ಭದ್ರಾವತಿ ನಗರದಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿ : ಶಾಲೆಗಳಿಗೆ ರಜೆ ಘೋಷಣೆ
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ರವರು ಆದೇಶ ಹೊರಡಿಸಿದ್ದಾರೆ. ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು…