Headlines

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

ಕುಂಸಿ : ಅಪರಿಚಿತ ವ್ಯಕ್ತಿಯ ಶವ : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ:: ತಾಲ್ಲೂಕಿನ ಹಾರನಹಳ್ಳಿ ಸಂತೆ ಮೈದಾನದ ಬಳಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.     ಅಪರಿಚಿತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ ಇದ್ದು, ಬಿಳಿ ಮತ್ತು ಕಪ್ಪುಮಿಶ್ರಿತ ಗಡ್ಡ ಇರುತ್ತದೆ. ತಲೆಯಲ್ಲಿ 2 ಇಂಚು ಉದ್ದನೆಯ ಕಪ್ಪು ಮಿಶ್ರತ ಬಿಳಿ ಕೂದಲಿದ್ದು, ನೀಲಿ ಬಣ್ಣದ ಬಿಳಿ ಗೆರೆಯಿರುವ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಒಂದು ಸಿಮೆಂಟ್ ಮಿಶ್ರಿತ ಕೆಂಪು ಬಣ್ಣದ…

Read More

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉರ್ದು ಶಾಲೆಯ ಶಿಕ್ಷಕ ಬಂಧನ|POCSO

9 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬರುವ ಶಾಲೆಯೊಂದಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕ ಅಕ್ಬರ್ ಎಂಬುವರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿಯ ಮನೆಯವರು ದೂರು ನೀಡಿದ್ದರು. ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ಸಮೀಪದ ಮುಡುಬ ಬಳಿ ಸ್ವಿಫ್ಟ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತರೀಕೆರೆ ನಿವಾಸಿ ವಕೀಲರಾದ ಸಂಪತ್ ಕುಮಾರ್ (50) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಡುಬಾ ಹತ್ತಿರದ ತಿರುವಿನಲ್ಲಿ ಅತೀ ವೇಗದಿಂದ ಚಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಜ಼ೈರ್ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ತೋಟಕ್ಕೆ ಹಾರಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಟ್ಟಿದ್ದಾರೆ. ಸಂಪತ್ ಕುಮಾರ್ ರವರ ಮಗನಿಗೆ ಪಡುಬಿದ್ರೆ ಸಮೀಪದ ಆಳ್ವಾಸ್ ಕಾಲೇಜಿನಲ್ಲಿ ದಾಖಲಾತಿ ಮಾಡಿಸಿ ಹಿಂದಿರುಗುತ್ತಿರುವಾಗ ಈ ಘಟನೆ…

Read More

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕ ವಶಕ್ಕೆ – ಶೂಟ್ ಶೂರರಿಗೆ ಸಿಂಹಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಪಿಎಸ್‌ಐ ಪ್ರವೀಣ್ ಎಸ್ ಪಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ…

Read More

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ ಭದ್ರಾವತಿ: ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್‌ನಲ್ಲಿ ಗುರುವಾರ ಸಂಜೆ ಬಾಯ್ಲರ್ ಸ್ಫೋಟಗೊಂಡು  ಐವರು ಗಂಭೀರ ಗಾಯಗೊಂಡಿದ್ದಾರೆ. ಒಬ್ಬ ನಾಪತ್ತೆಯಾಗಿದ್ದಾನೆ. ಸ್ಫೋಟದಿಂದ ಕಟ್ಟಡ ಭಾಗಶಃ ಕುಸಿದು ಬಿದ್ದಿದೆ. ಕಾರ್ಖಾನೆಯ ಹಲವು ವಸ್ತ್ತುಗಳು ದೂರ ಹಾರಿಹೋಗಿ ಬಿದ್ದಿವೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಒಟ್ಟು ೬ ಜನರು ಮಿಲ್‌ನಲ್ಲಿ ಕೆಲಸದಲ್ಲಿದ್ದರು. ಅವಶೇಷಗಳಡಿ ಸಿಲುಕಿರುವ ಇನ್ನೊಬ್ಬನಿಗಾಗಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸ್ಫೋಟದಿಂದ ಹಾರಿದ ವಸ್ತುಗಳು…

Read More

ಕಾಲೇಜಿನ ಗ್ರಂಥಾಲಯದಲ್ಲಿ ಪ್ರತ್ಯಕ್ಷವಾದ ಹಾವು – ಭಯ ಮೂಡಿಸಿದ್ದ ಬರೋಬ್ಬರಿ 8 ಅಡಿ ಉದ್ದದ ಹಾವು

ಶಿವಮೊಗ್ಗ ನಗರದ ಸಹ್ಯಾದ್ರಿ ಸೈನ್ಸ್ ಕಾಲೇಜು ಆವರಣದಲ್ಲಿರುವ ಗ್ರಂಥಾಲಯದಲ್ಲಿಯೇ ಹಾವೊಂದು ಕಾಣಿಸಿಕೊಂಡಿತ್ತು.  ಮೊನ್ನೆ ಕಾಲೇಜಿನ ಗ್ರಂಥಾಲಯದಲ್ಲಿ ಸುಮಾರು 8 ಅಡಿ ಉದ್ದದ ಹಾವೊಂದು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಪುಸ್ತಕಗಳ ರಾಶಿಯ ಅಡಿಯಲ್ಲಿ ಸೇರಿಕೊಂಡಿದ್ದ ಹಾವು, ಆಗಾಗ ಸದ್ದು ಮಾಡುತ್ತಿತ್ತು. ಮೊದಲೇ ನಿಶ್ಚಬ್ಧವಾಗಿದ್ದ ಲೈಬ್ರರಿಯಲ್ಲಿ ಹಾವಿನ ಸದ್ದು ತುಸು ಜೋರಾಗಿಯೇ ಕೇಳಿಬರುತ್ತಿತ್ತು.  ಇನ್ನೂ ಏನು ಶಬ್ಧವಾಗುತ್ತಿದೆ ಎಂದು ನೋಡಿದ ಸಿಬ್ಬಂದಿ ಹಾವೊಂದು ಗೃಂಥಾಲಯವನ್ನು ಸೇರಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಹಾವನ್ನು ಸುರಕ್ಷಿತವಾಗಿ ಹಿಡಿಯಬಲ್ಲ ಸ್ನೇಕ್​ ಜಯಂತ್ ಬಾಬುರನ್ನ ಸಂಪರ್ಕಿಸಿದ್ದಾರೆ.  ಕರೆ…

Read More

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read More