Headlines

ರಿಪ್ಪನ್ ಪೇಟೆ : ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಯುವಕ ಸಾವು : ಅಮಾಯಕ ಯುವಕನ ಸಾವಿಗೆ ಮನೆಯ ಮಾಲೀಕನ ನಿರ್ಲಕ್ಷ್ಯವೇ ಕಾರಣವಾಯಿತಾ ?????

ರಿಪ್ಪನ್ ಪೇಟೆ : ಮನೆಯ ಹಿಂಬದಿ ಇರುವ ತೆರೆದ ಬಾವಿಗೆ ಸೋಮವಾರ ರಾತ್ರಿ  ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯ ವಿನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಂಜನೇಯ (ಅಂಜಿ) (25) ಮನೆಯ ಹಿಂಬದಿಯಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 10.30 ರ ವೇಳೆ ಮನೆಯ ಕಾಂಪೌಂಡಿನ ಒಳಗಡೆ ಇದ್ದ ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ತೆರೆದ ಬಾವಿಗೆ ಬಿದ್ದ ಪರಿಣಾಮ ತಲೆಗೆ ಭೀಕರ ಪೆಟ್ಟಾಗಿದ್ದು…

Read More

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ ರಿಪ್ಪನ್‌ಪೇಟೆ;-ಸಮೀಪದ ಕೋಡೂರು ಬ್ಲಾಸಂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಚಿಕ್ಕಜೇನಿ ಗ್ರಾಮದ ಶೇಷ ಆಚಾರ್ ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ಲಾಸಂ ಇಂಗ್ಲಿಸ್ ಮೀಡಿಯಂ ಸ್ಕೂಲ್‌ನ ಸಂಸ್ಥಾಪಕ ಅಧ್ಯಕ್ಷ ಬಿ.ಜೆ.ಚಂದ್ರುಮೌಳಿಗೌಡರು ಆಧ್ಯಕ್ಷತೆ ವಹಿಸಿದ್ದರು. ನಿವೃತ್ತ ಯೋಧ ಚಿಕ್ಕಜೇನಿ ಶೇಷ ಆಚಾರ್ ಇವರನ್ನು 77 ನೇ ಸ್ವಾತಂತ್ರೊö್ಯತ್ಸವದ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಜೈಪ್ರಕಾಶಶೆಟ್ಟಿ, ಸಂಸ್ಥೆಯ ನಿರ್ದೇಶಕರಾದ ದಿವಾಕರಶೆಟ್ಟರು…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ :  ಶಿವಮೊಗ್ಗ ರಸ್ತೆಯ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಹದಿನಾರನೇ ಮೈಲಿಕಲ್ ಬಳಿ ಡಿಕ್ಕಿಯಾಗಿದ್ದು,ಅಪಘಾತದ ಭೀಕರತೆಗೆ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲಿ ಮತಪಟ್ಟಿದ್ದಾನೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ ಅಧಿಕಾರಿಗಳು ನಡೆಸಿದ ಭ್ರಷ್ಟಾಚಾರಕ್ಕೆ ಮೆಸ್ಕಾಂ ನೌಕರನೊಬ್ಬ ಜೀವ ತೆತ್ತ ಘಟನೆ ಆಯನೂರು ಸಮೀಪದ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಿನ್ನೆ(ಗುರುವಾರ) ನಡೆದಿದೆ. ನಂದೀಶ್ (38) ಎಂಬಾತನೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇಲಾಖೆಯ ವಸತಿ ಗೃಹದಲ್ಲೇ ಮೆಸ್ಕಾಂ ಮೇಸ್ತ್ರೀ ನಂದೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದೀಶ್ ವಸತಿ ಗೃಹದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನದಲ್ಲದ ತಪ್ಪಿಗೆ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ನಂದೀಶ್ ಹೇಳಿದ್ದಾರೆ. ಆತ್ಮಹತ್ಯೆಗೂ…

Read More

ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -.ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ನೈರುತ್ಯ  ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ  ಭರ್ಜರಿ ಗೆಲುವು -. ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ರಿಪ್ಪನ್ ಪೇಟೆ :ನೈರುತ್ಯ ಶಿಕ್ಷಕರ ಹಾಗೂ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಭೋಜೆಗೌಡ  ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ   ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಹಾಗೂ ಪದವೀಧರ  ಕ್ಷೇತ್ರದ ಪರಿಷತ್…

Read More

ಸಿಗಂದೂರು ದೇವಸ್ಥಾನಕೆ ಬಂದಿದ್ದ ಭಕ್ತಾಧಿಗಳ ಜೀಪ್ ಕಂದಕಕ್ಕೆ ಉರುಳಿ ಓರ್ವ ಮಹಿಳೆ ಸಾವು : ಉಳಿದ ಪ್ರಯಾಣಿಕರ ಸ್ಥಿತಿ ಗಂಭೀರ

ಸಾಗರ ತಾಲೂಕಿನ ತುಮರಿ ಬಳಿಯ ವಕ್ಕೋಡಿ ತಿರುವಿನಲ್ಲಿ ಕಂದಕಕ್ಕೆ ಟೆಂಪೋ ಟ್ರ್ಯಾಕ್ಸ್ ಉರುಳಿ ಬಿದ್ದು ಓರ್ವ ಮಹಿಳೆ ಮೃತ ಪಟ್ಟಿರುವ ಘಟನೆ ನಡೆದಿದೆ. ಸಿಗಂದೂರು ದೇವಾಲಯಕ್ಕೆ ಆಗಮಿಸುತ್ತಿದ್ದ  ಕುಷ್ಟಗಿಯ ಭಕ್ತಾದಿಗಳು ಇದ್ದ ಜೀಪ್ ಕಂದಕಕ್ಕೆ ಬಿದ್ದು ಗೌರಮ್ಮ ಎನ್ನುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ತುಮರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಸಾಗರ ಆಸ್ಪತ್ರೆಗೆ ಕಳುಹಿಸಲಾಗಿದೆ.  ಇವತ್ತು ದ್ವೀಪದಲ್ಲಿ ಎರಡು ಅಫಘಾತವಾದ ಕಾರಣ 108 ಮೊದಲ ಅಫಘಾತಕ್ಕೆ ಸೇವೆ ನೀಡಲು ಕುಂದಾಪುರ ಹೋದ ಕಾರಣ ಲಭ್ಯವಾಗಲಿಲ್ಲ. ಜಂಟಿ 108…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಜೆಡಿಎಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಬಗ್ಗೆ ಒಲವು : ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ – ಎಂ ಶ್ರೀಕಾಂತ್

ಶಿವಮೊಗ್ಗ: ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್…

Read More

ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹ

ಚಂದ್ರಗುತ್ತಿ:  ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು. ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್  ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು  ಇವುಗಳ ಮಹತ್ವ ತಿಳಿಸಿದರು ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ…

Read More
Exit mobile version