Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ  ಬೇಳೂರು ರಿಪ್ಪನ್‌ಪೇಟೆ :  ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ  ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ  ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ  ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ‌ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…

Read More

ಸಾಗರದ ಹುಲಿದೇವರ‌ಬನದ ಎಂಪಿಎಂ ಅರಣ್ಯ ಪ್ರದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ : ಆಟವಾಡುತ್ತಿದ್ದ ಬಾಲಕಿ ಸಾವು

ಸಾಗರ : ಇಂದು ಸಂಜೆ ನಡೆದ ಅವಘಡದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯೊಬ್ಬಳ ಮೇಲೆ ಮರದ ದಿಮ್ಮಿ ಹರಿದು ಸಾವನ್ನಪ್ಪಿರುವ ಘಟನೆ ಸಾಗರದ ಹುಲಿದೇವರ ಬನದಲ್ಲಿರುವ MPM ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇಂದು ಸಂಜೆ ಸುಮಾರು 4-30ರ ಸಮಯದಲ್ಲಿ ಮರಗಳನ್ನ ಕಡಿದು ಒಂದರ ಮೇಲೊಂದು ಮರದ ದಿಮ್ಮಿಗಳನ್ನ ಸಿಪ್ಪೆ ಸುಲಿದು ಜೋಡಿಸಿ ಇಡಲಾಗಿತ್ತು. ಮರದ ದಿಮ್ಮಿಯ ಕೆಳಗೆ 6 ವರ್ಷದ ಶ್ರಾವಣಿ ಎಂಬ ಹೆಣ್ಣು ಮಗು ಆಡುತ್ತಿದ್ದ ವೇಳೆ ಜೋಡಿಸಿದ ಮರದ ದಿಮ್ಮಿ ಚದುರಿಹೋಗಿದ್ದು ಮಗುವಿನ ಮೇಲೆ…

Read More

ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested

ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25  ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು  ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…

Read More

ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM

ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…

Read More

ರಿಪ್ಪನ್ ಪೇಟೆ,ಶಿವಮೊಗ್ಗ ನಗರದಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿದಿದೆ. ವಿನಾಯಕ ವೃತ್ತ ಸೇರಿ ಹಲವೆಡೆ ಚರಂಡಿ ನೀರು ರಸ್ತೆಯ ಮೇಲೆ ಹರಿದಿದ್ದು, ಜನರ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಪಟ್ಟಣದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಶುರುವಾಗಿದ್ದು, ಬಿಡುವು ಕೊಡದೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಪಟ್ಟಣದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧೆಡೆ ಇವತ್ತು ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. …

Read More

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ|running – state – selection

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ದೋಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ| ಜೀವಿತಾ ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ 400 ಮೀ ಓಟದಲ್ಲಿ ಪ್ರಥಮ ಹಾಗೂ 600 ಮೀಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜೀವಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ…

Read More

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More

ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರ ಬಂಧನ!!!!!

ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ  ಗೊಠಾಣೆ ಗ್ರಾಮದ  ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(Sahydari Tiger Reserve) ಬಂಗಾಳ ಮಾನಿಟರ್ ಹಲ್ಲಿಯ (bengal monitor lizard ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್‌ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ.ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ…

Read More

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ  ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಬೇ ಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ : ಮುಂದಿನ ವರ್ಷದಿಂದ 287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ತರುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಮಂಡಳಿಯ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಈಡಿಗರ ಸಭಾಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ…

Read More

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More