ಅಕ್ರಮ ಮರಳು ಗಣಿಗಾರಿಕೆಯ ವಿರುದ್ದ ಭೂ ವಿಜ್ಞಾನ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ : ಎರಡು ಲಾರಿ,ಎರಡು ಜೆಸಿಬಿ ವಶಕ್ಕೆ..!!
ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಕಲ್ಲು ಗಣಿಗಾರಿಕೆಗಳು ತಾರಕಕ್ಕೇರಿದ್ದು ಅದರಂತೆ ಶಿವಮೊಗ್ಗದ ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ನವೀನ್ ವಿ.ಎಸ್ ನೇತೃತ್ವದ ತಂಡ ನಂಜವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ತುಂಬಿದ ಎರಡು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಹಾಗೇಯೆ ಆನಂದಪುರದಲ್ಲಿ ಅಕ್ರಮ ಜಂಬಿಟ್ಟಿಗೆ ನಡೆಸುತ್ತಿದ್ದ ಗಣಿಗಾರಿಕೆಗೆ ನುಗ್ಗಿ ಅಕ್ರಮಕ್ಕೆ ಬಳಸಿದ್ದ ಎರಡು ಜೆಸಿಬಿ ವಶ ಪಡಿಸಿಕೊಂಡು ಒಟ್ಟು ಎರಡು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಕ್ರಮ ಮರಳು ಮಾಫ಼ಿಯಾ ನಡೆಸುವವರಿಗೆ ಎಚ್ಚರಿಕೆ: ಹೊಸನಗರ ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮವಾಗಿ…