ಸಾಗರ: ನಿಗೂಢವಾಗಿ ಕಣ್ಮರೆಯಾಗಿದ್ದ “”ಪ್ರಕಾಶ್ ಟ್ರಾವೆಲ್ಸ್” ಮಾಲೀಕ ಶವವಾಗಿ ಪತ್ತೆ! ನಿಜಕ್ಕೂ ಇದು ಆತ್ಮಹತ್ಯೆಯೇ…? “ಪಟಗುಪ್ಪೆ” ಸುತ್ತಾ, ಈಗ ಅನುಮಾನದ ಹುತ್ತ…!
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ರವರ ಅಳಿಯ ಕಾಫೀ ಡೇ ಸಿದ್ಧಾರ್ಥ್ ಆತ್ಮಹತ್ಯೆಯ ಪ್ರಕರಣದಂತೆಯೇ ಸಾಗರದ ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ರವರ ನಿಗೂಢ ನಾಪತ್ತೆ ಪ್ರಕರಣವೂ ಸಹ ನೋಡಲು ಒಂದೇ ರೀತಿಯಾಗಿ ಕಾಣುತ್ತಿದೆ! ಯಾಕಂದ್ರೇ, ಎಲ್ ಎನ್ ಟಿ ಇನ್ನಿತರೆ ತೀರಾ ಟಾರ್ಚರ್ ಕೊಡುವ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮಾಡಿಕೊಂಡಿದ್ದ ಸಿದ್ಧಾರ್ಥ್ ರವರು ದಿಕ್ಕೇ ಕಾಣದಂತಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು, ಇದೇ ಪ್ರಕರಣದಂತೆಯೆ ಪ್ರಕಾಶ್ ರವರು ಸಹ ಸಾಲ ಸೋಲಕ್ಕೆ ಅಂಜಿ…