Headlines

ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ|deadbody

ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಟ್ಟಿನಕೆರೆ ನಿವಾಸಿ ಜೋಸ್ (ಆಲುವ) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ ಎನ್ನಲಾಗುತಿದೆ. ಈತನು ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದು ಪತ್ನಿ ಮತ್ತು ಮಕ್ಕಳು ಹಲವು ವರ್ಷಗಳ ಹಿಂದೆಯೇ ಈತನನ್ನು ಬಿಟ್ಟು ಹೋಗಿದ್ದರು. ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದ ಈತನು ನಾಲ್ಕು ದಿನಗಳ ಹಿಂದೆ ಈತ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಈತ ಮನೆಮನೆಗೆ…

Read More

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.! ಹೊಸನಗರ : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯ ಪಿಎಸೈ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ಕಟ್ಟಿನಹೊಳೆ ನಿವಾಸಿ ಶರತ್ ಎಂಬಾತನನ್ನು ಬಂಧಿಸಿ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ….

Read More

ರಿಪ್ಪನ್ ಪೇಟೆಯ ಸಮೀಪದ ಅರಸಾಳು ಬಳಿ ಕಾರು ಬಸ್ಸು ಮುಖಾಮುಖಿ ಡಿಕ್ಕಿ:

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಬಳಿ ಬಸ್ ಹಾಗೂ ಕಾರ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ‌. ಶಿವಮೊಗ್ಗದಿಂದ ರಿಪ್ಪನ್ ಪೇಟೆ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಕಾರ್ ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಇಬ್ಬರು ಮಕ್ಕಳಿಗೆ ಗಂಭೀರವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರೂ ಸಾಗರ ಮೂಲದವರೆಂದು ತಿಳಿದುಬಂದಿದೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಕಡೆ ತೆರಳುತ್ತಿದ್ದ…

Read More

ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ|Inauguration

ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ  ರಿಪ್ಪನ್‌ಪೇಟೆ : ಶಾಸಕರಾದವರಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು ಜೊತೆಯಲ್ಲಿ ಅಭಿವೃದ್ದಿಗಾಗಿ ಸರ್ಕಾರದ ಅನುದಾನವನ್ನು ತರುವ ಎದೆಗಾರಿಕೆ ಇರಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ವ್ಯಾಪ್ತಿಯಲ್ಲಿ ಬರುವ ಸಾಗರ ತೀರ್ಥಹಳ್ಳಿ ಮಾರ್ಗದ ಅಂದಾಸುರ ಬಳಿಯಲ್ಲಿನ ಶಿಥಿಲಗೊಂಡ ಸಂಪರ್ಕ ಸೇತುವೆಗೆ 2.40 ಕೋಟಿ ವೆಚ್ಚದ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಖೈದಿಗೆ ಗಾಂಜಾ ಸಪ್ಲೆಗೆ ಯತ್ನ – ಓರ್ವ ವಶಕ್ಕೆ!!arrested

ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೇಂದ್ರ ಕಾರಾಗೃಹದ ಖೈದಿಗೆ ಗಾಂಜಾ ಸಪ್ಲೇ ಮಾಡಲು ಬಂದಿದ್ದ ಓರ್ವನನ್ನ ಡಿಎಆರ್ ಪೊಲೀಸರು ಹಿಡಿದು ದೊಡ್ಟಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಸ್ಲಾಮ್ ಎಂಬ ಕೈದಿಯು ಇಂದು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮೆಗ್ಗಾನ್  ಗೆ ಡಿಎಆರ್ ಪೊಲೀಸರು ಕರೆತಂದಿದ್ದರು. ಈತನಿಗೆ ಜಿಲಾನ್ ಎಂಬಾತನು ಗಾಂಜಾ ನೀಡಲು ಮುಂದಾಗಿದ್ದಾನೆ. ತಕ್ಷಣವೇ ಅಲರ್ಟ್ ಆದ ಡಿಎಆರ್ ಪೊಲೀಸರು ಯುವಕನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ವರ ಮೇಲೆ ಗಾಂಜಾದ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ…

Read More

ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ

ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ  ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಸಲುವಾಗಿ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನ  ಹಾಗೂ ಅಪಾರ ಪ್ರಮಾಣದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ರಿಪ್ಪನ್‌ಪೇಟೆ ಸಮೀಪದ ಕೆಂಚನಾಳ ಗ್ರಾಮದ ಗಜೇಂದ್ರ @ ಗಜ (37) ಸಾಗರ  ತಾಲೂಕಿನ ಆಚಾಪುರದ…

Read More

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More

ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್!

Over 500 traffic violation cases have been registered in Ripponpet under the ITMS system, with penalty notices being sent directly to vehicle owners’ homes via post for rule violations. ಸಂಚಾರ ನಿಯಮ ಉಲ್ಲಂಘನೆಗೆ ‘ಅದೃಶ್ಯ ಪೊಲೀಸ್’ ಕಣ್ಣು : 500ಕ್ಕೂ ಹೆಚ್ಚು ಪ್ರಕರಣ ದಾಖಲು, ಮನೆ ಬಾಗಿಲಿಗೆ ಅಂಚೆ ಮೂಲಕ ದಂಡದ ನೋಟಿಸ್! ರಿಪ್ಪನ್ ಪೇಟೆ : ರಸ್ತೆಯಲ್ಲಿ ಪೊಲೀಸ್ ಕಾಣಿಸಿದರೆ ಹೆಲ್ಮೆಟ್ ತಕ್ಷಣ ತಲೆಗೆ…

Read More

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ರಿಪ್ಪನ್ ಪೇಟೆಯಲ್ಲಿ ನೂತನ ಕನ್ನಡ ಸಂಘಕ್ಕೆ ಪದಾದಿಕಾರಿಗಳ ಆಯ್ಕೆ:

ರಿಪ್ಪನ್ ಪೇಟೆ : ಪಟ್ಟಣದಲ್ಲಿ ನೂತನವಾಗಿ ಕಸ್ತೂರಿ ಕನ್ನಡ ಸಂಘ ಅಸ್ತಿತ್ವಕ್ಕೆ ಬಂದಿದ್ದು ಸೋಮವಾರ ಅದರ ಪದಾದಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಪಟ್ಟಣದಲ್ಲಿ ಸೋಮವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ಅಧ್ಯಕ್ಷರಾಗಿ ಆರ್ ಎ ಚಾಬುಸಾಬ್ , ಪ್ರಧಾನ ಕಾರ್ಯದರ್ಶಿಯಾಗಿ…

Read More