Headlines

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಇಬ್ಬರು ಸಾವು

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಂದು ಮುಂಜಾನೆ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಡೈರಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಬೆಳ್ಳಂಬೆಳಗ್ಗೆಯೇ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ದಾಟಿ ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ…

Read More

ಕರುಣೆಯಿಲ್ಲದ ಗ್ರಾಮಾಡಳಿತ : 25 ವರ್ಷಗಳಿಂದ ಆಶ್ರಯ ಮನೆಗಾಗಿ ಬಡ ಮಹಿಳೆಯೊಬ್ಬರ ಅಲೆದಾಟ

ಗ್ರಾಮೀಣ ಭಾಗದ ಬಡ ಜನತೆ ಹಾಗೂ ನಿರ್ಗತಿಕರು ತಮ್ಮ ಸ್ವಂತ ವಾಸದ ಮನೆಯಲ್ಲಿ ಬದುಕಲಿ ಎಂಬ ಸದುದ್ದೇಶದಿಂದ ಸರಕಾರ ಆಶ್ರಯ ಯೋಜನೆ ಜಾರಿಗೊಳಿಸಿದ್ದರು ಸಹ ಗ್ರಾಮಾಡಳಿತ ನಿರ್ಲಕ್ಷದಿಂದ ಆಶ್ರಯ ಮನೆಗಾಗಿ ಕಳೆದ 25 ವರ್ಷಗಳಿಂದ ಮಹಿಳೆಯೊಬ್ಬರಿಗೆ ಅಲೆದಾಡಿಸುತ್ತಿದೆ. ಹುಂಚ ಹೋಬಳಿಯ ಅಳಲೆ ಕೊಪ್ಪ ಗ್ರಾಮದ  ಮಹಿಳೆ ಇಂದಿರಾ ಎಂಬುವರು ಸಾವಿರಾರು ಬಾರಿ ಗ್ರಾಮಪಂಚಾಯತಿಗೆ ಅಲೆದರು ಸಹ ಅಲ್ಲಿನ ಗ್ರಾಮಾಡಳಿತ ಇದುವರೆಗೂ ಬಡ ಮಹಿಳೆಯ ಮೇಲೆ ಯಾಕೋ ಕರುಣೆಯನ್ನು ತೋರಿಸಿಲ್ಲ. ಸರ್ಕಾರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಗ್ರಾಮಾಡಳಿತದ ಜವಾಬ್ದಾರಿ…

Read More

ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ : ಶೂ ಧರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ದೈಹಿಕ ಶಿಕ್ಷಕ

ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ. ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ  ಧ್ವಜಾರೋಹಣ…

Read More

ಕೊರೊನಾ ಹಿನ್ನಲೆ ಕೆಂಚನಾಲ ಮಾರಿಕಾಂಬಾ ಜಾತ್ರೆ ಸರಳ ಆಚರಣೆ :

ರಿಪ್ಪನ್ ಪೇಟೆ: ಇತಿಹಾಸ ಪುರಾಣ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ಬೇಸಿಗೆಯ ಜಾತ್ರೆ ಸರಳವಾಗಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಧಾರ್ಮಿಕ ಕಾರ್ಯಗಳನ್ನು ಸರಳವಾಗಿ ಆಚರಿಸಲು ಅನುಮತಿ ದೊರೆತ ಹಿನ್ನೆಲೆಯಲ್ಲಿ ಕೇವಲ ಪೂಜಾ ಕಾರ್ಯಕ್ರಮವನ್ನು ಮಾತ್ರ ನೆರವೇರಿಸಲಾಯಿತು. ಬೆಳಿಗ್ಗೆಯಿಂದಲೇ ಕೇವಲ ಬೆರಳೆಣಿಕೆಯಷ್ಟು ಭಕ್ತರು ಕೋವಿಡ್ ನಿಯಮಕ್ಕನುಸಾರವಾಗಿ ದೇವಾಲಯಕ್ಕೆ ಆಗಮಿಸಿ ದೇವಾಲಯದ ಹೊರ ನಿಂತು ದೇವಿಯ ಆಶೀರ್ವಾದವನ್ನು ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ…

Read More

ರಿಪ್ಪನ್ ಪೇಟೆಯಲ್ಲಿ ‘ಗ್ರಾಮ ಒನ್‌’ ಕೇಂದ್ರಕ್ಕೆ ಚಾಲನೆ : ಒಂದೇ ಸೂರಿನಡಿ ಸಿಗಲಿದೆ 750 ಸರ್ಕಾರಿ ಸೇವೆಗಳು..!!

ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮಗಳ ಮಟ್ಟದಲ್ಲೇ ‘ಗ್ರಾಮ ಒನ್‌’ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು,ಇದರ ಅಂಗವಾಗಿ ರಿಪ್ಪನ್ ಪೇಟೆ ಶಿವಮೊಗ್ಗ ರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಯ ಮುಂಭಾಗ ಗ್ರಾಮ ಒನ್ ಕೇಂದ್ರವನ್ನು ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್‌…

Read More

ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.  ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…

Read More

ಪದ್ಮ ಪ್ರಶಸ್ತಿಗಳು ಪ್ರಕಟ : ಜನರಲ್ ಬಿಪಿನ್ ರಾವತ್ ಗೆ ಮರಣೋತ್ತರ ಪದ್ಮ ವಿಭೂಷಣ : ಗುಲಾಂ ನಬಿ ಅಜಾದ್,ಸತ್ಯ ನಾದೆಲ್ಲಾ ಸೇರಿದಂತೆ ಅನೇಕರಿಗೆ ಒಲಿದ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರತಿ ವರ್ಷ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜನರಲ್ ಬಿಪಿನ್ ರಾವತ್ ಅವರಿಗೆ ಪದ್ಮವಿಭೂಷಣ ಸೇರಿದಂತೆ ಸುರಂಗ ಕೊರೆದು ಕೃಷಿ ಭೂಮಿಗೆ ನೀರು ಹರಿಸುವ ಸಾಧನೆ ತೋರಿದ್ದ ಬಂಟ್ವಾಳ ತಾಲೂಕಿನ ವಿಟ್ಲದ ಪ್ರಗತಿಪರ ಕೃಷಿಕ ಕೇಪು ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ…

Read More

ರಿಪ್ಪನ್ ಪೇಟೆ ಯಲ್ಲಿ ರೋಟರಿ ಭವನ ಉದ್ಘಾಟನೆ :

 ರಿಪ್ಪನ್ ಪೇಟೆ : ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು ರೋಟರಿಯ ಮೂಲ ಉದ್ದೇಶ ಸಮಾಜ ಸೇವೆಯಾಗಿದೆ. ಆರೋಗ್ಯ ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ  ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ರೋಟರಿ 31 82ರ ಜಿಲ್ಲಾ ಗವರ್ನರ್ ಎಂ ಜಿ ರಾಮಚಂದ್ರಮೂರ್ತಿ ಹೇಳಿದರು.  ರಿಪ್ಪನ್ ಪೇಟೆ ಯಲ್ಲಿ ನೂತನವಾಗಿ ನಿರ್ಮಾಣವಾದ ರೋಟರಿ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು  ಸಮಾಜಸೇವೆಯ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು ಎಂಬುದಕ್ಕೆ ರೋಟರಿ ಸಂಸ್ಥೆಯ ಕಾರ್ಯವೈಖರಿಗಳು ಉತ್ತಮ ಉದಾಹರಣೆಗಳಾಗಿವೆ. ಮಾನವ ಜಗತ್ತಿನಿಂದ ಪೋಲಿಯೋ…

Read More

ರಿಪ್ಪನ್ ಪೇಟೆ ಯಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಮಹಿಳೆಯರಿಗೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರ :

ರಿಪ್ಪನ್ ಪೇಟೆ : ಮಹಿಳೆಯರು ಮತ್ತು ಯುವತಿಯರು ಬದುಕು ಕಟ್ಟಿಕೊಳ್ಳಲು ಮತ್ತು ಸಾವಲಂಬಿಯಾಗಿ ಸಮಾಜದಲ್ಲಿ ಜೀವನ ನಡೆಸಲು ವೃತ್ತಿ ಕೌಶಲ್ಯದ ಸ್ವಯಂ ಉದ್ಯೋಗದ   ತರಬೇತಿ ಪಡೆದುಕೊಳ್ಳುವುದು ಅವಶ್ಯಕ ಎಂದು ಲೀಲಾ ಶಂಕರ್ ಹೇಳಿದರು.  ಪಟ್ಟಣದ ತೀರ್ಥಳ್ಳಿ ರಸ್ತೆಯ ಭವನದಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಪ್ರಾರಂಭಿಸಲಾಗಿರುವ ಟೈಲರಿಂಗ್. ಬ್ಯೂಟಿಷಿಯನ್ ಸೇರಿದಂತೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರದಲ್ಲಿ  ಅಜಾದ್ ಕಿ ಅಮೃತಮಹೋತ್ಸವ ಅಂಗವಾಗಿ ಮಹಿಳೆಯರಿಗೆ ಮತ್ತು ಯುವತಿಯರಿಗಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದವರಿಗೆ ಪ್ರಶಸ್ತಿ…

Read More

ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36…

Read More