಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ
ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ, ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಿದರೆ ಆಗಲ್ಲ. ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಕಾಲೇಜು ಆವರಣದಲ್ಲಿ ನಡೆಯವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕಾಲೇಜು ಆಡಳಿತ ನಿರ್ಧರಿಸಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು. ಇದನ್ನು ಕಡ್ಡಾಯ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ…