
ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್ ಮಾಡಿದ ಮಹಿಳೆಯರು
ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….


